Don't Miss!
- News ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ: ಸಿದ್ದರಾಮಯ್ಯ ಸರ್ಕಾರವೇ ನೇರ ಹೊಣೆ ಎಂದ ಬಿಜೆಪಿ ಶಾಸಕ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರೋಲಿಗರಿಗೆ ಆಹಾರವಾಯ್ತು ಚಾಲೆಂಜಿಂಗ್ ಸ್ಟಾರ್ ಎಡವಟ್ಟಿನ ಹೇಳಿಕೆ
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ 'ಕುರುಕ್ಷೇತ್ರ' ಚಿತ್ರದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಬಹುತಾರಾಗಣದ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗಿರುವ ಪೌರಾಣಿಕ ಸಿನಿಮಾ ಕುರುಕ್ಷೇತ್ರ. ಇದೇ ತಿಂಗಳು ಆಗಸ್ಟ್ 9ಕ್ಕೆ ಕುರುಕ್ಷೇತ್ರ ತೆರೆಗೆ ಬರುತ್ತಿದ್ದು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಚಿತ್ರದಲ್ಲಿ ದರ್ಶನ್ ದುರ್ಯೋದನನ ಪಾತ್ರದಲ್ಲಿ ಮಿಂಚಿದ್ದಾರೆ. ಸಾಕಷ್ಟು ಶ್ರಮವಹಿಸಿ ಇಷ್ಟಪಟ್ಟು ಮಾಡಿರುವ ಕುರುಕ್ಷೇತ್ರ ರಿಲೀಸ್ ಸಮಯ ಹತ್ತಿರ ಬರುತ್ತಿದೆ. ಈ ಸಮಯದಲ್ಲಿ ಚಿತ್ರತಂಡ ಪ್ರೆಸ್ ಮೀಟ್ ಹಮ್ಮಿಕೊಂಡಿತ್ತು. ಮಾಧ್ಯಮದ ಜೊತೆ ಮಾತನಾಡುತ್ತಿದ್ದ ದರ್ಶನ್ ಒಂದು ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಆಗಸ್ಟ್ 9ಕ್ಕೆ 'ಕುರುಕ್ಷೇತ್ರ' ಎರಡೇ ಭಾಷೆಯಲ್ಲಿ ರಿಲೀಸ್
"ಕುರುಕ್ಷೇತ್ರ ನಡೆದಿರೋದು, ಎಲ್ಲರೂ ನೋಡಿರೋದು, ಓದಿರೋದು ಬೇರೆಯದ್ದೆ ಇದೆ. ಗಧಾಯುದ್ಧನೆ ಒಂದು ವರ್ಷನ್ ಇದೆ. ವಾಲ್ಮೀಕಿ ಬರೆದಿರೋದು ಇನ್ನೊಂದು ಥರ ಇದೆ. ಹಾಗಾಗಿ ಇಂತಹ ಮಹಾಭಾರತವನ್ನು ಆಯ್ಕೆ ಮಾಡಿಕೊಳ್ಳುವಾಗ ತುಂಬಾ ಎಚ್ಚರವಹಿಸಬೇಕಾಗುತ್ತೆ" ಎಂದು ದರ್ಶನ್ ಹೇಳಿದ್ದಾರೆ.
ರಾಮಾಯಣ ಮತ್ತು ಮಹಾಭಾರತ ದೇಶದ ಎರಡು ಶ್ರೇಷ್ಠ ಮಹಾಕಾವ್ಯಗಳು. ಮಹಾಭಾರತ ಬರೆದಿದ್ದು 'ವ್ಯಾಸ'. ರಾಮಾಯಣ ಬರೆದಿದ್ದು 'ವಾಲ್ಮೀಕಿ'. ಆದ್ರೆ ದರ್ಶನ್ ಮಾತನಾಡುವಾಗ 'ವಾಲ್ಮೀಕಿ' ಮಹಾಭಾರತ ಎಂದು ಹೇಳಿರುವ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ದುರ್ಯೋದನ ಪಾತ್ರ ಮಾಡಿ ಮಹಾಭಾರತ ಬರೆದವರ ಬಗ್ಗೆ ತಪ್ಪು ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.