Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧರ್ಮಸ್ಥಳದಲ್ಲಿ ನಟ ಗಣೇಶ್ ತಮ್ಮನ ಪ್ರೇಮ ವಿವಾಹ
ಇವರಿಬ್ಬರ ಮದುವೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿ ಸಮ್ಮುಖದಲ್ಲಿ ನೆರವೇರಿದೆ. ಮಹೇಶ್ ಅವರ ಭಾವ, ವಧು ಪ್ರೇಮಾ ಅವರ ತಂದೆತಾಯಿ ಸೇರಿದಂತೆ ಕೆಲವೇ ಕೆಲವು ಮಂದಿ ಸಮ್ಮುಖದಲ್ಲಿ ಮದುವೆ ನಡೆದಿದೆ. ಸ್ವತಃ ಗೋಲ್ಡನ್ ಸ್ಟಾರ್ ಗಣೇಶ್ ಅವರು ಈ ಮದುವೆಗೆ ಆಗಮಿಸಿರಲಿಲ್ಲ.
ಮಹೇಶ್ ಗೆ ಈಗಾಗಲೆ ಮದುವೆ ನಿಗದಿಯಾಗಿತ್ತು ಎನ್ನಲಾಗಿದೆ. ಯಡಿಯೂರು ದೇವಸ್ಥಾನದಲ್ಲಿ ಮದುವೆ ಏರ್ಪಾಟಾಗಿತ್ತು. ಆದರೆ ಮಹೇಶ್ ಮತ್ತೊಬ್ಬ ಹುಡುಗಿ ವನಜಾ ಎಂಬುವವರನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಇವರಿಬ್ಬರ ಮದುವೆ ಮಾರ್ಚ್ 2, 2012ಕ್ಕೆ ನಿಗದಿಯಾಗಿತ್ತು. ಆದರೆ ಮಹೇಶ್ ಹೊಸ ಹುಡುಗಿ ಸೌಮ್ಯಾ ಎಂಬಾಕೆಯ ಜೊತೆ ಮದುವೆ ಮಾಡಿಕೊಂಡು ಪರಾರಿಯಾಗಿದ್ದ ಎಂಬ ಸುದ್ದಿಯೂ ಇತ್ತು. ಈಗ ಪ್ರೇಮಾ ಕೈಹಿಡಿಯುವ ಮೂಲಕ ಮಹೇಶ್ ಲವ್ ಸ್ಟೋರಿಗೆ ಹೊಸ ತಿರುವು ಸಿಕ್ಕಿದೆ.
ಕಳೆದ ಎಂಟು ತಿಂಗಳಿಂದ ನಾಪತ್ತೆಯಾಗಿದ್ದ ಮಹೇಶ್ ಮಾಧ್ಯಮಗಳ ಪ್ರತಿಕ್ರಿಯೆಗೂ ಲಭ್ಯವಿರಲಿಲ್ಲ. ಈಗ ದಿಢೀರ್ ಎಂದು ನೇಪಾಳಿ ಮೂಲದ ಪ್ರೇಮಾ ಅವರ ಕೈಹಿಡಿಯುವ ಮೂಲಕ ಮತ್ತೆ ಸುದ್ದಿ ಮಾಡಿದ್ದಾರೆ.
ಮಹೇಶ್ ಅವರು 'ಅಲೆಮಾರಿ' ಎಂಬ ಚಿತ್ರವನ್ನೂ ಕೈಗೆತ್ತಿಕೊಂಡಿದ್ದರು. ಈ ಚಿತ್ರಕ್ಕೆ ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳಬೇಕಾಗಿತ್ತು. ಚಿತ್ರದ ಮುಹೂರ್ತವೇನೋ ನೆರವೇರಿತು. ಆದರೆ ಚಿತ್ರ ನಾನಾ ಕಾರಣಗಳಿಗೆ ಸೆಟ್ಟೇರಲೇ ಇಲ್ಲ. ಯಾಕೋ ಏನೋ ಚಿತ್ರ ನಿರ್ದೇಶಕರು ಚಿತ್ರದ ಮೇಲೆ ಆಸೆ ಕೈಬಿಟ್ಟರು. (ಏಜೆನ್ಸೀಸ್)