Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಾರೋಗ್ಯದ ಹಿನ್ನಲೆ ನಟ ದರ್ಶನ್ ಆಸ್ಪತ್ರೆಗೆ ದಾಖಲು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಥರದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ದರ್ಶನ್ ಅವರನ್ನು ಇಂದು ಬೆಳಗ್ಗೆ 4 ಗಂಟೆಗೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸುಧಾರಿಸಿದ್ದು ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ಹೇಳಲಾಗಿದೆ.
Recommended Video
ಗ್ಯಾಸ್ಟ್ರಿಕ್ ಹೆಚ್ಚಾಗಿದ್ದು, ಇಂದು ಒಂದು ದಿನ ಆಸ್ಪತ್ರೆಯಲ್ಲಿಯೆ ಉಳಿಯ ಬೇಕು ಎಂದು ವೈದ್ಯರು ಸೂಚಿಸಿದ್ದಾರಂತೆ. ವೈದ್ಯರ ಸಲಹೆ ಮೇರೆಗೆ ದರ್ಶನ್ ಇಂದು ಆಸ್ಪತ್ರೆಯಲ್ಲಿಯೆ ತಂಗಲಿದ್ದಾರೆ. ಕೊಲಂಬಿಯಾ ಏಷಿಯಾ ಆಸ್ಪತ್ರೆಯ ವಿಶೇಷ ವಾರ್ಡ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ದರ್ಶನ್ 'ರಾಜವೀರ ಮದಕರಿ ನಾಯಕ' ಸೆಟ್ನಿಂದ ಹೊರಬಿದ್ದ ಲೇಟೆಸ್ಟ್ ಸುದ್ದಿ
ದರ್ಶನ್ ಮದಕರಿ ನಾಯಕ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಬರ್ಟ್ ಚಿತ್ರದ ಪ್ರಮುಖ ಹಾಡಿನ ಚಿತ್ರೀಕರಣ ಕೂಡ ಭಾಕಿ ಉಳಿದಿದೆ. ರಾಬರ್ಟ್ ಹಾಡಿನ ಚಿತ್ರೀಕರಣಕ್ಕಾಗಿ ದರ್ಶನ್ ಅಂಡ್ ತಂಡ ವಿದೇಶಕ್ಕೆ ತೆರಳಬೇಕಿತ್ತು, ಆದರೆ ಕೊರೊನಾ ವೈರಸ್ ಭೀತಿಯ ಹಿನ್ನಲೆ ವಿದೀಶಿ ಚಿತ್ರೀಕರಣ ರದ್ದು ಗೊಳಿಸಿದ್ದಾರೆ.
ಸದ್ಯ ಮದಕರಿನಾಯಕ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಎರಡನೆ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದೆ. ಚಿತ್ರದ ಎರಡನೆ ಹಂತದ ಚಿತ್ರೀಕರಣಕ್ಕೆಂದು ಚಿತ್ರತಂಡ ಹೈದರಾಬಾದ್ ಗೆ ತೆರಳಬೇಕಿತ್ತು. ಆದರೀಗ ಆಸ್ಪತ್ರೆಯಲ್ಲಿ ಇರುವ ಕಾರಣ ಚಿತ್ರೀಕರಣ ಕೊಂಚ ತಡವಾಗುವ ಸಾಧ್ಯತೆ ಇದೆ.