Don't Miss!
- Finance ಐಪಿಎಲ್ನಲ್ಲಿ ಸಂಚಲನ ಸೃಷ್ಟಿಸುತ್ತಿರುವ ಕಾವ್ಯಾ ಮಾರನ್ ಯಾರು, ಅವರ ಹಿನ್ನೆಲೆ ತಿಳಿಯಿರಿ
- News ಶಾಸಕ ವಸಂತ್ ಆಸ್ನೋಟಿಕರ್ ಶೌಟೌಟ್ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ ಕಾಯಂ
- Automobiles Bengaluru: ಇಂದಿನಿಂದ ಹೆಬ್ಬಾಳ ಮೇಲ್ಸೇತುವೆ ಮೇಲೆ ಈ ವಾಹನಗಳ ಸಂಚಾರ ಬಂದ್.. ಪರ್ಯಾಯ ಮಾರ್ಗಗಳಾವುವು?
- Technology OnePlus: ಒನ್ಪ್ಲಸ್ 11R ಸೋಲಾರ್ ರೆಡ್ ವೇರಿಯಂಟ್ ಏಪ್ರಿಲ್ 18 ರಿಂದ ಸೇಲ್! ಆಫರ್ ಏನಿದೆ?
- Sports KKR vs RR: ಐಪಿಎಲ್ನ ಶತಕಗಳ ಪಟ್ಟಿಯಲ್ಲಿ ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ ಜೋಸ್ ಬಟ್ಲರ್
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅದಿತಿ ಪ್ರಭುದೇವ ಸಿನಿಮಾಗೆ ಅತಿಥಿಯಾಗಿ ಬಂದ ಆರ್ಯ
ಒಂದರ ನಂತರ ಒಂದು ಸಿನಿಮಾಗಳಲ್ಲಿ ತೊಡಗಿರುವ 'ಟಾಪ್ ಹುಡುಗಿ' ಅದಿತಿ ಪ್ರಭುದೇವ ಈಗ ಮತ್ತೊಂದು ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮುಹೂರ್ತ ನಿನ್ನೆ (ಗುರುವಾರ) ನಡೆದಿದೆ.
'ರಂಗನಾಯಕಿ' ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
ಈ ಹೊಸ ಸಿನಿಮಾಗೆ 'ಒಂಬತ್ತನೇ ದಿಕ್ಕು' ಎನ್ನುವ ಶೀರ್ಷಿಕೆ ಇಡಲಾಗಿದೆ. ಲೂಸ್ ಮಾದ ಯೋಗಿ ಸಿನಿಮಾದ ನಾಯಕನಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ತಮಿಳು ನಟ ಆರ್ಯ ಭಾಗಿಯಾಗಿದ್ದರು. ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಶುಭ ಹಾರೈಸಿದರು.
'ಒಂಬತ್ತನೇ ದಿಕ್ಕು' ದಯಾಳ್ ಪದ್ಮನಾಭನ್ ನಿರ್ದೇಶನದ ಹೊಸ ಸಿನಿಮಾ. 'ರಂಗನಾಯಕಿ' ಚಿತ್ರ ಬಿಡುಗಡೆಗೆ ಮೊದಲೇ ಮತ್ತೆ ಅದಿತಿ ಜೊತೆಗೆ ದಯಾಳ್ ಮತ್ತೊಂದು ಸಿನಿಮಾ ಶುರು ಮಾಡಿದ್ದಾರೆ. ಈ ಚಿತ್ರವನ್ನು ಗುರುದೇಶಪಾಂಡೆ ನಿರ್ಮಾಣ ಮಾಡುತ್ತಿದ್ದಾರೆ. ವರ್ಷಗಳ ನಂತರ ಮತ್ತೆ ಲೂಸ್ ಮಾದ ಯೋಗಿ ಸಿನಿಮಾ ಮಾಡುತ್ತಿದ್ದಾರೆ.
ಈ ಹಿಂದೆ ಕನ್ನಡದ 'ರಾಜರಥ' ಸಿನಿಮಾದಲ್ಲಿ ಆರ್ಯ ಒಂದು ಪಾತ್ರ ಮಾಡಿದ್ದರು. ಇದೀಗ 'ಒಂಬತ್ತನೇ ದಿಕ್ಕು' ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.