Don't Miss!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳ ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧರ್ಮಸ್ಥಳದಲ್ಲಿ ನಟ ಗಣೇಶ್ ತಮ್ಮನ ಪ್ರೇಮ ವಿವಾಹ
ಇವರಿಬ್ಬರ ಮದುವೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿ ಸಮ್ಮುಖದಲ್ಲಿ ನೆರವೇರಿದೆ. ಮಹೇಶ್ ಅವರ ಭಾವ, ವಧು ಪ್ರೇಮಾ ಅವರ ತಂದೆತಾಯಿ ಸೇರಿದಂತೆ ಕೆಲವೇ ಕೆಲವು ಮಂದಿ ಸಮ್ಮುಖದಲ್ಲಿ ಮದುವೆ ನಡೆದಿದೆ. ಸ್ವತಃ ಗೋಲ್ಡನ್ ಸ್ಟಾರ್ ಗಣೇಶ್ ಅವರು ಈ ಮದುವೆಗೆ ಆಗಮಿಸಿರಲಿಲ್ಲ.
ಮಹೇಶ್ ಗೆ ಈಗಾಗಲೆ ಮದುವೆ ನಿಗದಿಯಾಗಿತ್ತು ಎನ್ನಲಾಗಿದೆ. ಯಡಿಯೂರು ದೇವಸ್ಥಾನದಲ್ಲಿ ಮದುವೆ ಏರ್ಪಾಟಾಗಿತ್ತು. ಆದರೆ ಮಹೇಶ್ ಮತ್ತೊಬ್ಬ ಹುಡುಗಿ ವನಜಾ ಎಂಬುವವರನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಇವರಿಬ್ಬರ ಮದುವೆ ಮಾರ್ಚ್ 2, 2012ಕ್ಕೆ ನಿಗದಿಯಾಗಿತ್ತು. ಆದರೆ ಮಹೇಶ್ ಹೊಸ ಹುಡುಗಿ ಸೌಮ್ಯಾ ಎಂಬಾಕೆಯ ಜೊತೆ ಮದುವೆ ಮಾಡಿಕೊಂಡು ಪರಾರಿಯಾಗಿದ್ದ ಎಂಬ ಸುದ್ದಿಯೂ ಇತ್ತು. ಈಗ ಪ್ರೇಮಾ ಕೈಹಿಡಿಯುವ ಮೂಲಕ ಮಹೇಶ್ ಲವ್ ಸ್ಟೋರಿಗೆ ಹೊಸ ತಿರುವು ಸಿಕ್ಕಿದೆ.
ಕಳೆದ ಎಂಟು ತಿಂಗಳಿಂದ ನಾಪತ್ತೆಯಾಗಿದ್ದ ಮಹೇಶ್ ಮಾಧ್ಯಮಗಳ ಪ್ರತಿಕ್ರಿಯೆಗೂ ಲಭ್ಯವಿರಲಿಲ್ಲ. ಈಗ ದಿಢೀರ್ ಎಂದು ನೇಪಾಳಿ ಮೂಲದ ಪ್ರೇಮಾ ಅವರ ಕೈಹಿಡಿಯುವ ಮೂಲಕ ಮತ್ತೆ ಸುದ್ದಿ ಮಾಡಿದ್ದಾರೆ.
ಮಹೇಶ್ ಅವರು 'ಅಲೆಮಾರಿ' ಎಂಬ ಚಿತ್ರವನ್ನೂ ಕೈಗೆತ್ತಿಕೊಂಡಿದ್ದರು. ಈ ಚಿತ್ರಕ್ಕೆ ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳಬೇಕಾಗಿತ್ತು. ಚಿತ್ರದ ಮುಹೂರ್ತವೇನೋ ನೆರವೇರಿತು. ಆದರೆ ಚಿತ್ರ ನಾನಾ ಕಾರಣಗಳಿಗೆ ಸೆಟ್ಟೇರಲೇ ಇಲ್ಲ. ಯಾಕೋ ಏನೋ ಚಿತ್ರ ನಿರ್ದೇಶಕರು ಚಿತ್ರದ ಮೇಲೆ ಆಸೆ ಕೈಬಿಟ್ಟರು. (ಏಜೆನ್ಸೀಸ್)