Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆಲೆಬ್ರೆಟಿಗಳಲ್ಲಿ ಹೆಚ್ಚಿದ ಕೋವಿಡ್ ಪ್ರಕರಣಗಳು: ಯಾರಿಗೆಲ್ಲಾ ವಕ್ಕರಿಸಿದೆ ಕೊರೊನಾ?
ಕೊರೊನಾ ಪ್ರಕರಗಳು ಕಡಿಮೆ ಆಗುತ್ತಲೇ ಜನ ಮೈ ಮರೆಯುತ್ತಿದ್ದಾರೆ. ಆದರೆ ಈಗ ಮತ್ತೆ ಕೊರೊನಾ ಹಾವಳಿ ಆರಂಭ ಆಗಿದೆ. ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುತ್ತಿದೆ. ರೂಪಾಂತರಿ ಕೊರೊನ ಓಮಿಕ್ರಾನ್ ರೂಪದಲ್ಲೂ ದೇಹ ಹೊಕ್ಕುತ್ತಿದೆ. ಇತ್ತೀಚೆಗೆ ಕೊರೊನಾ ಪ್ರಕರಣಗಳಲ್ಲಿ ಸಿನಿಮಾ ಮಂದಿಯ ಹೆಸರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಕರೀನಾ ಬಳಿಕಾ ಈಗ ಸೌತ್ ನಟನಿಗೆ ಕೊರೊನಾ ಬಂದಿದೆ.
ಸೆಲೆಬ್ರಿಟಿಗಳಲ್ಲಿ ಕೊರೊನಾ ಪಾಸಿಟಿವ್ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ನಟಿ ಕರೀನಾ ಕಪೂರ್ ಅವರಿಗೆ ಕೋವಿಡ್ ಸೋಂಕು ತಗಲಿರುವ ವಿಷಯ ಬಹಿರಂಗ ಆಗಿತ್ತು. ಈಗ ನಟ ಅರ್ಜುನ್ ಸರ್ಜಾ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಸದ್ಯ ತಮ್ಮ ಆರೋಗ್ಯ ಸ್ಥಿತಿ ಹೇಗಿದೆ ಎಂಬುದನ್ನು ಅವರು ತಿಳಿಸಿದ್ದಾರೆ. ಜೊತೆಗೆ ಎಲ್ಲರಲ್ಲೂ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.
ಅರ್ಜುನ್ ಸರ್ಜಾ ರಿಯಾಲಿಟಿ ಶೋ ಒಂದರ ನಿರೂಪಕರಾಗಿದ್ದು, ಅದರ ಫಿನಾಲೆ ಕಾರ್ಯಕ್ರಮ ಇತ್ತೀಚೆಗಷ್ಟೇ ನಡೆದಿತ್ತು. ಚಿತ್ರೀಕರಣ ಮುಗಿದ ಬಳಿಕ ಅವರಿಗೆ ಕಡ್ಡಾಯವಾಗಿ ಕೊವಿಡ್ ಪರೀಕ್ಷೆ ಮಾಡಿಸಲಾಯಿತು. ಆಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮ್ಮ ಜತೆ ಇತ್ತೀಚಿನ ದಿನಗಳಲ್ಲಿ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅರ್ಜುನ್ ಸರ್ಜಾ ಮಾಹಿತಿ ರವಾನಿಸಿದ್ದಾರೆ.
"ಎಲ್ಲರಿಗೂ ಹಾಯ್, ನನಗೆ ಕೊವಿಡ್ ಪಾಸಿಟಿವ್ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಾನು ಈಗ ಚೆನ್ನಾಗಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಿ. ಮಾಸ್ಕ್ ಧರಿಸುವುದನ್ನು ಮರೆಯಬೇಡಿ. ರಾಮ ಭಕ್ತ ಹನುಮಾನ್ ಕಿ ಜೈ" ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅರ್ಜುನ್ ಸರ್ಜಾ ಬರೆದುಕೊಂಡಿದ್ದಾರೆ.
ಈ ಮೂಲಕ ತಮ್ಮ ಸಂಪರ್ಕಕ್ಕೆ ಬಂದವರು ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ. ಆದರೆ ಕರೀನಾ ಕಪೂರ್ ವಿಚಾರದಲ್ಲಿ ಇದು ಉಲ್ಟಾ ಆಗಿತ್ತು. ಕೊರೊನಾ ಇದ್ದರೂ ಹಲವರ ಸಂಪರ್ಕಕ್ಕೆ ಕರೀನಾ ಬಂದಿದ್ದರು. ಹಾಗಾಗಿ ಆಕೆಯ ಸಂಪರ್ಕಕ್ಕೆ ಬಂದವರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಇನ್ನು ನಟ ಕಮಲ್ ಹಾಸನ್ ಕೂಡ ಕೊರೊನಾ ಬಳಿಕ ಚೇತರಿಸಿಕೊಂಡಿದ್ದಾರೆ.