Don't Miss!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೆಹಲಿ ಹಿಂಸಾಚಾರ: ಸ್ಯಾಂಡಲ್ ವುಡ್ ನಟ ಧನಂಜಯ್ ಪ್ರತಿಕ್ರಿಯೆ
ರಾಷ್ಟ್ರ ರಾಜಧಾನಿ ದೆಹಲಿ ಹೊತ್ತಿ ಉರಿಯುತ್ತಿದೆ. ದೆಹಲಿ ಹಿಂಸಾಚಾರ ಮೂರನೆ ದಿನಕ್ಕೆ ಕಾಲಿಟ್ಟಿದ್ದು ಗಲಭೆಯಲ್ಲಿ ಸುಮಾರು 20 ಜನ ಮೃತಪಟ್ಟಿದ್ದಾರೆ. ದೆಹಲಿ ಹಿಂಸಾಚಾರದ ಬಗ್ಗೆ ಬಾಲಿವುಡ್ ಕಲಾವಿದರು ಸೇರಿದಂತೆ ಬೇರೆ ಬೇರೆ ಭಾಷೆಯ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಹಿಂಸಾಚಾರ ಖಂಡಿಸಿ ಟ್ವೀಟ್ ಮಾಡುತ್ತಿದ್ದಾರೆ.
ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. "ಸೂರ್ಯಕಾಂತಿಯ ನೋಡಿ ಕಲಿಯಿರಿ ಎಂದೆ ಧರ್ಮದತ್ತ ವಾಲಿದರು. ಹೊಳೆಯ ನಿಶ್ಯಬ್ದತೆಯೆಡೆಗೆ ನಡೆಯಿರಿ ಎಂದೆ ಗುಂಡಿನ ಶಬ್ದಕ್ಕೆ ಮಾರು ಹೋದರು. ಸೂರ್ಯ ಮುಳುಗುತ್ತಿದ್ದಾನೆ. ಹೊಳೆ ಹೆಪ್ಪುಗಟ್ಟುತ್ತಿದೆ. ಎಂದು ಹೇಳಿದ್ದಾರೆ.
'ಮಂಕಿ ಸೀನ'ನಿಗೆ ಫಿದಾ ಆದ ರಾಮ್ ಗೋಪಾಲ್ ವರ್ಮಾ: ಧನಂಜಯ್ ಬಗ್ಗೆ ಹೇಳಿದ್ದೇನು?
ಧನಂಜಯ್ ಮಾಡಿರುವ ಟ್ವೀಟ್ ನಲ್ಲಿ ದೆಹಲಿ ಹಿಂಸಾಚಾರದ ಬಗ್ಗೆ ಎಲ್ಲಿಯೂ ಉಲ್ಲೇಖಿಸದಿದ್ದರು ಈ ವಾಕ್ಯಗಳು ದೆಹಲಿ ಹಿಂಸಾಚಾರದ ಬಗ್ಗೆ ಹೇಳುತ್ತಿದೆ ಎಂದು ಗೊತ್ತಾಗುತ್ತಿದೆ. ಧನಂಜಯ್ ಟ್ವೀಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಆರಂಭವಾದ ಹಿಂಸಾಚಾರ ಬಳಿಕ ತೀವ್ರಗೊಂಡಿತ್ತು. ನಂತರ ಹಲವೆಡೆ ನಡೆದ ಗಲಭೆಯಲ್ಲಿ ಅನೇಕರು ಮೃತಪಟ್ಟಿದ್ದು, 190ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಾಲಿವುಡ್ ಸ್ಟಾರ್ ರಿಚಾ ಚಡ್ಡಾ, ರವೀನಾ ಟಂಡನ್, ಸ್ವಾರಾ ಭಾಸ್ಕರ್, ಇಶಾ ಗುಪ್ತ, ಹನ್ಸಲ್ ಮೆಹ್ತಾ ಸೇರಿದಂತೆ ಸಾಕಷ್ಟು ಮಂದಿ ಸ್ಟಾರ್ಸ್ ಖಂಡಿಸಿ ಟ್ವೀಟ್ ಮಾಡಿದ್ದಾರೆ.