Don't Miss!
- News Tirumala Property: ತಿರುಪತಿ ತಿರುಮಲ ಶ್ರೀವಾರಿಯ 2023-24ರ ಆಸ್ತಿ ವಿವರ ಇಲ್ಲಿದೆ..
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೇಲೂರು ಚೆನ್ನಕೇಶವ ದೇಗುಲದಲ್ಲಿ ನಟ ದರ್ಶನ್!
ನಟ ದರ್ಶನ್ ಇತ್ತೀಚೆಗೆ ಹೆಚ್ಚು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕ್ರಾಂತಿ ಸಿನಿಮಾದ ಮುಹೂರ್ತ ಕಾರ್ಯಕ್ರಮದ ಬಳಿಕ ದರ್ಶನ್ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಿದ್ದಾರೆ. ದರ್ಶನ್ ಈಗ ಬೇಲೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಬೇಲೂರು ದೇವಾಲಯಕ್ಕೆ ದರ್ಶನ್ ಭೇಟಿ ನೀಡಿದ್ದಾರೆ. ಬೇಲೂರಿನ ಚೆನ್ನಕೇಶವ ದೇವಸ್ಥಾನಕ್ಕೆ ತೆರಳಿ ದರ್ಶನ್ ದೇವರ ಆಶೀರ್ವಾದ ಪಡೆದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ನೇರವಾಗಿ ಬೇಲೂರಿಗೆ ಹೊರಟು, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ದರ್ಶನ್ ಹಿಂದೆ ಬಿದ್ದ ಅಭಿಮಾನಿಗಳು: ದರ್ಶನ್ ಮತ್ತೆ ವಾರ್ನಿಂಗ್!
ದರ್ಶನ್ ರಸ್ತೆಗೆ ಇಳಿದಿದ್ದಾರೆ ಎನ್ನುವ ಸುದ್ದಿ ಗೊತ್ತಾದರೆ ಸಾಕು, ಅಭಿಮಾನಿಗಳು ಅವರ ಕಾರಿನ ಹಿಂದೆ ಬಿದ್ದು ಬಿಡುತ್ತಾರೆ. ತಮ್ಮ ನೆಚ್ಚನ ನಟನನ್ನು ಒಮ್ಮೆ ನೋಡಿದರೆ ಸಾಕು ಅಂತ ಕಾರು ಹಿಂಬಾಲಿಸುತ್ತಾರೆ. ಇಂತಹ ಪ್ರಸಂಗ ಮತ್ತೆ ನಡೆದಿದೆ. ಹಾಗಾಗಿ ದರ್ಶನ್ ದೇವಸ್ಥಾನದ ಒಳಗಡೆ ಅಭಿಮಾನಿಗಳಿಗೆ ಗದರಿದ್ದಾರೆ. ಆದರೂ ಅಭಿಮಾನಿಗಳ ಸಮ್ಮುಖದಲ್ಲಿ ದರ್ಶನ್ ಇಂದು ಚೆನ್ನಕೇಶವನ ದರ್ಶನ ಪಡೆದು ಕೊಂಡಿದ್ದಾರೆ. ಈ ಹಿಂದೆಯೂ ದರ್ಶನ್ ಕುಟುಂಬದೊಂದಿಗೆ ಪ್ರವಾಸ ಹೊರಟಾಗ ಅಭಿಮಾನಿಗಳು ಬೈಕ್ನಲ್ಲಿ ಹಿಂಬಾಲಿಸಿದ್ದರು. ಆಗಲೂ ದರ್ಶನ್ ಅಭಿಮಾನಿಗಳಿಗೆ ಬೈದು ಬುದ್ಧಿ ಹೇಳಿದ್ದರು.
ನಟ ದರ್ಶನ್ ಸದ್ಯ ಕ್ರಾಂತಿ ಸಿನಿಮಾಕ್ಕಾಗಿ ತಯಾರಿ ನಡೆಸಿದ್ದಾರೆ. ಕ್ರಾಂತಿ ಸಿನಿಮಾಗಾಗಿ ಹೇಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರವನ್ನು ದರ್ಶನ್ ವಿಡಿಯೋ ಮೂಲಕ ಹಂಚಿಕೊಂಡಿದ್ದರು. ಇತ್ತೀಚೆಗೆ ದರ್ಶನ್ ಹಿರಿಯ ನಟಿ ಬಿ.ಸರೋಜಾ ದೇವಿ ಮನೆಗೆ ಭೇಟಿ ನೀಡಿದ್ದರು. ಬಳಿಕ ಸಾಲು ಮರದ ತಿಮ್ಮಕ್ಕನ ಆರೋಗ್ಯ ವಿಚಾರಿಸಿ ಬಂದಿದ್ದಾರೆ.
ಈ ನಡುವೆ ತುಂಬಾ ವಿಶೇಷವಾಗಿ ಗಮನ ಸೆಳೆದ ಮತ್ತೊಂದು ವಿಚಾರ ಅಂದರೆ ಅದು ದರ್ಶನ್ ಪತ್ನಿ, ಮಗನ ಜೊತೆಗೆ ಹೆಚ್ಚಾಗಿ ಕಾಣಿಸಿ ಡಿದ್ದು. ಹೌದು ದರ್ಶನ್ ಮಗ ವಿನೀಶ್ ಜೊತೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಹಲವು ವರ್ಷಗಳ ಬಳಿಕ ಈಗ ಮತ್ತೆ ಪತ್ನಿ ವಿಜಯ್ ಲಕ್ಷ್ಮಿ ಜೊತೆಗೆ ಕಾಣಿಸಿಕೊಂಡಿದ್ದಾರೆ. ಪತ್ನಿ ಮಗನೊಂದಿಗೆ ದರ್ಶನ್ ಕಾಡು ಮೇಡು ಸುತ್ತಿದ್ದಾರೆ.
ವಂಚನೆ ಪ್ರಕರಣದ ಬಳಿಕ ದರ್ಶನ್ ವಿವಾದಗಳ ಬಗ್ಗೆ ಹೆಚ್ಚಾಗಿ ತಲೆ ಕೆಡಿಸಿಕೊಂಡಿಲ್ಲ. ಸದ್ಯ ಕ್ರಾಂತಿ ಸಿನಿಮಾದ ಮೂಲಕ ಕ್ರಾಂತಿ ಮಾಡಲು ತಯಾರಿ ನಡೆಸುತ್ತಿದ್ದಾರೆ. ರಾಬರ್ಟ್ ಸಿನಿಮಾದ ಬಳಿಕ ಕ್ರಾಂತಿ ಸಿನಿಮಾ ಯಾವ ರೀತಿ ಕ್ರಾಂತಿ ಮಾಡಲಿದೆ ಎಂಬ ಕೌತುಕ ಮನೆ ಮಾಡಿದೆ. ಸದ್ಯ ಕ್ರಾಂತಿ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ. ಆದಷ್ಟು ಬೇಗ ಚಿತ್ರದ ಶೂಟಿಂಗ್ ಆರಂಭಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.