Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗುವಾಗಿ ನೀನು ನಮ್ಮ ಮಡಿಲಿಗೆ ಬಂದ್ಬಿಡು ಕಂದ: ಕುಟುಂಬಸ್ಥರಿಂದ ಚಿರುಗೆ ಭಾವನಾತ್ಮಕ ಪತ್ರ
ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಹಠಾತ್ ಅಗಲಿಕೆಯೆ ಆಘಾತದಿಂತ ಇಡೀ ಕುಟುಂಬ ಇನ್ನೂ ಹೊರಬಂಗದಿಲ್ಲ. ಚಿರು ಇನ್ನಿಲ್ಲ ಎನ್ನುವ ಸತ್ಯವನ್ನು ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಚಿರು ಕಳೆದುಕೊಂಡು ಇಡೀ ಕುಟುಂಬ ನೋವಿನಲ್ಲಿದೆ. ಚಿರು ನೆನಪು ಅವರನ್ನು ಪದೇ ಪದೇ ಕಾಡುತ್ತಿದೆ.
Recommended Video
ಚಿರು ನಿಧನಹೊಂದಿ 11 ದಿನ ಕಳೆದಿದೆ. ಇಂದು 11ನೇ ದಿನದ ಪುಣ್ಯ ತಿಥಿ ಮಾಡಲಾಗುತ್ತಿದೆ. ಚಿರು ಸರ್ಜಾ ಅಂತ್ಯಕ್ರಿಯೆ ನಡೆದ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರು ಸರ್ಜಾ ಪುಣ್ಯತಿಥಿ ನಡೆಯಲಿದೆ. ಚಿರು ಇಲ್ಲದೆ 11 ದಿನಗಳನ್ನು ಕಳೆದ ಸರ್ಜಾ ಕುಟುಂಬ ಚಿರು ಬಗ್ಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಮುಂದೆ ಓದಿ..
ಚಿರಂಜೀವಿ ಸರ್ಜಾ 11ನೇ ದಿನದ ಪುಣ್ಯತಿಥಿ: ಕುಟುಂಬದಿಂದ ಮಾಧ್ಯಮಗಳಿಗೆ ಮನವಿ
ಅರ್ಜುನ್ ಸರ್ಜಾ ಭಾವನಾತ್ಮಕ ಮಾತು
ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್ ಮಾಡುವ ಜೊತೆಗೆ ಅರ್ಜುನ್ ಸರ್ಜಾ ಭಾವನಾತ್ಮಕ ಮಾತು ಕೇಳಿದ್ರೆ ಅಭಿಮಾನಿಗಳ ಕಣ್ಣು ಒದ್ದೆಯಾಗದೆ ಇರದು. ಕಣ್ಣು ಮುಚ್ಚಿದ್ರು ನೀನೆ, ಕಣ್ಣು ತೆರೆದ್ರು ನೀನೆ, ನಿನ್ನ ನಗು ಮುಖ ಸದಾ ಕಾಡುತ್ತೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ಮೇಘನಾ ರಾಜ್ ಭೇಟಿಯಾಗಿ ಧೈರ್ಯ ತುಂಬಿದ ರಾಘವೇಂದ್ರ ರಾಜ್ ಕುಮಾರ್ ಕುಟುಂಬ
ಕಣ್ಣು ಮುಚ್ಚಿದ್ರು ನೀನೆ, ಕಣ್ಣು ತೆರೆದ್ರು ನೀನೆ
"ನಿನ್ನ ಮನಸ್ಸಿಗೆ ಯಾರಾದ್ರು ಬೇಜಾರು ಮಾಡಿದ್ರೆ, ನೀನು ಕೊಪ ಮಾಡ್ಕೊಂಡು ಸ್ವಲ್ಪ ಮಾತಾದಡ್ಡಿದ್ರು, ನಮ್ಮನ್ನು ಬೈಕೊಂಡಿದ್ರು, ನಮ್ಗೆ ಹೇಳ್ದೆ ಯಾವ್ದಾರು ಊರಿಗೆ ಹೋಗಿ ಬಂದಿದ್ರು ಪರವಾಗಿರ್ತಿರ್ರಿಲ್ಲ. ಆದರೆ ವಾಪಸ್ಸೇ ಬರಕ್ಕಾಗ್ದಿರೊ ಅಂತ ಊರಿಗೆ ಹೋಗಿ ನಮ್ಗೆಲ್ಲಾ ಇಂತ ಶಿಕ್ಷೆ ಕೊಟ್ಟಲ್ಲಪ್ಪ. ಕಣ್ಣು ಮುಚ್ಚಿದ್ರು ನೀನೆ, ಕಣ್ಣು ತೆರೆದ್ರು ನೀನೆ, ನಿನ್ನ ನಗು ಮುಖ, ಸರಿ ಸ್ವಲ್ಪ ದಿನ ಆದ್ಮೇಲೆ ಮರ್ತುಬಿಡ್ತಾರೆ ಅಂತ ನೀನು ತಿಳ್ಕೊಂಡಿದ್ರೆ ಅದು ಸುಳ್ಳು, ನಮ್ಮೆಲ್ಲರಿಗೂ ಇದು ದೊಡ್ಡ ಗಾಯ, ಆದರೆ ಇರೊ ಅಂತ ಗಾಯ. ಯಾವಾಗ್ಲೂ ನೀನು ನಮ್ಮ ಮನಸ್ಸಲ್ಲಿ, ಹೃದಯದಲ್ಲೇ ಇರ್ತಿಯ ಕಂದ" ಎಂದು ಬರೆದಿದ್ದಾರೆ.
ಮಗುವಾಗಿ ನಮ್ಮ ಮಡಿಲಿಗೆ ಬಂದ್ಬಿಡು ಕಂದ
"ನಿನ್ನ ತಾತ ನಿಂಗೆ ಚಿರಂಜೀವಿ ಅಂತ ಹೆಸರಿಟ್ರು ಅದ್ಯಾವತ್ತು ಸುಳ್ಳಾಗಲಿಲ್ಲ. ನಿನ್ನ ಮಾತು, ನಿನ್ನ ಚಿರುನಗು, ನಿನ್ನ ನೆನಪು, ನಮ್ಮ ಸಂಬಂಧ ಯಾವಾಗ್ಲೂ ಚಿರಂಜೀವಿಯಾಗೇ ಇರುತ್ತೆ ಬಂಗಾರ. ಚಿರು ಎಲ್ರು ಹೇಳ್ತಾರೆ ಈ ನೋವನ್ನ ತಡ್ಕೊಳ್ಳೊ ಶಕ್ತಿ ಆ ದೇವರು ನಿಮ್ಮ ಇಡೀ ಕುಟುಂಬಕ್ಕೆ ಕೊಡ್ಬೇಕು ಅಂತ. ಆದರೆ ಅದು ನಿನ್ನ ಕೈಯ್ಯಲ್ಲೇ ಇದೆ ಹೇಗೆ ಅಂದ್ರೆ, ನೀನೆ ನಿನ್ನ ಮಗುವಾಗಿ ನಮ್ಮ ಮಡಿಲಿಗೆ ಬಂದ್ಬಿಡು ಕಂದ. ಆ ಮಗು ನಗುವಿನಲ್ಲೆ ನಿನ್ನ ನೋಡ್ತೀವಿ ದಯವಿಟ್ಟು"
11ನೇ ದಿನದ ಪುಣ್ಯತಿಥಿ
ಚಿರು ಸರ್ಜಾ ನಿಧನಹೊಂದಿ 11 ದಿನದಗಳು ಕಳೆದಿವೆ. ಇಂದು ಕುಟುಂಬದವರು ಪುಣ್ಯತಿಥಿ ಕಾರ್ಯ ಮಾಡುತ್ತಿದ್ದಾರೆ. ಖಾಸಗಿ ಕಾರ್ಯಕ್ರಮವಾದ್ದರಿಂದ ಮಾಧ್ಯಮಗಳವರು ಕ್ಯಾಮೆರಾ ತರಬಾರದು ಎಂದು ಮನವಿ ಮಾಡಲಾಗಿದೆ. ಕ್ಯಾಮೆರಾ ಇಲ್ಲದೆ ಹಾಗೆಯೇ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ.