Don't Miss!
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಆರೋಗ್ಯ ಗಂಭೀರ
ಕನ್ನಡ ಚಲನಚಿತ್ರ ನಟ ದುನಿಯಾ ವಿಜಯ್ ಅವರ ತಾಯಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 20 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ವಿಜಯ್ ತಾಯಿ ನಾರಾಯಣಮ್ಮ ಹಾಸಿಗೆ ಹಿಡಿದಿದ್ದಾರೆ.
Recommended Video
ವೈದ್ಯರು ಖುದ್ದು ಮನೆಗೆ ಬಂದು ವಿಜಯ್ ಅವರ ತಾಯಿಯ ಆರೋಗ್ಯ ವಿಚಾರಿಸಿ ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ದಿನದಿಂದ ದಿನಕ್ಕೆ ನಾರಾಯಣಮ್ಮನ ಆರೋಗ್ಯ ಕ್ಷೀಣಿಸುತ್ತಿದೆ ವಿನಃ ಸುಧಾರಣೆ ಕಾಣ್ತಿಲ್ಲ ಎಂದು ತಿಳಿದು ಬಂದಿದೆ.
ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು: ನಟನಿಗೂ ಸಿಕ್ಕಿಲ್ಲ ಆಸ್ಪತ್ರೆ ಬೆಡ್
ಅಮ್ಮನ ಆರೋಗ್ಯ ಕುರಿತು ದುನಿಯಾ ವಿಜಯ್ ಸಹ ಪ್ರತಿಕ್ರಿಯಿಸಿದ್ದು, ''ಅಮ್ಮನಿಗೆ ಬ್ರೇನ್ ಸ್ಟ್ರೋಕ್ ಆಗಿದ್ದ ಕಾರಣ ಆರೋಗ್ಯ ತೀವ್ರ ಹದಗೆಟ್ಟಿದೆ. ಕೊರೊನಾದಿಂದ ಚೇತರಿಕೆ ಕಂಡ ಮೇಲೆ ಸಮಸ್ಯೆ ಎಲ್ಲಾ ಬಗೆಹರಿಯಿತು ಎಂದುಕೊಂಡಿದ್ವಿ. ಆದರೆ, ಈ ರೀತಿ ಮತ್ತೊಮ್ಮೆ ಸಮಸ್ಯೆ ಬಂದಿದೆ. ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ಸುಧಾರಣೆ ಕಾಣ್ತಿಲ್ಲ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಎನ್ನುವುದಷ್ಟೇ ನನ್ನ ಆಸೆ'' ಎಂದು ಹೇಳಿಕೊಂಡಿದ್ದಾರೆ.
ಅಂದ್ಹಾಗೆ, ಕೆಲವು ದಿನಗಳ ಹಿಂದೆಯಷ್ಟೇ ದುನಿಯಾ ವಿಜಯ್ ಅವರ ತಾಯಿ ಮತ್ತು ತಂದೆಗೆ ಕೋವಿಡ್ ಸೋಂಕು ತಗುಲಿತ್ತು. ಮನೆಯಲ್ಲಿ ಕ್ವಾರಂಟೈನ್ ಮಾಡಿ, ಸ್ವತಃ ದುನಿಯಾ ವಿಜಯ್, ಪತ್ನಿ ಕೀರ್ತಿ ಹಾಗೂ ಮಕ್ಕಳು ಆರೈಕೆ ಮಾಡಿದ್ದರು. ಆಮೇಲೆ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರು.
ಆದ್ರೀಗ, ತಾಯಿಯ ಆರೋಗ್ಯ ತೀವ್ರವಾಗಿ ಕೆಟ್ಟಿದೆ. ಆಸ್ಪತ್ರೆಗೆ ಸೇರಲು ನಾರಾಯಣಮ್ಮನಿಗೆ ಇಷ್ಟವಿಲ್ಲದ ಕಾರಣ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ವೈದ್ಯರು ಪ್ರತಿದಿನ ಚಿಕಿತ್ಸೆ ಕೊಡ್ತಿದ್ದು, ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವನ್ನು ದುನಿಯಾ ವಿಜಯ್ ವ್ಯಕ್ತಪಡಿಸಿದ್ದಾರೆ.