Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆತ ನಿರಪರಾಧಿ ಆಗಿದ್ದರೆ ಬೆನ್ನೆಲುಬಾಗಿ ನಿಲ್ಲೋಣ: ಜೊಮ್ಯಾಟೊ ಬಾಯ್ ಬಗ್ಗೆ ವಿಜಯ್ ಪ್ರತಿಕ್ರಿಯೆ
ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕೆಲಸ ಕಳೆದುಕೊಂಡಿರುವ ಜೊಮ್ಯಾಟೊ ಡೆಲಿವರಿ ಬಾಯ್ ಕಾಮರಾಜ್ ಗೆ ಅನೇಕರು ಬೆಂಬಲ ಸೂಚಿಸುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಾಮರಾಜ್ ಮತ್ತು ಯುವತಿ ಹಿತೇಶಾ ಚಂದ್ರಾಣಿ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಸಹ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಜೊಮ್ಯಾಟೊ ಬಾಯ್ ಘಟನೆ ಬಗ್ಗೆ ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಕೂಡ ಪ್ರತಿಕ್ರಿಯೆ ನೀಡಿ, ಕಾಮರಾಜ್ಗೆ ಬೆಂಬಲ ನೀಡಿದ್ದಾರೆ.
ಜೊಮ್ಯಾಟೊ ಡೆಲಿವರಿ ಬಾಯ್ ಪರ ನಿಂತ ನಟಿ ಪ್ರಣಿತಾ ಮತ್ತು ಪರಿಣೀತಿ
ಇದೀಗ ಸ್ಯಾಂಡಲ್ ವುಡ್ ನಟ ದುನಿಯ ವಿಜಯ್ ಈ ಘಟನೆ ಬಗ್ಗೆ ಮೌನ ಮುರಿದಿದ್ದಾರೆ. ಫೇಸ್ ಬುಕ್ನಲ್ಲಿ ಬರೆದುಕೊಂಡಿರುವ ವಿಜಯ್, ಒಂದು ವೇಳೆ ಆತ ನಿರಪರಾಧಿ ಆಗಿದ್ದರೆ ಆತನ ಬೆಂಬಲಕ್ಕೆ ನಾವೆಲ್ಲ ಬೆನ್ನೆಲುಬಾಗಿ ನಿಲ್ಲೋಣ ಎಂದು ಹೇಳಿದ್ದಾರೆ. ಮುಂದೆ ಓದಿ...
ಎಲ್ಲರೋ ಬೆಂಬಲಕ್ಕೆ ನಿಲ್ಲೋಣ
'ಸುಮಾರು 4 ದಿನಗಳಿಂದ ಸುದ್ದಿಯಲ್ಲಿರುವ Zomato ಹುಡುಗ ಕಾಮರಾಜ್ ಪ್ರಕರಣವನ್ನು ತಿಳಿದುಕೊಂಡೆ. ಕರ್ನಾಟಕ ಪೊಲೀಸರು ನಿಷ್ಪಕ್ಷಪಾತವಾದ ತನಿಖೆ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ. ಒಂದು ವೇಳೆ ಆತ ನಿರಪರಾಧಿ ಆಗಿದ್ದರೆ ಆತನ ಬೆಂಬಲಕ್ಕೆ ನಾವೆಲ್ಲ ಬೆನ್ನೆಲುಬಾಗಿ ನಿಲ್ಲೋಣ. ಯಾವುದೇ ಕಾರಣಕ್ಕೂ ಆತನಿಗೆ ಅನ್ಯಾಯ ಆಗಬಾರದು ಎಂದು ಬಯಸುತ್ತೇನೆ' ಎಂದು ಹೇಳಿದ್ದಾರೆ.
ಆತನ ದೂರನ್ನು ಪರಿಗಣಿಸಿ, ತನಿಖೆಯಾಗಬೇಕು
'ಆತನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇರುವುದರಿಂದ ಈತನ ದೂರನ್ನು ಸಹ ಪರಿಗಣಿಸಿ, ಅದರಲ್ಲೂ ಸಹ ತನಿಖೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ. ಕಾಮರಾಜ್ ಪರವಾಗಿ ನಿಂತಿರುವ ರೂಪೇಶ್ ರಾಜಣ್ಣ ಅವರಿಗೆ ನನ್ನ ಕಡೆಯಿಂದ ಹೃತ್ಪೂರ್ವಕ ಅಭಿನಂದನೆಗಳು' ಎಂದು ಬರೆದುಕೊಂಡಿದ್ದಾರೆ.
ದುನಿಯಾ ವಿಜಯ್ ಮನೆಗೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ
ಕಾಮರಾಜ್ ಗೆ ವ್ಯಾಪಕ ಬೆಂಬಲ
ಜೊಮ್ಯಾಟೊ ಬಾಯ್ ಕಾಮರಾಜ್ ಹಲ್ಲೆ ಮಾಡಿದ್ದಾರೆ ಎಂದು ಯುವತಿ ಹಿತೇಶಾ ಆರೋಪ ಮಾಡಿ, ವಿಡಿಯೋ ಮೂಲಕ ಬಹಿರಂಗ ಪಡಿಸಿದ ನಂತರ ಈ ಘಟನೆ ರಾಷ್ಟ್ರ ಮಟ್ಟದ ಗಮನ ಸೆಳೆಯಿತು. ಬಳಿಕ ಕಾಮರಾಜ್ ವಿಡಿಯೋ ಮೂಲಕ ತಾನು ಹಲ್ಲೆ ಮಾಡಿಲ್ಲ, ಯುವತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ನಂತರ ಸಾಮಾಜಿಕ ಜಾಲತಾಣದಲ್ಲಿ ಕಾಮರಾಜ್ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಟ್ವಿಟ್ಟರ್ ನಲ್ಲಿ ಕಾಮರಾಜ್ ಗೆ ಬೆಂಬಲ ಸೂಚಿಸಿ ಅಭಿಯಾನ ಕೂಡ ನಡೆಯುತ್ತಿದೆ.
Recommended Video
ಪರಿಣೀತಿ-ಪ್ರಣಿತಾ ಟ್ವೀಟ್
ಈ ಘಟನೆ ಬಗ್ಗೆ ನಟಿ ಪರಿಣೀತಿ ಚೋಪ್ರಾ ಟ್ವೀಟ್ ಮಾಡಿ, ಜೊಮ್ಯಾಟೊ ಇಂಡಿಯಾ ದಯವಿಟ್ಟು ಸತ್ಯವನ್ನು ಹುಡುಕಿ ಸಾರ್ವಜನಿಕವಾಗಿ ವರದಿ ಮಾಡಿ. ವ್ಯಕ್ತಿ ನಿರಪರಾಧಿಯಾಗಿದ್ದರೆ (ನಾನು ಆತನನ್ನು ನಂಬುತ್ತೇನೆ) ಹಲ್ಲೆ ಮಾಡಿದ ಮಹಿಳೆಗೆ ದಂಡ ವಿಧಿಸಿ. ಇದು ಅಮಾನವೀಯ, ನಾಚಿಕೆಗೇಡು ಮತ್ತು ಹೃದಯ ವಿದ್ರಾವಕವಾಗಿದೆ. ದಯವಿಟ್ಟು ನಾನು ಹೇಗೆ ಸಹಾಯ ಮಾಡಬಹುದು ಎಂದು ತಿಳಿಸಿ' ಎಂದಿದ್ದರು. ಇನ್ನು ನಟಿ ಪ್ರಣಿತಾ ಕೂಡ ಟ್ವೀಟ್ ಮಾಡಿ ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದರು.