Don't Miss!
- News 140 ಕೋಟಿ ಜನ ನಿಮ್ಮನ್ನು ತಿರಸ್ಕರಿಸಿರುವುದರಲ್ಲಿ ಅಚ್ಚರಿ ಏನಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕೆ
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತನ್ನ ವಾಹನವನ್ನು ರೋಗಿಗಳ ಉಪಯೋಗಕ್ಕೆ ಬಳಸಲು ನೀಡಿದ ನಟ
ಕೊರೊನಾ ಸಂಕಷ್ಟದ ಸಮಯದಲ್ಲಿ ಹಲವಾರು ಸೆಲೆಬ್ರಿಟಿಗಳು ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡುತ್ತಿದ್ದಾರೆ.
Recommended Video
ಇದೀಗ ಕನ್ನಡದ ಯುವ ನಟರೊಬ್ಬರು ಕೊರೊನಾ ಸಮಯದಲ್ಲಿ ತಮ್ಮ ವಾಹವನ್ನು ಉಚಿತವಾಗಿ ಎನ್ಜಿಓ ಒಂದಕ್ಕೆ ನೀಡಿದ್ದು ಆಮ್ಲಜನಕ ಸಾಗಣೆ, ಔಷಧ ಸಾಗಣೆ ಇತರೆ ಕಾರಣಗಳಿಗೆ ಬಳಸಿಕೊಳ್ಳಲು ಕೊಟ್ಟಿದ್ದಾರೆ.
ಪುನೀತ್ ರಾಜ್ಕುಮಾರ್ ನಟನೆಯ 'ಯುವರತ್ನ' ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ಯುವ ನಟ ಅರುಣ್ ಗೌಡ ಅವರು ತಮ್ಮ ಟಾಟಾ ಏಸ್ ವಾಹವನ್ನು 'ಲೆಟ್ಸ್ ಬಿ ದಿ ಚೇಂಜ್' ಹೆಸರಿನ ಎನ್ಜಿಓಗೆ ನೀಡಿದ್ದಾರೆ. ಆಮ್ಲಜನಕ ಸಿಲಿಂಡರ್ ಸಾಗಣೆ ಸೇರಿದಂತೆ ಹಲವು ಕಾರಣಗಳಿಗೆ ಆ ವಾಹವನ್ನು ಎನ್ಜಿಓ ಬಳಸಿಕೊಳ್ಳಲಿದೆ.
ಈ ಸಂದರ್ಭದಲ್ಲಿ ಮಾತನಾಡಿರುವ ಅರುಣ್ ಗೌಡ, 'ಕೊರೊನಾದಂಥಹಾ ಕ್ಲಿಷ್ಕಕರ ಸನ್ನಿವೇಶದಲ್ಲಿ ಎಲ್ಲರೂ ಒಂದೊಂದು ರೀತಿಯಲ್ಲಿ ಸಹಾಯ ಮಾಡಬೇಕಿದೆ. ನನ್ನದು ಅರು ಗೌಡ ಫೌಂಡೇಶನ್ ಎಂಬ ಸೇವಾ ಸಂಸ್ಥೆ ಇದೆ. ಅದರ ಮೂಲಕ ಕೆಲವು ಸೇವಾ ಕಾರ್ಯಗಳನ್ನು ಮಾಡುತ್ತಿದ್ದೇನೆ. ಇಂದು 'ಲೆಟ್ಸ್ ಬಿ ದಿ ಚೇಂಜ್' ಎನ್ಜಿಓ ಜೊತೆಗೆ ನಾನು ಕೈಜೋಡಿಸಿ ನನ್ನ ಬಳಕೆಗೆ ಇಟ್ಟುಕೊಂಡಿದ್ದ ಟಾಟಾ ಏಸ್ ವಾಹನವನ್ನು ಅವರಿಗೆ ನೀಡಿದ್ದೇನೆ' ಎಂದಿದ್ದಾರೆ.
'ಕೊರೊನಾದಂಥಹಾ ಕ್ಲಿಷ್ಟಕರ ಸನ್ನಿವೇಶದಲ್ಲಿ ಎಲ್ಲರಿಗೂ ಸಹಾಯ ಮಾಡುವ ಮನಸ್ಸಿರುತ್ತದೆ. ಆದರೆ ಎಲ್ಲರಿಗೂ ಅದು ಸಾಧ್ಯವಾಗುವುದಿಲ್ಲ. ಆಗ ಚೆನ್ನಾಗಿ ಕೆಲಸ ಮಾಡುತ್ತಿರುವ ಎನ್ಜಿಓಗಳಿಗೆ, ಸೇವಾ ಸಂಸ್ಥೆಗಳಿಗೆ ನಾವು ಬೆಂಬಲ ನೀಡಬೇಕು. ಅವರೊಟ್ಟಿಗೆ ಕೈ ಜೋಡಿಸಬೇಕು' ಎಂದಿದ್ದಾರೆ ಅರುಣ್ ಗೌಡ.
ಕೊರೊನಾಕ್ಕೆ ಸಂಬಂಧಿಸಿದಂತೆ ಆಮ್ಲಜನಕ, ಬೆಡ್ ಸಮಸ್ಯೆ, ಊಟ ಏನೇ ಬೇಕಾದರು 'ಲೆಟ್ ಬಿ ದಿ ಚೇಂಜ್' ಸೇವಾ ಸಂಸ್ಥೆಯನ್ನು ಸಂಪರ್ಕಿಸಬಹುದು. ಈಗಾಗಲೇ ಕೊರೊನಾ ಬಂದು ವಾಸಿಯಾಗಿರುವವರು ಸಹ ತಮ್ಮ ಔಷಧಗಳು, ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಇವರಿಗೆ ಕೊಟ್ಟರೆ ಅಗತ್ಯ ಇರುವವರಿಗೆ ತಲುಪಿಸುತ್ತಾರೆ' ಎಂದಿದ್ದಾರೆ.
ರಿಯಾಲಿಟಿ ಶೋ ಮೂಲಕ ಚಿತ್ರರಂಗಕ್ಕೆ ಬಂದ ಅರುಣ್ ಗೌಡ ಅವರು ಪತಿ ಬೇಕು ಡಾಕ್ ಕಾಮ್, 'ವಿರಾಟಪರ್ವ' ಸಿನಿಮಾಗಳಲ್ಲಿ ನಟಿಸಿದ್ದಾರೆ. ಯುವರತ್ನ ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದರು.