Don't Miss!
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪ್ಪಾಜಿ ಬೈಯುತ್ತಿದ್ದ ನೆನಪು ತುಂಬಾ ಕಾಡುತ್ತೆ; ನಟ ದರ್ಶನ್
ರೆಬಲ್ ಸ್ಟಾರ್ ಅಂಬರೀಶ್ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಟಿ ಮತ್ತು ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್, ನಟ ದರ್ಶನ್ ಮತ್ತು ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಸಮಾಧಿಗೆ ಪೂಜೆ ಮಾಡಿ, ಅಂಬರೀಶ್ ಗೆ ಗೌರವ ಸಲ್ಲಿಸಿದರು.
Recommended Video
ಅಂಬರೀಶ್ ಗೆ ಇಷ್ಟದ ತಿನಿಸುಗಳನ್ನು ಇಟ್ಟು ಭಕ್ತಿಯಿಂದ ನೆನಪಿಸಿಕೊಂಡರು. ಪೂಜೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ, ನಟ ದರ್ಶನ್ ಅಪ್ಪಾಜಿ ಯಾವಗಲೂ ಬೈಯುತ್ತಿದ್ದರು, ಭೈಯುವುದನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದರು.
ಅಂಬರೀಶ್ ಪುಣ್ಯಸ್ಮರಣೆ: ಪ್ರೀತಿಯ ಪತಿಗೆ ಹೃದಯಸ್ಪರ್ಶಿ ಪತ್ರ ಬರೆದ ಸುಮಲತಾ
'ಅಪ್ಪಾಜಿ 24 ಗಂಟೆಯೂ ನಮ್ಮ ಜೊತೆ ಇರುತ್ತಾರೆ. ಈ ಸಮಾಧಿ ದೇವಸ್ಥಾನ ಇದ್ದ ಹಾಗೆ. ನಾನು ಈ ಕಡೆ ಬಂದಾಗಲೆಲ್ಲಾ ಸಮಾಧಿಗೆ ಬಂದು ಹೋಗುತ್ತೇನೆ. ನಾನು ಅವರನ್ನು ದೇವರಂತೆ ಪೂಜೆ ಮಾಡುತ್ತೀನಿ' ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಅವರು 'ಬೈಯುವುದನ್ನು ನಾನು ಯಾವಾಗಲು ಮಿಸ್ ಮಾಡಿಕೊಳ್ಳುತ್ತೀನಿ, ಯಾವಾಗಲು ಬೈತಾ ಇದ್ರು, ಆದರೀಗ ಅದು ಇಲ್ಲಾ ಅನ್ನೋ ಬೇಜಾರಿದೆ. ಇಂದು ಆ ವಾಯ್ಸ್ ನಮ್ಮ ಜೊತೆ ಇಲ್ಲ. ಎಂದು ಹೇಳಿದ್ದಾರೆ.
ಇನ್ನು ಮಂಡ್ಯದಲ್ಲಿ ಅಂಬರೀಶ್ ಅವರ ಗುಡಿ ಕಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ದರ್ಶನ್, ಅವರ ಹೆಸರಿನಲ್ಲಿ ಗುಡಿ ಕಟ್ಟೋದರಲ್ಲಿ ತಪ್ಪಿಲ್ಲ. ನಾನು ಅವರನ್ನು ದೇವರಂತೆ ಪೂಜಿಸುತ್ತೇನೆ ಎಂದರು.
ಇನ್ನೂ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ದರ್ಶನ್, 'ನನ್ನ ಪ್ರೀತಿಯ ಸೀನಿಯರ್ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ 2 ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲ್ಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಲ್ಲಿ ಜೀವಂತವಾಗಿರುತ್ತವೆ.' ಎಂದು ಬರೆದುಕೊಂಡು ಅಂಬಿ ನೆನಪು ಮಾಡಿಕೊಂಡಿದ್ದಾರೆ.