Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ತನಿಖೆಗೆ ಸಿಸಿಬಿ : ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ
ನಟ ದುನಿಯಾ ವಿಜಯ್ ಕಿಡ್ನಾಪ್ ಹಾಗೂ ಹಲ್ಲೆ ಪ್ರಕರಣ ಇನ್ನಷ್ಟು ಬಿಗಿ ಆಗುತ್ತಿದೆ. ಕೋರ್ಟ್ ಗೆ ಇಂದು ರಜೆ ಇರುವ ಕಾರಣ ಬೇಲ್ ಸಿಗುವುದು ಅನುಮಾನವಾಗಿದೆ. ಸದ್ಯ ಈ ಪ್ರಕರಣಕ್ಕೆ ಸಿಸಿಬಿ ಪೋಲೀಸರು ಎಂಟ್ರಿ ಕೊಟ್ಟಿದ್ದಾರೆ.
ದುನಿಯಾ ವಿಜಯ್ ಮೇಲೆ ಮತ್ತೊಂದು ಕೇಸ್ : ನಿವೃತ್ತ ಯೋಧನಿಗೆ ಕೋಲೆ ಬೆದರಿಕೆ ಆರೋಪ
ವೈಯಾಲಿಕಾವಲ್ ಪೊಲೀಸ್ ಠಾಣೆಗೆ ಸಿಸಿಬಿ ಅಧಿಕಾರಿಗಳು ಆಗಮಿಸಿದ್ದಾರೆ. ದುನಿಯಾ ವಿಜಯ್ ಮೇಲೆ ಈ ಹಿಂದೆಯಿಂದ ಸಾಲು ಸಾಲು ಪ್ರಕರಣಗಳು ಇದ್ದು, ಈ ಕಾರಣ ಕೇಸ್ ಸಿಸಿಬಿ ಗೆ ಹೋಗಿದೆ.
ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣದಲ್ಲಿ ದುನಿಯಾ ವಿಜಯ್ ಬಂಧನ
ಈಗಾಗಲೇ ಪಾನಿಪೂರಿ ಕಿಟ್ಟಿ ತಂಡದ ವಿರುದ್ಧ ದುನಿಯಾ ವಿಜಯ್ ಪ್ರತಿ ದೂರು ನೀಡಿದ್ದಾರೆ. ''ಪೊಲೀಸರ ಮುಂದೆಯೇ ನನಗೆ ದಿಚ್ಚಿ ಹೊಡೆದಿದ್ದಾನೆ ಹಾಗೂ ನನ್ನನ್ನು ಉಳಿಸೊಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ'' ಎಂದು ದೂರಿನಲ್ಲಿ ದುನಿಯಾ ವಿಜಯ್ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ''ಅದು ಯಾರೇ ಆಗಿದ್ದರು ಅಷ್ಟೇ ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ.'' ಎಂದಿದ್ದಾರೆ.
ಅಂದಹಾಗೆ, ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಕಾಂಪಿಟೇಷನ್ ನಡೆಯುತ್ತಿತ್ತು. ಈ ವೇಳೆ ದುನಿಯಾ ವಿಜಿ ತಂಡ ಹಾಗೂ ಟ್ರೈನರ್ ಮಾರುತಿ ಗೌಡ ನಡುವೆ ಜಗಳ ಶುರುವಾಗಿದೆ. ಬಳಿಕ ಮಾರುತಿ ಗೌಡ ಎನ್ನುವವರನ್ನ ದುನಿಯಾ ವಿಜಯ್ ಹಾಗೂ ಮಣಿಪ್ರಸಾದ್ ಕಿಡ್ನಾಪ್ ಮಾಡಿದ್ದಾರೆ. ಕಾರಿನಲ್ಲಿ ಕರೆದೊಯ್ದಿದ್ದು, ಹಲ್ಲೆ ಮಾಡಿದ್ದಾರೆ ಎಂದು ಪಾನಿಪುರಿ ಕಿಟ್ಟಿ ಆರೋಪ ಮಾಡಿದ್ದರು.