Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬದಿಂದ ಅನಾಥಾಶ್ರಮ-ವೃದ್ಧಾಶ್ರಮ ತುಂಬುತ್ತೆ: ದರ್ಶನ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 43ನೇ ವಸಂತಕ್ಕೆ ಕಾಲಿಟ್ಟ ದರ್ಶನ್ ಅಪಾರ ಸಂಖ್ಯೆಯ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ರಾತ್ರಿಯಿಂದಲೆ ಅಭಿಮಾನಿಗಳು ರಾಜರಾಜೇಶ್ವರಿ ನಗದ ದರ್ಶನ್ ನಿವಾಸದ ಮುಂದೆ ಕ್ಯೂ ನಿಂತಿದ್ದಾರೆ.
ಮಧ್ಯರಾತ್ರಿಯೆ ಅಭಿಮಾನಿಗಳಿಗೆ ದರ್ಶನ ನೀಡಿದ ಡಿ ಬಾಸ್ ಕೇಕ್ ಕತ್ತರಿಸದೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇನ್ನು ರಾತ್ರಿಮಾತ್ರವಲ್ಲದೆ ಬೆಳ್ಳಂಬೆಳಗ್ಗೆಯೆ ಅಭಿಮಾನಿಗಳು ನೆಚ್ಚಿನ ನಟನ ದರ್ಶನಕ್ಕಾಗಿ, ಶುಭಾಶಯ ತಿಳಿಸುವುದ್ದಕ್ಕಾಗಿ ನಿವಾಸದ ಮುಂದೆ ಕ್ಯೂನಿಂತಿದ್ದಾರೆ. ಸಾಗರೋಪಾದಿಯಲ್ಲಿ ಹರಿದುಬಂದಿದ್ದ ಅಭಿಮಾನಿಗಳನ್ನು ಭೇಟಿಯಾಗಿ ಶೇಕ್ ಹ್ಯಾಂಡ್ ಮಾಡಿ ಅಭಿಮಾನಿಗಳ ಮೊಗದಲ್ಲಿ ಸಂತಸ ಮೂಡಿಸಿದ್ದಾರೆ.
ಡಿ ಬಾಸ್ ಹುಟ್ಟುಹಬ್ಬಕ್ಕೆ ಸ್ಟಾರ್ ಗಳ ಶುಭಾಶಯ: ಯಾರ್ಯಾರ ವಿಶ್ ಹೇಗಿದೆ?
ಆನಾಥಾಶ್ರಮ ಮತ್ತು ವೃದ್ಧಾಶ್ರಮ ತುಂಬುತ್ತೆ
"ಮಾಧ್ಯಮದವರ ಜೊತೆ ಮಾತನಾಡಿದ ಡಿ ಬಾಸ್ "ಈ ಬಾರಿಯ ಹುಟ್ಟುಹಬ್ಬ ಒಂದಿಷ್ಟು ಆನಾಥಾಶ್ರಮ ಮತ್ತು ವೃದ್ಧಾಶ್ರಮ ತುಂಬುತ್ತೆ. ಈ ಬಾರಿ ಊರೆಲ್ಲ ಕ್ಲೀನ್ ಆಗಿದೆ. ಇಷ್ಟುವರ್ಷ ಇಲ್ಲೆಲ್ಲ ಗಬ್ಬೆದ್ದು ಹೋಗಿರುತ್ತಿತ್ತು. ಹುಟ್ಟುಹಬ್ಬದ ದಿನ ಕೆಲಸ ಮಾಡುತ್ತೇನೆ ಹಾಗಾಗಿ ಇವತ್ತು ಕೂಡ ರಾಬರ್ಟ್ ಡಬ್ಬಿಂಗ್ ನಲ್ಲಿ ಭಾಗಿಯಾಗುತ್ತೇನೆ. ಸಂಪೂರ್ಣ ದಿನ ಅಭಿಮಾನಿಗಳಿಗಾಗಿ ಮೀಸಲಿಡುತ್ತೇನೆ. ಮೊಲಗಳು ಮತ್ತು ಬಾತುಕೋಳಿಗಳು ಬಂದಿವೆ ಅದನ್ನು ತೋಟಕ್ಕೆ ಕಳುಹಿಸುತ್ತೇನೆ" ಎಂದು ಹೇಳಿದ್ದಾರೆ.
ಡಿ ಬಾಸ್ ಜನ್ಮದಿನ: ಕೇಕ್ ಕಟ್ ಮಾಡದೆ ಹುಟ್ಟುಹಬ್ಬ ಆಚರಿಸಿಕೊಂಡ ದರ್ಶನ್.!
ಏಪ್ರಿಲ್ ನಲ್ಲಿ ರಾಬರ್ಟ್ ರಿಲೀಸ್
ಇನ್ನು ರಾಬರ್ಟ್ ಚಿತ್ರದ ಬಗ್ಗೆ ಮಾತನಾಡಿದ ದರ್ಶನ್ ಸಧ್ಯದಲ್ಲೇ ಅಂದರೆ ಏಪ್ರಿಲ್ ನಲ್ಲಿ ಸಿನಿಮಾ ತೆರೆಗೆ ಬರುತ್ತೆ ಎಂದು ಹೇಳಿದ್ದಾರೆ. ಇನ್ನು ರಾಜವೀರ ಮದಕರಿ ನಾಯಕ ಚಿತ್ರೀಕರಣ ಪ್ರಾರಂಭಿಸಿದ್ದೀವಿ. ಕೇರಳದಲ್ಲಿ ಚಿತ್ರೀಕರಣ ಮಾಡಿದ್ದೀವಿ. ಈ ಸಿನಿಮಾಗೆ ಇನ್ನು ಸಮಯವಿದೆ" ಎಂದು ಹೇಳಿದ್ದಾರೆ.
ಹುಟ್ಟುಹಬ್ಬದ ದಿನ ರಾಬರ್ಟ್ ಡಬ್ಬಿಂಗ್
ಇಂದು ದಿನ ಪೂರ್ತಿ ಅಭಿಮಾನಿಗಳ ಜೊತೆ ಸಮಯಕಳೆಯುವ ದರ್ಶನ್ ಮಧ್ಯದಲ್ಲಿ ಡಬ್ಬಿಂಗ್ ಕೂಡ ಮಾಡಿ ವಾಪಾಸ್ ಆಗಲಿದ್ದಾರೆ. ಈ ಬಾರಿ ರಾಬರ್ಟ್ ಡಬ್ಬಿಂಗ್ ಮಾಡಲಿದ್ದಾರೆ ದರ್ಶನ್. ಆ ನಂತರ ಮತ್ತೆ ಅಭಿಮಾನಿಗಳಿಗೆ ಸಮಯಕೊಡಲಿದ್ದಾರೆ.
ವಿಡಿಯೋ: ಈ 'ರಾಬರ್ಟ್' ರಾಮನೂ ಹೌದು.. ರಾವಣನೂ ಹೌದು..
ದಾಸನ ಮನವಿಗೆ ಸ್ಪಂದಿಸಿದ ಅಭಿಮಾನಿಗಳು
ಈ ಬಾರಿ ದರ್ಶನ್ ಅಭಿಮಾನಿಗಳಲ್ಲಿ ಕೇಕ್, ಗಿಫ್ಟ್ ತರಬೇಡಿ, ಬದಲಾಗಿ ದವಸ-ಧಾನ್ಯಗಳನ್ನು ತಂದು ಕೊಡಿ ಎಂದು ಮನವಿ ಮಾಡಿಕೊಂಡಿದ್ದರು. ದಾಸ ಮನವಿಯಂತೆ ಅಭಿಮಾನಿಗಳು ಈ ಬಾರಿ ದವಸ ಧಾನ್ಯಗಳ ಮೂಟೆಯ ರಾಶಿಯೆ ತಂದು ನೀಡಿದ್ದಾರೆ. ಈ ಎಲ್ಲಾ ದವಸ ಧಾನ್ಯಗಳು ಸೇರಬೇಕಾದ ಅನಾಥಾಶ್ರಮ, ವೃದ್ಧಾಶ್ರಮ ಸೇರುತ್ತಿದೆ.