Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
6 ದಿನಗಳ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
Recommended Video
ಮೈಸೂರಿನ ಕೊಲಂಬಿಯ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮಧ್ಯಾಹ್ನ 4 ಗಂಟೆಯ ವೇಳೆಗೆ ದರ್ಶನ್ ಅವರ ಡಿಸ್ಚಾರ್ಜ್ ಪ್ರಕ್ರಿಯೆಗಳು ಮುಗಿದಿವೆ.
ಆಸ್ಪತ್ರೆಯಿಂದ ದೇವರಾಜ್ ಮತ್ತು ಪ್ರಜ್ವಲ್ ಡಿಸ್ಚಾರ್ಜ್: ಅಪಘಾತದ ಬಗ್ಗೆ ಏನಂದ್ರು.?
ಕಳೆದ ಸೋಮವಾರ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್, ರಾಯ್ ಆಂಟೋನಿ ಕಾರಿನಲ್ಲಿ ಪ್ರಯಾಣ ಮಾಡುವ ವೇಳೆ ಅಪಘಾತಕ್ಕಿಡಾಗಿದ್ದರು. ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆ ಯಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು.
ವೈದ್ಯರು ನೀಡಿದ ಸಲಹೆಯಿಂದ ದರ್ಶನ್ ಚಿತ್ರಗಳಲ್ಲಿ ಭಾರಿ ಬದಲಾವಣೆ.!
ಘಟನೆಯ ಬಳಿಕ ನಾಲ್ಕು ಜನರು ಕೊಲಂಬಿಯ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಗುರುವಾರ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಡಿಸ್ಜಾರ್ಜ್ ಆಗಿದ್ದು, ನಿನ್ನೆ ರಾಯ್ ಆಂಟೋನಿ ಡಿಸ್ಚಾರ್ಜ್ ಆಗಿದ್ದರು. ಇಂದು ದರ್ಶನ್ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ.
ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ದರ್ಶನ್ ಅವರ ಬಲಗೈನಲ್ಲಿ ಪ್ಲೇಟ್ ಹಾಕಲಾಗಿದೆಯಂತೆ. ಹೀಗಾಗಿ, ಅವರು ಹೆಚ್ಚು ಭಾರದ ವಸ್ತುಗಳನ್ನು ಕೆಲದಿನಗಳ ಕಾಲ ಎತ್ತುವ ಹಾಗಿಲ್ಲ ಎಂದು ವೈದ್ಯರು ಸೂಚನೆ ನೀಡಿದ್ದಾರಂತೆ.
ಅಂದಹಾಗೆ, ದರ್ಶನ್ ಆರೋಗ್ಯವಾಗಿ ಬರಲಿ ಎಂದು ಇಡೀ ಕನ್ನಡ ಚಿತ್ರರಂಗ ಹಾಗೂ ಅವರ ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದರು. ನಿರ್ದೇಶಕ ತರುಣ್ ಸುಧೀರ್, ಸಂದೇಶ್ ನಾಗರಾಜ್, ನಟ ಪ್ರೇಮ್, ರವಿಶಂಕರ್, ಬುಲೆಟ್ ಪ್ರಕಾಶ್ ಸೇರಿದಂತೆ ಅನೇಕರು ಆಸ್ಪತ್ರೆಗೆ ಹೋಗಿ ಆರೋಗ್ಯ ವಿಚಾರಿಸಿದ್ದರು.