Just In
Don't Miss!
- News
ಉದ್ಯಮಿ ಅಜೀಂ ಪ್ರೇಮ್ಜಿ ವಿರುದ್ಧದ ಪ್ರಕರಣ ರದ್ದು
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನ ಖಂಡಿಸಿದ ನಟ ಜಗ್ಗೇಶ್

ಹಿರಿಯ ಪತ್ರಕರ್ತೆ, ಚಿಂತಕಿ, ಲಂಕೇಶ್ ಪತ್ರಿಕೆ ಸಂಪಾದಕಿ ಗೌರಿ ಲಂಕೇಶ್(55) ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಹತ್ಯೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಇದೀಗ, ನಟ ಜಗ್ಗೇಶ್ ಅವರ ಕೂಡ ಈ ಬಗ್ಗೆ ತಮ್ಮ ಆಕ್ರೋಶವನ್ನ ಹೊರ ಹಾಕಿದ್ದಾರೆ.
ಗೌರಿ ಲಂಕೇಶ್ ಅವರ ಹತ್ಯೆಯ ಬಗ್ಗೆ ತಮ್ಮ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಜಗ್ಗೇಶ್ '' ಇದೊಂದು ಹೇಯಕೃತ್ಯ, ಪೊಲೀಸರು ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು'' ಎಂದಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಾಥಮಿಕ ತನಿಖೆಯ ಮುಖ್ಯಾಂಶಗಳು
ಜಗ್ಗೇಶ್ ಅವರು ಮಾಡಿರುವ ಟ್ವೀಟ್ ಇಲ್ಲಿದೆ ನೋಡಿ
''ಗೌರಿ ಲಂಕೇಶ್ ಹತ್ಯೆ ಹೇಯಕೃತ್ಯ. ಬೆಂಗಳೂರಿಗೆ ಗನ್ ಚಾಕು ಚೂರಿ ಸಂಸ್ಕೃತಿ ತುಂಬ ಅಪಾಯಕಾರಿ. ಇದನ್ನ ಸರ್ಕಾರ ಆರಕ್ಷಕರು ಈಗಲೆ ಮಟ್ಟ ಹಾಕದಿದ್ದರೆ ಕಿಡಿ ಕಾಡ್ಗಿಚ್ಚಾಗುವುದು'' - ಜಗ್ಗೇಶ್, ನಟ
ಅಪರೂಪದ ಪತ್ರಕರ್ತೆ ಗೌರಿ ಲಂಕೇಶ್ ವ್ಯಕ್ತಿ ಪರಿಚಯ
ಸದ್ಯ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗೌರಿ ಲಂಕೇಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಸಾರ್ವಜನಿಕ ದರ್ಶನದ ನಂತರ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು.
ಮೋದಿ, ಬ್ರಾಹ್ಮಣರ ಕಂಡರೆ ಉರಿದುಬೀಳುತ್ತಿದ್ದ ಗೌರಿ