Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರೇಕೆರೂರು: ರೈತರ ಬಗ್ಗೆ ನಟ ದರ್ಶನ್ ಮಾತು
ಚಿತ್ರದುರ್ಗದ ಹಿರೆಕೆರೂರಿನಲ್ಲಿ ನಡೆದ ಕೃಷಿ ಇಲಾಖೆಯ 'ರೈತರೊಂದಿಗೊಂದು ದಿನ' ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗವಹಿಸಿದ್ದರು. ಕೃಷಿ ಇಲಾಖೆಯ ರಾಯಭಾರಿ ಆಗಿರುವ ದರ್ಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರನ್ನುದ್ದೇಶಿಸಿ ಮಾತನಾಡಿದರು.
ರೈತರು ಮತ್ತು ಸೈನಿಕರು ದೇಶದ ಬೆನ್ನೆಲುಬು. ಭೂಮಿತಾಯಿಯನ್ನು ನಂಬಿ ಕಷ್ಟಪಟ್ಟು ದುಡಿಯುತ್ತಾನೆ. ರೈತ, ತಂತ್ರಜ್ಞಾನ, ಇಲಾಖೆಯ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಫಸಲು ಬೆಳೆದಲ್ಲಿ ತಮ್ಮ ಆದಾಯ ದ್ವಿಗುಣಗೊಳಿಸಬಹುದು ಎಂದರು.
ಕೃಷಿ ಇಲಾಖೆಯು ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು, ಸೌಲಭ್ಯಗಳನ್ನು ಹೊರತಂದಿದೆ. ರೈತರು ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದುಕೊಂಡು ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಪ್ರಗತಿ ಸಾಧಿಸಬೇಕು ಎಂದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ಕುರಿತು ಮಾತನಾಡಿದ ದರ್ಶನ್, ಪೊಲೀಸ್ ಆಗಿ, ನಟನಾಗಿ ನಂತರ ನಿರ್ಮಾಪಕನಾಗಿ ಈಗ ಸಚಿವನಾಗುವುದು ಬಹಳ ಸುಲಭದ ಕೆಲಸವಲ್ಲ. ಏನೇ ಕೆಲಸವಾಗಲೀ ಅದನ್ನು ಗುರಿಯಿಟ್ಟು ಮಾಡಿದರೆ ಯಶಸ್ಸು ಕಟ್ಟಿಟ್ಟಬುತ್ತಿ. ಇದಕ್ಕೆ ಬಿ.ಸಿ.ಪಾಟೀಲರೇ ಸಾಕ್ಷಿ. ಬಿ.ಸಿ.ಪಾಟೀಲರನ್ನು ನಾನು ಪ್ರೀತಿಯಿಂದ ಕಾಕ ಎಂದು ಕರೆಯುತ್ತೇನೆ. ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರಿಗೆ ನೀವು ತೋರಿಸುತ್ತಿರುವ ಪ್ರೀತಿ ಆದರ, ಗೌರವಗಳನ್ನು ಹೀಗೆ ಮುಂದುವರೆಸಿ ಎಂದು ದರ್ಶನ್ ಮನವಿ ಮಾಡಿಕೊಂಡರು.
ಬಿ.ಸಿ.ಪಾಟೀಲ್ ನಿರ್ಮಿಮಿಸುತ್ತಿರುವ ಹೊಸ ಸಿನಿಮಾ 'ಗರಡಿ' ಕುರಿತು ಮಾತನಾಡಿ, ''ಕಲಾವಿದರ ಜೀವನ ಇರುವುದು ಅಭಿಮಾನಿಗಳಿಂದ. ಕಲಾವಿದರು ಪ್ರೀತಿ ಪ್ರೋತ್ಸಾಹದಿಂದ ಬೆಳೆಯುತ್ತಾರೆ. ನಿರ್ದೇಶಕ ಯೋಗರಾಜ್ ಭಟ್ 'ಗರಡಿ' ಚಿತ್ರ ನಿರ್ದೇಶಿಸುತ್ತಿದ್ದಾರೆ. ಯಶಸ್ ಸೂರ್ಯ ನಮ್ಮ ಹಿರೋ. ಯಶಸ್ ಸೂರ್ಯ ಸೇರಿದಂತೆ ಎಲ್ಲಾ ಕಲಾವಿದರ ಮೇಲೆ ಅಭಿಮಾನ ಪ್ರೀತಿಯಿರಲಿ'' ಎಂದು ದರ್ಶನ್ ಮನವಿ ಮಾಡಿದರು.