Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅದ್ಧೂರಿ'ಯಾಗಿ ನಿಶ್ಚಿತಾರ್ಥ ಮಾಡಿಕೊಂಡ 'ಭರ್ಜರಿ' ಹುಡುಗ
ನಟ ಅರ್ಜುನ್ ಸರ್ಜಾ ಸೋದರಳಿಯ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾರ ಅವರ ನಿಶ್ಚಿತಾರ್ಥ ಸಂಪ್ರದಾಯವಾಗಿ ನೆರವೇರಿದೆ. ಬನಶಂಕರಿಯ ಧರ್ಮಗಿರಿ ದೇವಸ್ಥಾನದಲ್ಲಿ ಕುಟುಂಬ, ಬಂಧು-ಮಿತ್ರರ ಸುಮ್ಮಖದಲ್ಲಿ ಬಾಲ್ಯದ ಗೆಳತಿ ಪ್ರೇರಣಾಗೆ ಉಂಗುರ ತೊಡಿಸಿದರು.
ಈ ಮೂಲಕ ಸುಮಾರು 16 ವರ್ಷದ ಪ್ರೀತಿಗೆ ಅಧಿಕೃತವಾಗಿ ಮದುವೆ ಎಂಬ ಮುದ್ರೆ ಬಿದ್ದಿದೆ. ಕಲಾ ನಿರ್ದೇಶಕ ಅರುಣ್ ಸಾಗರ್ ನಿರ್ಮಿಸಿದ್ದ ತೆಂಗಿನ ಗರಿಯ ಹಸಿರು ತಳಿರು-ತೋರಣಗಳ ವೇದಿಕೆಯಲ್ಲಿ ಪ್ರೇರಣಾ ಮತ್ತು ಧ್ರುವ ಪರಸ್ಪರ ಉಂಗುರ ಬದಲಿಸಿಕೊಂಡರು.
ಧ್ರುವ ಸರ್ಜಾ ಮತ್ತು ಪ್ರೇರಣ ನಿಶ್ಚಿತಾರ್ಥದಲ್ಲಿ ಕಂಡು ಬಂದ ವಿಶೇಷಗಳು
ಇದಕ್ಕೂ ಮುಂಚೆ ಗೋ ಪೂಜೆ, ಮಂತ್ರ ಘೋಷಣೆ, ಸೇರಿದಂತೆ ಹಲವು ರೀತಿ ಶಾಸ್ತ್ರಗಳನ್ನ ನೆರವೇರಿಸಲಾಗಿತ್ತು. ಈ ಸಂಪ್ರದಾಯ ಕಾರ್ಯಕ್ರಮಗಳಲ್ಲಿ ಎರಡು ಕುಟುಂಬದವರು ಭಾಗವಹಿಸಿದ್ದರು.
11 ಗಂಟೆಗೆ ಉಂಗುರ ಬದಲಿಸಿಕೊಳ್ಳಲಿರುವ ಧ್ರುವ-ಪ್ರೇರಣಾ
ಇನ್ನು ಧ್ರುವ ಸರ್ಜಾ ಅವರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ, ಹಲವು ಗಣ್ಯರು ಆಗಮಿಸಿ ನವಜೋಡಿಗಳು ಶುಭಕೋರಿದರು. ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರವಿಶಂಕರ್, ವಿನೋದ್ ಪ್ರಭಾಕರ್, ನಿರ್ದೇಶಕ ಹರ್ಷ, ಮಹೇಶ್ ಗೌಡ, ಚೇತನ್, ನಟ ಪ್ರಥಮ್, ನಿರ್ಮಾಪಕ ಕೆ ಮಂಜು ಸೇರಿದಂತೆ ಹಲವರು ಭಾಗಿಯಾಗಿದ್ದರು.