Don't Miss!
- Sports IPL 2024: ಚಿನ್ನಸ್ವಾಮಿ ಸಾಮ್ರಾಜ್ಯದಲ್ಲಿ ರಾಜ್ಯಭಾರ ಮಾಡಿದ ವಿರಾಟ್; KKRಗೆ ಸವಾಲಿನ ಗುರಿ ನೀಡಿದ RCB
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮರಗಳನ್ನು ಕಡಿದು ಹೆಲಿ ಟೂರಿಸಂ ಆರಂಭಕ್ಕೆ ದುನಿಯಾ ವಿಜಯ್ ವಿರೋಧ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮರಗಳನ್ನು ಕಡಿದು ಹೆಲಿ ಟೂರಿಸಂ ಆರಂಭಿಸುವ ಪ್ರವಾಸೋದ್ಯಮ ಇಲಾಖೆ ನಿರ್ಧಾರದ ವಿರುದ್ಧ ಚಲನಚಿತ್ರ ನಟ ದುನಿಯಾ ವಿಜಯ್ ಬೇಸರ ವ್ಯಕ್ತಪಡಿಸಿದ್ದಾರೆ.
Recommended Video
ಈ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ವಿರೋಧ ವ್ಯಕ್ತಪಡಿಸಿರುವ ನಟ ವಿಜಯ್, ''ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ, ಮರ ಕಡಿಯೋದನ್ನ ಬಿಟ್ಟು ಪರ್ಯಾಯವಾಗಿ ಹೆಲಿ ಟೂರಿಸಂ ಮಾಡೋ ಪ್ಲಾನ್ ಮಾಡಿ'' ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಅಭಿಮಾನಿಗಳು ಬೀದಿಗೆ ಇಳಿದರೆ ಕತೆ ಬೇರೆಯಾಗುತ್ತೆ: ದುನಿಯಾ ವಿಜಯ್ ಎಚ್ಚರಿಕೆ
''ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಹೇಗಿರೋತ್ತೋ, ಮರ ಕಡಿದು ಪರಿಸರ ಹಾಳು ಮಾಡಿ ಹೆಲಿ ಟೂರಿಸಂ ಮಾಡೋದಕ್ಕು ಅಷ್ಟೆ ವಿರೋಧ ಇರುತ್ತೆ. ಸೇವ್ ಮೈಸೂರು ಕ್ಯಾಂಪೇನ್ಗೆ ನನ್ನ ಬೆಂಬಲ ಇದೆ. ಸರ್ಕಾರ ಮತ್ತೆ ಯೋಚನೆ ಮಾಡಿ ಯೋಜನೆ ಕೈಗೆತ್ತಿಕೊಳ್ಳಲಿ'' ಎಂದು ದುನಿಯಾ ವಿಜಯ್ ಸೇವ್ ಮೈಸೂರು ಅಭಿಯಾನ ಬೆಂಬಲಿಸಿದ್ದಾರೆ.
''ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡುವ ಸಲುವಾಗಿ ಲಲಿತ ಮಹಲ್ ಹೋಟೆಲ್ ಮುಂಭಾಗದ ಮರಗಳನ್ನ ಕಡಿಯೋ ವಿಚಾರ ಗಮನಕ್ಕೆ ಬಂತು. ನಾವುಗಳು ಮರ ಬೆಳೆಸೋಕೆ ಆಗದಿದ್ದರೂ ಮರ ಕತ್ತರಿಸಲು ಮುಂದಾಗಬಾರದು. ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಟೈಂ ಅಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದಾಗ ಖುಷಿ ಆಗುತ್ತೆ'' ಎಂದು ಮೈಸೂರಿನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಹೆಲಿ ಟೂರಿಸಂ ಸಲುವಾಗಿ ನೂರಾರು ಮರಗಳ ಕಡಿಯಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಈಗಾಗಲೇ ಮರಗಳನ್ನು ಗುರುತು ಮಾಡಿದೆ. ಇದಕ್ಕೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿ ''ಸೇವ್ ಮೈಸೂರು'' ಅಭಿಮಾನಿ ನಡೆಸುತ್ತಿದ್ದಾರೆ. ಈ ಅಭಿಯಾನಕ್ಕೆ ಈಗ ದುನಿಯಾ ವಿಜಯ್ ಬೆಂಬಲಿಸಿದ್ದಾರೆ.