Don't Miss!
- News Gold Price on April 18th: ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದಲ್ಲಿ ಎಷ್ಟಿದೆ ಪರಿಶೀಲಿಸಿ? ಅಂಕಿಅಂಶಗಳ ವಿವರ ಇಲ್ಲಿದೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರೊಂದಿಗೆ ಒಂದು ದಿನ ಕಳೆಯಲಿದ್ದಾರೆ ನಟ ದರ್ಶನ್: ಯಾವಾಗ? ಎಲ್ಲಿ?
ಸ್ಟಾರ್ ನಟ ದರ್ಶನ್ರ ಪ್ರಾಣಿ ಪ್ರೀತಿ, ಪಶುಸಂಗೋಪನೆ ಬಗ್ಗೆ ಆಸಕ್ತಿ ಮತ್ತು ಕೃಷಿ ಪ್ರೇಮ ಬಹುತೇಕರಿಗೆ ಗೊತ್ತಿರುವಂಥಹುದ್ದೆ.
ದರ್ಶನ್ರ ಕೃಷಿ ಪ್ರೇಮ, ಪಶುಸಂಗೋಪನೆ ಬಗ್ಗೆ ಇರುವ ಕಾಳಜಿಯನ್ನು ಗಮನಿಸಿ ರಾಜ್ಯ ಬಿಜೆಪಿ ಸರ್ಕಾರವು ಅವರನ್ನು ಕೃಷಿ ಇಲಾಖೆ ರಾಯಭಾರಿಯನ್ನಾಗಿ ಮಾಡಿದೆ. ದರ್ಶನ್ ಸಹ ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ.
ರಾಜ್ಯ ಕೃಷಿ ಇಲಾಖೆಯ ಕಾರ್ಯಕ್ರಮವೊಂದರ ಭಾಗವಾಗಿ ನಟ ದರ್ಶನ್ ರೈತರೊಟ್ಟಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮ ಮುಂದಿನ ತಿಂಗಳು ನಡೆಯಲಿದೆ.
ರಾಜ್ಯ ಕೃಷಿ ಇಲಾಖೆಯು 'ರೈತರೊಟ್ಟಿಗೆ ಒಂದು ದಿನ' ಹೆಸರಿನ ಕಾರ್ಯಕ್ರಮ ಆಯೋಜಿಸಿದ್ದು, ಅದೇ ಕಾರ್ಯಕ್ರಮದ ಅಂಗವಾಗಿ ನಟ ದರ್ಶನ್ ಒಂದು ದಿನ ರೈತರೊಟ್ಟಿಗೆ ಕಳೆಯಲಿದ್ದಾರೆ. ನವೆಂಬರ್ 14 ರಂದು ಹಿರೇಕೆರೂರಿನ ರೈತರೊಟ್ಟಿಗೆ ಒಂದು ದಿನವನ್ನು ಕಳೆಯಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದರ್ಶನ್ ಜೊತೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸಹ ಇರಲಿದ್ದಾರೆ.
ಯಡಿಯೂರಪ್ಪ ಸಿಎಂ ಆಗಿದ್ದಾಗ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಮಾಡಲಾಯ್ತು. ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಅವರು ದರ್ಶನ್ರ ಅತ್ಯಾಪ್ತ ಗೆಳೆಯರೇ ಆಗಿದ್ದು, ಸ್ವತಃ ಅವರೇ ದರ್ಶನ್ ಬಳಿ ರಾಯಭಾರಿ ಆಗುವಂತೆ ಮನವಿ ಮಾಡಿದ್ದರು. ಮನವಿಯನ್ನು ಗೌರವಪೂರ್ವಕವಾಗಿ ದರ್ಶನ್ ಒಪ್ಪಿಕೊಂಡಿದ್ದರು.
'ರೈತರೊಂದಿಗೆ ಒಂದು ದಿನ' ಕಾರ್ಯಕ್ರಮವನ್ನು ಸಚಿವ ಬಿ.ಸಿ.ಪಾಟೀಲ್ ಅವರು ಕಳೆದ ವರ್ಷ ನವೆಂಬರ್ 14 ರಂದು ಮಂಡ್ಯದ ಮಡವಿನ ಕೋಡಿ ಗ್ರಾಮದಲ್ಲಿ ಉದ್ಘಾಟಿಸಿದರು. ತಮಗೆ ಹೆಸರು ತಂದುಕೊಟ್ಟ 'ಕೌರವ' ಸಿನಿಮಾವನ್ನು ಬಿ.ಸಿ.ಪಾಟೀಲ್ ಇದೇ ಊರಿನಲ್ಲಿಯೇ ಚಿತ್ರೀಕರಣ ಮಾಡಿದ್ದರು. ಹಾಗಾಗಿ ಇಲ್ಲಿಯೇ ತಮ್ಮ ಹುಟ್ಟುಹಬ್ಬದ ದಿನದಂದು (ನವೆಂಬರ್ 14) ಕಾರ್ಯಕ್ರಮ ಲೋಕಾರ್ಪಣೆ ಮಾಡಿದ್ದರು.
ಈ ವರ್ಷದ 'ರೈತರೊಂದಿಗೆ ಒಂದು ದಿನ' ಕಾರ್ಯಕ್ರಮವನ್ನು ಹಾವೇರಿಯ ಹಿರೇಕೆರೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ದರ್ಶನ್ ಭಾಗಿ ಆಗುತ್ತಿರುವುದು ಖಚಿತವಾಗಿದೆ. ಜೊತೆಗೆ ಸಚಿವರೂ ಇರಲಿದ್ದಾರೆ. ಆದರೆ ದರ್ಶನ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಕಾರಣ ಭಾರಿ ಸಂಖ್ಯೆಯ ಜನ ಸೇರಬಹುದಾದ ಸಾಧ್ಯತೆ ಇದೆ.
ದರ್ಶನ್ ಆಗಮಿಸುವುದರಿಂದ ಭಾರಿ ಸಂಖ್ಯೆಯ ಜನ ಸೇರುವ ಸಾಧ್ಯತೆ ಇದ್ದು, ನಿಜವಾದ ರೈತರು ಹಾಗೂ ಇತರರ ನಡುವೆ ಅಂತರ ಗುರುತಿಸುವುದು ಕಷ್ಟವಾಗುತ್ತದೆ. ನಿಜವಾದ ಫಲಾನುಭವಿಗಳ ಮೇಲೆ ಗಮನವಹಿಸಲಾಗುವುದಿಲ್ಲ ಎಂದು ಇಲಾಖೆಯ ಅಧಿಕಾರಿಯೊಬ್ಬರ ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿವೆ.
ದರ್ಶನ್ ನಟನೆಯ ಜೊತೆಗೆ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ. ದರ್ಶನ್ ಅವರ ಮೊದಲ ಉದ್ಯೋಗ ಪಶು ಸಂಗೋಪನೆ ಆಗಿತ್ತು. ಇಂದಿಗೂ ಅವರು ತಮ್ಮ ಮೈಸೂರಿನ ಫಾರಂ ಹೌಸ್ನಲ್ಲಿ ಸಾಕಷ್ಟು ಹಸುಗಳನ್ನು ಹಾಗೂ ಇನ್ನಿತರೆ ಪ್ರಾಣಿಗಳನ್ನು ಸಾಕಿದ್ದಾರೆ ಅವುಗಳ ಆರೈಕೆ ಮಾಡುತ್ತಾರೆ.
ಕೃಷಿ ಇಲಾಖೆಗೆ ಮಾತ್ರವೇ ಅಲ್ಲದೆ ಅರಣ್ಯ ಇಲಾಖೆಗೂ ಗೌರವ ರಾಯಭಾರಿ ಆಗಿದ್ದಾರೆ ನಟ ದರ್ಶನ್. ಕಳೆದ ಲಾಕ್ಡೌನ್ ಅವಧಿಯಲ್ಲಿ ದರ್ಶನ್ ಕೊಟ್ಟ ಕರೆಯಿಂದಾಗಿ ರಾಜ್ಯದಾದ್ಯಂತ ಸಾವಿರಾರು ಮಂದಿ ಮೃಗಾಲಯಗಳಲ್ಲಿನ ಪ್ರಾಣಿಗಳನ್ನು ದತ್ತು ತೆಗೆದುಕೊಂಡರು.