Don't Miss!
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- News ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ, ಕಾರಣ ಏನು?
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗನ ಕಾರು ಅಪಘಾತ: ದುರ್ಘಟನೆ ನಡೆದಿದ್ದು ಹೇಗೆಂದು ತಿಳಿಸಿದ ಜಗ್ಗೇಶ್
ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಕಾರು ಹೈದರಾಬಾದ್ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಈ ದುರ್ಘಟನೆ ಬಗ್ಗೆ ಜಗ್ಗೇಶ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
Recommended Video
''ಕೊರೋನ ಬಂದಾಗಿನಿಂದ ಹೊರ ಹೋಗಿಲ್ಲಾ ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಹೊರ ಹೋದ ಮಗ ಯತಿರಾಜ,ಅವನು ಪ್ರತಿಬಾರಿ ಅವನ ಇಷ್ಟದ ರಸ್ತೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆಬಿದ್ದಿದೆ!ರಾಯರದಯೇ ಹಾಗು ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವು ಇಲ್ಲ!'' ಎಂದಿದ್ದಾರೆ ಜಗ್ಗೇಶ್.
ರಾಯರು
ನನ್ನಜೊತೆ
ಸದ
ಇರುತ್ತಾರೆ
ಇದ್ದಾರೆ!ಇಂಥ
ಘಟನೆಗಳು
ಚಮತ್ಕಾರ
ನನ್ನ
ಬದುಕಲ್ಲಿ
ನಡೆವುದೆ
ನಾನಿದ್ದೀನೋ
ಇರುತ್ತೀನೋ
ನಿನ್ನ
ಜೊತೆ
ಯಾವಾಗಲು
ಎಂದು
ರಾಯರು
ಅವರ
ಪವಾಡ
ನಿರೂಪಿಸಲು!ನೆನ್ನೆ
ಪೂಜೆಯಲ್ಲಿ
ಕುಟುಂಬದ
ರಕ್ಷಣೆಗೆ
ಪ್ರಾರ್ಥಿಸಿದ್ದೆ!
ಸದ
ಅವರ
ಸ್ಮರಣೆಯಲ್ಲೆ
ಬದುಕುವ
ನನಗೆ
ಇದು
ಮತ್ತೊಂದು
ಪವಾಡ!ನಂಬಿ
ಕೆಟ್ಟವರಿಲ್ಲಾ
ಗುರುರಾಯರ!
ಎಂದು
ಗುರುರಾಯರ
ನೆನೆದಿದ್ದಾರೆ
ಜಗ್ಗೇಶ್.
ಜಗ್ಗೇಶ್ ನೀಡಿರುವ ಮಾಹಿತಿಯಂತೆ ಕಾರಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಸ್ಟೀರಿಂಗ್ ವ್ಹೀಲ್ ತಿರುಗಿಸಿದ ಪರಿಣಾಮ ಕಾರು ರಸ್ತೆ ವಿಭಜಗಕ್ಕೆ ಢಿಕ್ಕಿಯಾಗಿದೆ. ಯತಿರಾಜ್ಗೆ ಯಾವುದೇ ಗಾಯಗಳಾಗಿಲ್ಲ ಎಂದು ಸಹ ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ.
ಯತಿರಾಜ್ ತಮ್ಮ ಬಿಎಂಡಬ್ಲು ಕಾರನ್ನು ಚಾಲಿಯಿಸಿಕೊಂದು ಚಿಕ್ಕಬಳ್ಳಾಪುರ ಸಮೀಪದ ಹೆದ್ದಾರಿಯಲ್ಲಿ ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ಅಪಘಾತವಾದ ಸಂದರ್ಭದಲ್ಲಿ ಯತಿರಾಜ್ ಒಬ್ಬರೇ ಕಾರಿನಲ್ಲಿದ್ದರು ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.