Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಡಿಯೂರಪ್ಪ ಭೇಟಿಗೆ 'ಗಣೇಶ' ಬಂದ.. ಏನ್ ಏನ್ ತಂದ?
ಬಿಜೆಪಿ ರಾಜ್ಯಾಧ್ಯಕ್ಷರಾಗಿ 4ನೇ ಬಾರಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಸ್ಯಾಂಡಲ್ ವುಡ್ ನ ನಟ ಗೋಲ್ಡನ್ ಸ್ಟಾರ್ ಗಣೇಶ್ ಮತ್ತವರ ಪತ್ಮಿ ಶಿಲ್ಪಾ ಗಣೇಶ್ ಹಾಗೂ ನಟಿ ರಕ್ಷಿತಾ ಮತ್ತು ಅವರ ಪತಿ ನಿರ್ದೇಶಕ ಕಮ್ ನಟ ಜೋಗಿ ಪ್ರೇಮ್ ಅವರು ಭೇಟಿ ಮಾಡಿ ಶುಭಾಶಯ ತಿಳಿಸಿದ್ದಾರೆ.
ನಟ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಅವರು ಬಿಜೆಪಿ ಪಕ್ಷದಲ್ಲಿ ಸಕ್ರೀಯರಾಗಿ ಪಾಲ್ಗೊಂಡಿರುವವರು. ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಏಪ್ರಿಲ್ 2013ರಲ್ಲಿ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಇವರು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಸಂಘದ ಉಪಾಧ್ಯಕ್ಷೆಯಾಗಿದ್ದಾರೆ.[ಚಿತ್ರಗಳು : ಬಿಎಸ್&ವೈಗೆ ಅಧ್ಯಕ್ಷ ಪಟ್ಟ, ಬಿಜೆಪಿ ಕಚೇರಿ ಮುಂದೆ ದೀಪಾವಳಿ]
ಆದರೆ ಗಣೇಶ್ ಅವರು ರಾಜಕೀಯದಲ್ಲಿ ಅಷ್ಟಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲಿಲ್ಲವಾದರೂ, ತಮ್ಮ ಪತ್ನಿಗೆ ಪ್ರೋತ್ಸಾಹ ಕೊಡುತ್ತಾರೆ. ಈ ನಿಟ್ಟಿನಲ್ಲಿ ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿಎಸ್ ವೈ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.
ಇನ್ನು ಇವರು ಮಾತ್ರವಲ್ಲದೇ ನಟಿ ರಕ್ಷಿತಾ ದಂಪತಿಗಳು ಕೂಡ ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಶುಭ ಕೋರಿದರು.[ಬೇವು ಉಂಡಿದ್ದ ಯಡಿಯೂರಪ್ಪಗೆ ಯುಗಾದಿ ಬೆಲ್ಲ: ರಾಜ್ಯಾಧ್ಯಕ್ಷರಾಗಿ ಆಯ್ಕೆ]
ನಟಿ ರಕ್ಷಿತಾ ಅವರು ಬಿಜೆಪಿ ಪಕ್ಷದಲ್ಲಿ ಸದಸ್ಯೆ ಆಗಿರುವುದರಿಂದ ಅವರು ಯಡಿಯೂರಪ್ಪ ಅವರಿಗೆ ಅವರ ನಿವಾಸಕ್ಕೆ ಪತಿ ಪ್ರೇಮ್ ಅವರ ಜೊತೆ ಖುದ್ದಾಗಿ ಭೇಟಿ ನೀಡಿ ಶುಭ ಕೋರಿದ್ದಾರೆ.
ತಾರೆಗಳು ಬಿ.ಎಸ್ ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಚಿತ್ರಗಳನ್ನು ನೋಡಿ ಕೆಳಗಿನ ಸ್ಲೈಡ್ಸ್ ಗಳಲ್ಲಿ...