Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂ. ಚಿರುಗೆ ಆಂಜನೇಯನ ದರ್ಶನ ಮಾಡಿಸಿದ ಅರ್ಜುನ್ ಸರ್ಜಾ
ಖ್ಯಾತ ನಟ ಅರ್ಜುನ್ ಸರ್ಜಾ ಕಂಡಿದ್ದ ಬಹು ವರ್ಷಗಳ ಕನಸಾದ ಸಂತಸಾದ ಸಂತಸದಲ್ಲಿದ್ದಾರೆ. ಅರ್ಜುನ್ ಸರ್ಜಾ ನಿರ್ಮಿಸಿರುವ ಆಂಜನೇಯ ದೇಗುಲ ಇತ್ತೀಚಿಗಷ್ಟೆ ಲೋಕಾರ್ಪಣೆಯಾಗಿದೆ.
ಆಂಜನೇಯ ಸ್ವಾಮಿ ದೇವಸ್ಥಾನ ನಿರ್ಮಿಸಬೇಕು ಎಂಬುದು ಅರ್ಜುನ್ ಸರ್ಜಾರ ಅನೇಕ ವರ್ಷಗಳ ಕನಸು. ಆ ಕನಸು ಇದೀಗ ಈಡೇರಿದೆ. ಚೆನ್ನೈನ ಗುರುಗಂಬಕ್ಕಮ್ ನಲ್ಲಿ ಅರ್ಜುನ್ ಸರ್ಜಾ ಬೃಹತ್ತಾದ ಆಂಜನೇಯ ಸ್ವಾಮಿ ದೇವಾಲಯ ನಿರ್ಮಿಸಿದ್ದಾರೆ.
ಜುಲೈ 1ರಂದು ನಡೆದ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಅರ್ಜುನ್ ಸರ್ಜಾ ಇಡೀ ಕುಟುಂಬ ಭಾಗಿಯಾಗಿತ್ತು. ಪೂಜೆ, ಹೋಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹನುಮನ ದೇವಸ್ಥಾನವನ್ನು ಉದ್ಘಾಟನೆ ಮಾಡಲಾಯಿತು. ಈ ಸಮಾರಂಭಕ್ಕೆ ಎಲ್ಲರನ್ನೂ ಆಹ್ವಾನಿಸಲು ಸಾಧ್ಯವಿಲ್ಲ ಎಂದು ಉದ್ಘಾಟನಾ ಸಮಾರಂಭವನ್ನು ಲೈವ್ ಮೂಲಕ ವೀಕ್ಷಿಸುವ ಅವಕಾಶ ಕಲ್ಪಿಸಿಕೊಡಲಾಗಿತ್ತು.
ಬೆಂಗಳೂರಿನಿಂದ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಸೇರಿದಂತೆ ಇಡೀ ಕುಟುಂಬ ಚೆನ್ನೈಗೆ ತೆರಳಿದ್ದರು. ಆದರೆ ಜೂ. ಚಿರು ಉದ್ಘಾಟನಾ ಸಮಾರಂಭಕ್ಕೆ ಗೈರಾಗಿದ್ದರು. ಕೊರೊನಾ ಕಾರಣದಿಂದ ಜೂ. ಚಿರು ಮತ್ತು ಮೇಘನಾ ಕಾರ್ಯಕ್ರಮದಲ್ಲಿ ಭಾಗಿಯಾಗದೆ ಬೆಂಗಳೂರಿನಲ್ಲೇ ಇದ್ದರು.
ಆದರೆ ಅರ್ಜುನ್ ಸರ್ಜಾ, ಜೂ. ಚಿರುಗೆ ಚೆನ್ನೈನಿಂದನೇ ದೇವಸ್ಥಾನದ ದರ್ಶನ ಮಾಡಿಸಿದ್ದಾರೆ. ವಿಡಿಯೋ ಕಾಲ್ ಮೂಲಕ ಜೂ. ಚಿರುಗೆ ತನ್ನ ಕನಸಿನ ದೇವಸ್ಥಾನ ತೋರಿಸಿದ್ದಾರೆ. ಜೂ. ಚಿರು ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ ಸ್ಕ್ರೀನ್ ಶಾಟ್ ಶೇರ್ ಮಾಡಿ, "ಜೂ. ಚಿರುಗಾಗಿ ದೇವಸ್ಥಾನದ ಟೂರ್. ಕೊರೊನಾ ಕಾರಣದಿಂದ ಕುಂಭಾಭಿಷಕದಲ್ಲಿ ಭಾಗಿಯಾಗಲು ಸಾಧ್ಯವಾಗಿರಲಿಲ್ಲ" ಎಂದು ಬರೆದುಕೊಂಡಿದ್ದಾರೆ.
Recommended Video
ಕೊರೊನಾ ಕಾರಣದಿಂದಾಗಿ ಕಡಿಮೆ ಮಂದಿ ಅತಿಥಿಗಳು, ಕುಟುಂಬ ಸದಸ್ಯರ ಸಮ್ಮುಖದಲ್ಲಿ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ನಡೆದಿದೆ. ಸದ್ಯದಲ್ಲೇ ದೇವಸ್ಥಾನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತೆ.