Don't Miss!
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- News Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದುನಿಯಾ ವಿಜಯ್
ಬಹಳಷ್ಟು ದಿನಗಳಿಂದಲೂ ದುನಿಯಾ ವಿಜಯ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡುತ್ತಲೇ ಇತ್ತು. ಇಂದು ಅವರು ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗುವ ಮೂಲಕ ಈ ಸುದ್ದಿಗೆ ಮತ್ತೆ ಜೀವ ಬಂದಿದೆ. ಆದರೆ ಸತ್ಯಾಸತ್ಯತೆಗಳು ಇನ್ನಷ್ಟೇ ಗೊತ್ತಾಗಬೇಕು.
ನಟ ದುನಿಯಾ ವಿಜಯ್ ಅವರಿಗೆ ಇಬ್ಬರು ಪತ್ನಿಯರು ಎಂಬ ಮಾತುಗಳು ಕೇಳಿಬರುತ್ತಿವೆ. ಈಗ ಅವರು ವಿಚ್ಛೇದನ ನೀಡುತ್ತಿರುವುದು ಮೊದಲ ಪತ್ನಿ ನಾಗರತ್ನ ಅವರಿಗೆ ಎನ್ನುತ್ತವೆ ಮೂಲಗಳು. ಸುಮಾರು ಹದಿನಾಲ್ಕು ವರ್ಷಗಳ ದಾಂಪ್ಯದ ಫಲವಾಗಿ ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.
"ತಮ್ಮ ಪತ್ನಿ ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ನಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂಬ ಆರೋಪಗಳನ್ನು ನಾಗರತ್ನ ಅವರ ವಿರುದ್ಧ ದುನಿಯಾ ವಿಜಯ್ ಮಾಡಿದ್ದಾರೆ ಎಂಬ ಸುದ್ದಿಗಳು ಕೇಳಿಬರುತ್ತಿವೆ. ಸ್ವಲ್ಪ ಸಮಯದ ಬಳಿಕ ಸಂಪೂರ್ಣ ವಿವರಗಳು ಲಭ್ಯವಾಗಬಹುದು.
ಈ ಸುದ್ದಿ ನಿಜವೇ ಎಂದು ದುನಿಯಾ ವಿಜಯ್ ಅವರನ್ನು ಮಾಧ್ಯಮಗಳು ಸಂಪರ್ಕಿಸಲಾಗಿ, ಅವರು ಉತ್ತರಿಸಲು ನಿರಾಕರಿಸಿದ್ದು, ಸ್ವಲ್ಪ ಕಾಲಾವಕಾಶ ಕೊಡಿ ಬಳಿಕ ಎಲ್ಲವನ್ನೂ ಸ್ಪಷ್ಟಪಡಿಸುತ್ತೇನೆ ಎಂದಿದ್ದಾರೆ. ವಿವರಗಳಿಗೆ ನಿರೀಕ್ಷಿಸಲಾಗಿದೆ. [ಶುಭಾ ಪೂಂಜಾ ಪ್ರತಿಕ್ರಿಯೆ] (ಒನ್ಇಂಡಿಯಾ ಕನ್ನಡ)