Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ನಡುವೆ ಹಸೆಮಣೆ ಏರಿದ ಸ್ಯಾಂಡಲ್ ವುಡ್ ಜೋಡಿ
ಕೊರೊನಾ ಲಾಕ್ ಡೌನ್ ನಿಂದ ಜನತೆ ಮನೆಯಿಂದ ಹೊರ ಬರದ ಸ್ಥಿತಿ ನಿರ್ಮಾಣವಾಗಿದೆ. ಕೊರೊನಾವನ್ನು ಮಟ್ಟಹಾಕಲೆ ಬೇಕೆಂದು ಪಣ ತೊಟ್ಟಿರುವ ಜನರು ಮನೆಯಲ್ಲಿಯೇ ಕಾಲಕಳೆಯುತ್ತಿದ್ದಾರೆ. ಈ ಸಮಯದಲ್ಲಿ ನಡೆಯಬೇಕಿದ್ದ ಸಾಕಷ್ಟು ಮದುವೆಗಳು ಮುಂದಕ್ಕೆ ಹೋಗಿದೆ.
ಆದರೆ ಕೆಲವರು ಲಾಕ್ ಡೌನ್ ನಡುವೆಯೂ ಸರಳವಾಗಿ ಹಸೆಮಣೆ ಏರುತ್ತಿದ್ದಾರೆ. ಇತ್ತೀಚಿಗಷ್ಟೆ ಸ್ಯಾಂಡಲ್ ವುಡ್ ನ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು, ಹೊಂಬಣ್ಣ ಸಿನಿಮಾ ಖ್ಯಾತಿಯ ನಟ ಧನುಗೌಡ ಬಹುಕಾಲದ ಗೆಳತಿ ಮತ್ತು ನೆನಪುಗಳು ಚಿತ್ರದ ಖ್ಯಾತಿಯ ರಾಣಿ ಅವರ ಜೊತೆ ಲಾಕ್ ಡೌನ್ ನಡುವೆಯೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಏಪ್ರಿಲ್ 10ರಂದು ಶಿವಮೊಗ್ಗದಲ್ಲಿ ನಡೆದ ಇವರ ಮದುವೆಗೆ ತೀರ ಆತ್ಮೀಯರು ಮಾತ್ರ ಭಾಗಿಯಾಗಿದ್ದರು. ಈ ಮೊದಲು ಇಬ್ಬರ ಮದುವೆ ದಾವಣಗೆರೆಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಸಲು ನಿರ್ಧರಿಸಿದ್ದರು. ಆದರೆ ಲಾಕ್ ಡೌನ್ ಕಾರಣ ಶಿವಮೊಗ್ಗದಲ್ಲಿ ಸರಳವಾಗಿ ಹಸೆಮಣೆ ಏರಿದ್ದಾರೆ.
ನಟ ಧನುಗೌಡ ಕನಕಪುರ ಮೂಲಕ ಸಾತನೂರಿನವರು. ಪತ್ನಿ ರಾಣಿ ರಾಣೆಬೆನ್ನೂರಿನ ರಟ್ಟೆಹಳ್ಳಿಯವರು. ಇಬ್ಬರು ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೂ ಮನೆಯವರ ಒಪ್ಪಿಗೆ ಸಿಕ್ಕ ಬಳಿಕ ಹಸೆಮಣೆ ಏರಿದ್ದಾರೆ.