Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಗ್ಗಟ್ಟಿನಿಂದ ಮಾತ್ರ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ: ಮೋದಿಗೆ ದರ್ಶನ್ ಸಾಥ್
ಇಡೀ ವಿಶ್ವವೆ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿದೆ. ಕಿಲ್ಲರ್ ವೈರಸ್ ಅನ್ನು ಮಟ್ಟಹಾಕಲು ಭಾರತ 14 ದಿನಗಳ ಲಾಕ್ ನಿರ್ಧಾರ ತೆಗೆದುಕೊಂಡಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಹೊಸ ಟಾಸ್ಕ್ ನೀಡಿದ್ದಾರೆ. ಕಳೆದ ತಿಂಗಳು ಜನತಾ ಕರ್ಫ್ಯೂಗೆ ಮೋದಿ ಕರೆಕೊಟ್ಟಿದ್ದರು. ದೇಶದ ಜನತೆಯಿಂದ ಉತ್ತಮ ಬೆಂಬಲ ವ್ಯಕ್ತವಾಗಿತ್ತು.
ಈ ಬಾರಿ ದೀಪ ಬೆಳಗುವ ಟಾಸ್ಕ್ ನೀಡಿದ್ದಾರೆ. ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ ಮನೆಯ ಎಲ್ಲಾ ಲೈಟ್ಸ್ ಆರಿಸಿ ಮನೆಯ ಮುಂದೆ, ಅಥವಾ ಬಾಲ್ಕನಿಯಲ್ಲಿ ಮುಂಬೊತ್ತಿ, ದೀಪಾ, ಮೊಬೈಲ್ ಫ್ಲ್ಯಾಷ್ ಅಥವಾ ಟಾರ್ಚ್ ಬೆಳಗಿ ಕೊರೊನಾ ವಿರುದ್ಧ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ದೇಶದ ಜನತೆಗೆ ಕರೆಕೊಟ್ಟಿದ್ದಾರೆ. ಮೋದಿಗೆ ಸಾಕಷ್ಟು ಮಂದಿ ಬೆಂಬಲಿಸಿ ದೀಪ ಬೆಳಗುವಂತೆ ಜನತೆಯಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಬೆಂಬಲ ನೀಡಿದ್ದು, ದೀಪ ಬೆಳಗುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮುಂದೆ ಓದಿ..
ಮೋದಿಗೆ ದರ್ಶನ್ ಬೆಂಬಲ
ಮೋದಿ ಕರೆ ಕೊಡುತ್ತಿದ್ದಂತೆ ಅನೇಕರು ಮೋದಿ ಬೆಂಬಲ ಸೂಚಿಸುತ್ತಿದ್ದಾರೆ. ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಬೆಂಬಲಿಸಿ ಅಭಿಮಾನಿಗಳಿಗೆ ಅಂಧಕಾರವನ್ನು ತೊಲಗಿಸಲು ರಾತ್ರಿ 9 ಗಂಟೆಗೆ ಮನೆಯಲ್ಲಿಯೆ ಮೊಂಬತ್ತಿ ಅಥವಾ ದೀಪ ಬೆಳಗಿ ಎಂದು ಹೇಳಿದ್ದಾರೆ.
|
ದರ್ಶನ್ ಟ್ವೀಟ್
ಈ ಬಗ್ಗೆ ಟ್ವೀಟ್ ಮಾಡಿರು ದರ್ಶನ್ "ನಮ್ಮ ಪ್ರಧಾನಿಗಳ ಕರೆಯಂತೆ ಕೊರೊನಾ ವೈರಸ್ ಇಂದ ತುಂಬಿರುವ ಅಂಧಕಾರವನ್ನು ಏಪ್ರಿಲ್ 5, ರಾತ್ರಿ 9 ಗಂಟೆಗೆ ನಿಮ್ಮ ಮನೆಯಂಗಳದಿಂದಲೇ ಮೊಂಬತ್ತಿ/ದೀಪಗಳನ್ನು ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲೂ ಮೂಡಿಸೋಣ" ಎಂದು ಹೇಳಿದ್ದಾರೆ.
|
ಒಗ್ಗಟ್ಟಿನಿಂದ ಮಾತ್ರ ಈ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ
ಇನ್ನು ಮತ್ತೊಂದು ಟ್ವೀಟ್ ನಲ್ಲಿ ದರ್ಶನ್ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಬೇಕಂದರೆ ಒಗ್ಗಟ್ಟು ಇರಬೇಕೆಂದು ಎಂದು ಹೇಳಿದ್ದಾರೆ. "ಎಲ್ಲಾ ಭಾರತೀಯರ ಒಗ್ಗಟ್ಟಿನಿಂದ ಮಾತ್ರ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಮನೆಯಲ್ಲಿಯೇ ಭದ್ರವಾಗಿರಿ, ನಿಮ್ಮ ನೆರೆಹೊರೆಯ ಜನರಿಗೆ ಬೆನ್ನೆಲುಬಾಗಿರಿ" ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ.
|
ನಾಡಿನ ಜನತೆಗೆ ಸಲಹೆ ನೀಡಿದ್ದಾರೆ ದರ್ಶನ್
ಈ ಮೊದಲು ದರ್ಶನ್ ಟ್ವೀಟ್ ಮಾಡಿ ನಾಡಿನ ಜನತೆಗೆ ಸಲಹೆ ನೀಡಿದ್ದರು. "ಈ ಸಮಯದಲ್ಲಿ ನಾನೊಂದು ಸಣ್ಣ ಸಲಹೆ ನೀಡಲು ಇಚ್ಚಿಸುತ್ತೇನೆ. ದಿನನಿತ್ಯ ನೀವು ಮಾಡುವ ಅಡುಗೆಯಲ್ಲಿ ಸ್ವಲ್ಪ ಹೆಚ್ಚು ಜನರಿಗಾಗುವಂತೆ ಮಾಡಿ ನಿಮ್ಮ ಅಕ್ಕಪಕ್ಕದ ಬಡಜನರಿಗೆ ಒಪ್ಪೊತ್ತು ಕೂಳಿಗಾದರೂ ನೆರವಾದರೆ ಒಳಿತು ಎಂಬುದು ನನ್ನ ಭಾವನೆ. ಸಾಧ್ಯವಾದಷ್ಟು ನಿಮ್ಮ ಕೈಲಾಗುವ ಈ ಕೆಲಸದಿಂದ ಅನೇಕ ಕುಟುಂಬಗಳು ಚೇತರಿಸಿಕೊಳ್ಳಬಹುದು" ಎಂದು ಹೇಳಿದ್ದರು.