twitter
    For Quick Alerts
    ALLOW NOTIFICATIONS  
    For Daily Alerts

    ಅನಾರೋಗ್ಯದ ಹಿನ್ನಲೆ ನಟ ದರ್ಶನ್ ಆಸ್ಪತ್ರೆಗೆ ದಾಖಲು

    |

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಥರದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ದರ್ಶನ್ ಅವರನ್ನು ಇಂದು ಬೆಳಗ್ಗೆ 4 ಗಂಟೆಗೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸುಧಾರಿಸಿದ್ದು ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ಹೇಳಲಾಗಿದೆ.

    Recommended Video

    ಡಿ ಬಾಸ್ ಗೆ ಹೊಟ್ಟೆನೋವು ಬಂದಿದ್ಯಾಕೆ? | Darshan | Roberrt | Filmibeat Kannada

    ಗ್ಯಾಸ್ಟ್ರಿಕ್ ಹೆಚ್ಚಾಗಿದ್ದು, ಇಂದು ಒಂದು ದಿನ ಆಸ್ಪತ್ರೆಯಲ್ಲಿಯೆ ಉಳಿಯ ಬೇಕು ಎಂದು ವೈದ್ಯರು ಸೂಚಿಸಿದ್ದಾರಂತೆ. ವೈದ್ಯರ ಸಲಹೆ ಮೇರೆಗೆ ದರ್ಶನ್ ಇಂದು ಆಸ್ಪತ್ರೆಯಲ್ಲಿಯೆ ತಂಗಲಿದ್ದಾರೆ. ಕೊಲಂಬಿಯಾ ಏಷಿಯಾ ಆಸ್ಪತ್ರೆಯ ವಿಶೇಷ ವಾರ್ಡ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

    ದರ್ಶನ್ 'ರಾಜವೀರ ಮದಕರಿ ನಾಯಕ' ಸೆಟ್‌ನಿಂದ ಹೊರಬಿದ್ದ ಲೇಟೆಸ್ಟ್ ಸುದ್ದಿದರ್ಶನ್ 'ರಾಜವೀರ ಮದಕರಿ ನಾಯಕ' ಸೆಟ್‌ನಿಂದ ಹೊರಬಿದ್ದ ಲೇಟೆಸ್ಟ್ ಸುದ್ದಿ

    ದರ್ಶನ್ ಮದಕರಿ ನಾಯಕ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಬರ್ಟ್ ಚಿತ್ರದ ಪ್ರಮುಖ ಹಾಡಿನ ಚಿತ್ರೀಕರಣ ಕೂಡ ಭಾಕಿ ಉಳಿದಿದೆ. ರಾಬರ್ಟ್ ಹಾಡಿನ ಚಿತ್ರೀಕರಣಕ್ಕಾಗಿ ದರ್ಶನ್ ಅಂಡ್ ತಂಡ ವಿದೇಶಕ್ಕೆ ತೆರಳಬೇಕಿತ್ತು, ಆದರೆ ಕೊರೊನಾ ವೈರಸ್ ಭೀತಿಯ ಹಿನ್ನಲೆ ವಿದೀಶಿ ಚಿತ್ರೀಕರಣ ರದ್ದು ಗೊಳಿಸಿದ್ದಾರೆ.

    Actor Darshan Admitted To Hospital For Stomach Pain

    ಸದ್ಯ ಮದಕರಿನಾಯಕ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಎರಡನೆ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದೆ. ಚಿತ್ರದ ಎರಡನೆ ಹಂತದ ಚಿತ್ರೀಕರಣಕ್ಕೆಂದು ಚಿತ್ರತಂಡ ಹೈದರಾಬಾದ್ ಗೆ ತೆರಳಬೇಕಿತ್ತು. ಆದರೀಗ ಆಸ್ಪತ್ರೆಯಲ್ಲಿ ಇರುವ ಕಾರಣ ಚಿತ್ರೀಕರಣ ಕೊಂಚ ತಡವಾಗುವ ಸಾಧ್ಯತೆ ಇದೆ.

    English summary
    Kannada Actor Darshan admitted to hospital for stomach pain.
    Wednesday, March 4, 2020, 16:33
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X