Don't Miss!
- News Rain Alert: ಹುಬ್ಬಳ್ಳಿ-ಧಾರವಾಡ ಸೇರಿ ವಿವಿಧೆಡೆ ವ್ಯಾಪಕ ಮಳೆ ಆರ್ಭಟ
- Automobiles ಅತ್ಯಾಧುನಿಕ ಅಡಾಸ್ನೊಂದಿಗೆ ಬರಲಿದೆ ಈ ಕಿಯಾ ಕಾರು: ಟಾಟಾ ಪಂಚ್ಗೆ ಇನ್ನು ದೇವರೇ ಗತಿ!
- Technology ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- Lifestyle ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಮನೆಯ ಮಣ್ಣಿನ ಗಣೇಶ ನೋಡಿ
ಇಂದು ಗಣೇಶ ಹಬ್ಬವನ್ನು ಎಲ್ಲರೂ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಸಿನಿಮಾ ತಾರೆಯರು ಕೂಡ ಹಬ್ಬ ಆಚರಿಸಿದ ಸಂಭ್ರಮದ ಕ್ಷಣವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುತ್ತಿದ್ದಾರೆ.
ನಟ ದರ್ಶನ್ ಕುಟುಂಬ ಸಹ ಈ ಹಬ್ಬವನ್ನು ಜೋರಾಗಿ ಆಚರಿಸುತ್ತಿದೆ. ದರ್ಶನ್ ಮಗ ವಿನೀಶ್ ಮಣ್ಣಿನ ಗಣೇಶನನ್ನು ಮಾಡಿದ್ದಾರೆ. ದರ್ಶನ್ ಪತ್ನಿ ಮಗ ಮಾಡಿದ ಗಣೇಶನ ಜೊತೆಗೆ ಫೋಟೋ ತೆಗೆಸಿಕೊಂಡಿದ್ದಾರೆ. ಪುಟ್ಟ ವಿನೀಶ್ ಮಾಡಿದ ಪುಟ್ಟ ಗಣೇಶ ಸುಂದರವಾಗಿದೆ. ಪರಿಸರ ಸ್ನೇಹಿ ಗಣೇಶ ಇದಾಗಿದೆ.
ಗೌರಿ ಗಣೇಶ ಹಬ್ಬಕ್ಕೆ ಈ ರೀತಿ ವಿಶ್ ಮಾಡಿದ್ರು ದರ್ಶನ್, ಸುದೀಪ್
ಇತ್ತೀಚಿಗಷ್ಟೆ ದರ್ಶನ್ ಪುತ್ರ ವಿನೀಶ್ 'ಯಜಮಾನ' ಸಿನಿಮಾದ ಒಂದು ಹಾಡಿನಲ್ಲಿ ಸಹ ನಟಿಸಿದ್ದಾರೆ. ಈ ಹಿಂದೆ 'ಐರಾವತ' ಸಿನಿಮಾದಲ್ಲಿ ಸಹ ವಿನೀಶ್ ಒಂದು ದೃಶ್ಯದಲ್ಲಿ ಕಾಣಿಸಿಕೊಂಡಿದ್ದರು.
ಸಮಸ್ತ ಕರುನಾಡ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ಧಿಕ ಶುಭಾಷಯಗಳು ನಿಮ್ಮೆಲ್ಲಾ ಸಂಕಷ್ಟಗಳು ದೂರವಾಗಿ ಜೀವನದ ಎಲ್ಲಾ ಸುಖ ಸಂತೋಷ ನಿಮ್ಮದಾಗಲಿ pic.twitter.com/XwFLxWG0aU
— Darshan Thoogudeepa (@dasadarshan) September 12, 2018
ಅಂದಹಾಗೆ, ನಟ ದರ್ಶನ್ ಸಹ ನಿನ್ನೆ ಗಣೇಶ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ. ದರ್ಶನ್ ಗಣಪನಿಗೆ ಕೈ ಮುಗಿಯುತ್ತಿರುವ ಒಂದು ಫೋಟೋ ಹಾಕಿ ''ಸಮಸ್ತ ಕರುನಾಡ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ಧಿಕ ಶುಭಾಷಯಗಳು ನಿಮ್ಮೆಲ್ಲಾ ಸಂಕಷ್ಟಗಳು ದೂರವಾಗಿ ಜೀವನದ ಎಲ್ಲಾ ಸುಖ ಸಂತೋಷ ನಿಮ್ಮದಾಗಲಿ'' ಎಂದು ಟ್ವೀಟ್ ಮಾಡಿದ್ದಾರೆ