Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಬ್ಬನ್ ಪಾರ್ಕ್ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಸರ್ಜಾ
ನಟಿ ಶ್ರುತಿ ಹರಿಹರನ್ ನೀಡಿರುವ ಲೈಂಗಿಕ ಕಿರುಕುಳ ದೂರಿಗೆ ಸಂಬಂಧಪಟ್ಟಂತೆ ಬಹುಭಾಷಾ ನಟ ಅರ್ಜುನ್ ಸರ್ಜಾ ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಹಾಜರ್ ಆಗಿದ್ದಾರೆ. ಈ ವೇಳೆ ಅರ್ಜುನ್ ಸರ್ಜಾಗೆ ಅಳಿಯಂದಿರಾದ ಚಿರಂಜೀವಿ ಸರ್ಜಾ ಮತ್ತು ಧ್ರುವ ಸರ್ಜಾ ಸಾಥ್ ನೀಡಿದ್ದು, ಜೊತೆಯಲ್ಲಿ ಠಾಣೆಗೆ ಆಗಮಿಸಿದ್ದರು.
ಶ್ರುತಿ ಮಾಡಿರುವ ಆರೋಪದ ಹಿನ್ನೆಲೆ ಪೊಲೀಸರು ಸರ್ಜಾಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಪೊಲೀಸರ ಸೂಚನೆಯಂತೆ ಅರ್ಜುನ್ ಸರ್ಜಾ ಇಂದು ಬೆಳಿಗ್ಗೆ ಠಾಣೆಗೆ ಹಾಜರಾಗಿ ವಿವರಣೆ ನೀಡಿದ್ದಾರೆ. ತನಿಖಾಧಿಕಾರಿ ಅಣ್ಣಯ್ಯ ರೆಡ್ಡಿ ಮತ್ತು ಎಸ್ ಐ ರೇಣುಕಾ ಅವರು ವಿಚಾರಣೆ ನಡೆಸಲಿದ್ದಾರೆ.
#ಮೀಟೂ ಫೈಟ್: ಅರ್ಜುನ್ ಸರ್ಜಾಗಿಲ್ಲ ಬಂಧನದ ಭೀತಿ.!
2015ರಲ್ಲಿ 'ವಿಸ್ಮಯ' ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಹಾಗೂ ಚಿತ್ರೀಕರಣ ಮುಗಿದ ನಂತರ ಕಿರುಕುಳ ನೀಡಿದ್ದರು ಎಂದು ಆರೋಪಿಸಿ ದೂರು ನೀಡಿದ್ದರು. ಶ್ರುತಿ ಹರಿಹರನ್ ನೀಡಿರುವ ಈ ದೂರಿನ ಅನ್ವಯ ಸರ್ಜಾ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.
ಸರ್ಜಾ ವಿಷ್ಯದಲ್ಲಿ ಶ್ರುತಿ ಹೀಗೆ ಮಾಡಬಹುದಿತ್ತು, ಯಾಕೆ ಮಾಡಿಲ್ಲ: ಗುರು ಪ್ರಸಾದ್
ನಂತರ ಕಿರುಕುಳ ನಡೆದಿದೆ ಎನ್ನಲಾದ ಮೂರು ಸ್ಥಳಗಳಲ್ಲಿ ಮಹಜರು ಪ್ರಕ್ರಿಯೆ ನಡೆಸಿದ್ದರು. ನಟಿ ದೂರಿನಲ್ಲಿ ಪ್ರಸ್ತಾಪಿಸಿದ್ದ ಐವರು ಸಾಕ್ಷಿಗಳ ಹೇಳಿಕೆಯನ್ನು ಕೂಡ ಪೊಲೀಸರು ಪಡೆದುಕೊಂಡಿದ್ದಾರೆ. ಈಗ ಅರ್ಜುನ್ ಸರ್ಜಾ ಅವರ ಹೇಳಿಕೆಯನ್ನ ಪಡೆಯುತ್ತಿದ್ದಾರೆ.
ಪತಿವ್ರತೆ ಅಂತ ಸಾಬೀತು ಮಾಡೋಕೆ 'ಮೀಟೂ': ಗುರುಪ್ರಸಾದ್ ಫೈರ್.!
ಈ ಮಧ್ಯೆ ಅರ್ಜುನ್ ಸರ್ಜಾ ಅವರನ್ನ ಬಂಧಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಹಾಗಾಗಿ, ಸರ್ಜಾಗೆ ಬಂಧನದ ಬೀತಿಯಿಲ್ಲ. ಕೇವಲ ವಿಚಾರಣೆ ಎದುರಿಸಿ, ವಾಪಸ್ ಆಗಬಹುದು. ನಂತರ ಕೋರ್ಟ್ ಆದೇಶದ ಮೆರೆಗೆ ನಡೆದುಕೊಳ್ಳಬೇಕಾಗುತ್ತೆ.