Don't Miss!
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- News CAA: ಸಿಎಎ ಜಾರಿ ಪ್ರಶ್ನಿಸಿ 230ಕ್ಕೂ ಹೆಚ್ಚು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ
- Finance ಆಧಾರ್ ಉಚಿತ ಅಪ್ಡೇಟ್ ದಿನಾಂಕ ಜೂ.14ರವರೆಗೆ ವಿಸ್ತರಣೆ: ಆನ್ಲೈನ್ನಲ್ಲಿ ಹೀಗೆ ನವೀಕರಿಸಿ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅದ್ಧೂರಿ'ಯಾಗಿ ನಿಶ್ಚಿತಾರ್ಥ ಮಾಡಿಕೊಂಡ 'ಭರ್ಜರಿ' ಹುಡುಗ
ನಟ ಅರ್ಜುನ್ ಸರ್ಜಾ ಸೋದರಳಿಯ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾರ ಅವರ ನಿಶ್ಚಿತಾರ್ಥ ಸಂಪ್ರದಾಯವಾಗಿ ನೆರವೇರಿದೆ. ಬನಶಂಕರಿಯ ಧರ್ಮಗಿರಿ ದೇವಸ್ಥಾನದಲ್ಲಿ ಕುಟುಂಬ, ಬಂಧು-ಮಿತ್ರರ ಸುಮ್ಮಖದಲ್ಲಿ ಬಾಲ್ಯದ ಗೆಳತಿ ಪ್ರೇರಣಾಗೆ ಉಂಗುರ ತೊಡಿಸಿದರು.
ಈ ಮೂಲಕ ಸುಮಾರು 16 ವರ್ಷದ ಪ್ರೀತಿಗೆ ಅಧಿಕೃತವಾಗಿ ಮದುವೆ ಎಂಬ ಮುದ್ರೆ ಬಿದ್ದಿದೆ. ಕಲಾ ನಿರ್ದೇಶಕ ಅರುಣ್ ಸಾಗರ್ ನಿರ್ಮಿಸಿದ್ದ ತೆಂಗಿನ ಗರಿಯ ಹಸಿರು ತಳಿರು-ತೋರಣಗಳ ವೇದಿಕೆಯಲ್ಲಿ ಪ್ರೇರಣಾ ಮತ್ತು ಧ್ರುವ ಪರಸ್ಪರ ಉಂಗುರ ಬದಲಿಸಿಕೊಂಡರು.
ಧ್ರುವ ಸರ್ಜಾ ಮತ್ತು ಪ್ರೇರಣ ನಿಶ್ಚಿತಾರ್ಥದಲ್ಲಿ ಕಂಡು ಬಂದ ವಿಶೇಷಗಳು
ಇದಕ್ಕೂ ಮುಂಚೆ ಗೋ ಪೂಜೆ, ಮಂತ್ರ ಘೋಷಣೆ, ಸೇರಿದಂತೆ ಹಲವು ರೀತಿ ಶಾಸ್ತ್ರಗಳನ್ನ ನೆರವೇರಿಸಲಾಗಿತ್ತು. ಈ ಸಂಪ್ರದಾಯ ಕಾರ್ಯಕ್ರಮಗಳಲ್ಲಿ ಎರಡು ಕುಟುಂಬದವರು ಭಾಗವಹಿಸಿದ್ದರು.
11 ಗಂಟೆಗೆ ಉಂಗುರ ಬದಲಿಸಿಕೊಳ್ಳಲಿರುವ ಧ್ರುವ-ಪ್ರೇರಣಾ
ಇನ್ನು ಧ್ರುವ ಸರ್ಜಾ ಅವರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ, ಹಲವು ಗಣ್ಯರು ಆಗಮಿಸಿ ನವಜೋಡಿಗಳು ಶುಭಕೋರಿದರು. ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರವಿಶಂಕರ್, ವಿನೋದ್ ಪ್ರಭಾಕರ್, ನಿರ್ದೇಶಕ ಹರ್ಷ, ಮಹೇಶ್ ಗೌಡ, ಚೇತನ್, ನಟ ಪ್ರಥಮ್, ನಿರ್ಮಾಪಕ ಕೆ ಮಂಜು ಸೇರಿದಂತೆ ಹಲವರು ಭಾಗಿಯಾಗಿದ್ದರು.