Don't Miss!
- Technology
PVRನಿಂದ ಭರ್ಜರಿ ಸಿಹಿಸುದ್ದಿ; ಸಿನಿಮಾ ಪ್ರಿಯರ ಕಣ್ಣಿಗೆ ಹಬ್ಬದ ಸಂಭ್ರಮ!
- Sports
Asia Cup 2023: ಪಾಕ್ನಲ್ಲಿ ಭಾರತ ಏಷ್ಯಾಕಪ್ ಆಡದಿದ್ದರೆ, ವಿಶ್ವಕಪ್ ಆಡಲ್ಲ; ಎಚ್ಚರಿಕೆ ನೀಡಿದ ಪಿಸಿಬಿ
- Automobiles
ಸೆಲ್ಟೋಸ್ನ ಗೇರ್ಬಾಕ್ಸ್ನಲ್ಲಿ ದೋಷ ಕಂಡು ಬಂದಾಗ ಉಚಿತವಾಗಿ ಬದಲಾಯಿಸಿ ಕೊಟ್ಟ ಕಿಯಾ
- News
ಬರಲಿವೆ ಎಲಿವೇಟೆಡ್ ಇಂಟರ್ಸಿಟಿ ಸೆಮಿ-ಹೈಸ್ಪೀಡ್ ರೈಲುಗಳು: ಭಾರತ ಹಾಗೂ ಕರ್ನಾಟಕದ ಯಾವ ನಗರಗಳ ನಡುವೆ ಸಂಚಾರ?
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Finance
Twitter: ಟ್ವಿಟ್ಟರ್ನಲ್ಲಿ ಗೋಲ್ಡ್ ಬ್ಯಾಡ್ಜ್ ಉಳಿಸಿಕೊಳ್ಳಬೇಕಾದರೆ ಇಷ್ಟು ಮೊತ್ತ ಪಾವತಿಸಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
30 ವರ್ಷದಿಂದ ಬಲ್ಲೆ ಆದರೂ ಅರ್ಥವಾಗದ ಮನುಷ್ಯ: ರವಿ ಬೆಳಗೆರೆ ನಿಧನಕ್ಕೆ ಜಗ್ಗೇಶ್ ಸಂತಾಪ
ಖ್ಯಾತ ಪತ್ರಕರ್ತ, ಕಾದಂಬರಿಕಾರ, ನಟ ರವಿ ಬೆಳಗೆರೆ ಇಂದು ಬೆಳಿಗ್ಗೆ ಹೃದಯಾಘಾತದಿಂದ ಅಸುನೀಗಿದ್ದಾರೆ. ರವಿ ಬೆಳಗೆರೆ ನಿಧನಕ್ಕೆ ವಿವಿಧ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಚಿತ್ರರಂಗದ ಜೊತೆ ಉತ್ತಮ ನಂಟು ಹೊಂದಿದ್ದ ರವಿ ಬೆಳಗೆರೆ ಹಲವರಿಗೆ ಆಪ್ತರಾಗಿದ್ದರು.
ರವಿ ಬೆಳಗೆರೆ ಸಾವಿಗೆ ಹಲವು ಸಿನಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ನಟ ಸುದೀಪ್, ಜಗ್ಗೇಶ್, ಯೋಗರಾಜ್ ಭಟ್, ಕವಿರಾಜ್, ಸಿಂಪಲ್ ಸುನಿ ಸೇರಿದಂತೆ ಅನೇಕರು ರವಿ ಬೆಳಗೆರೆ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ನಟ ಜಗ್ಗೇಶ್ ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸಿದ್ದಾರೆ.
ರವಿ
ಬೆಳಗೆರೆ
ನಿಧನಕ್ಕೆ
ಯೋಗರಾಜ್
ಭಟ್
ಹಾಗೂ
ಇತರರ
ಸಂತಾಪ
'ಯಾರಿಗೂ ಅರ್ಥವಾಗದ ಮನುಷ್ಯ. ಒಮ್ಮೆ ಈತನ ಮಾತು ಸರಿ ಅನಿಸುತ್ತದೆ. ಕೆಲವೊಮ್ಮೆ ಬೇಕಿತ್ತಾ ಈ ಮಾತು ಅನಿಸುತ್ತದೆ. 30 ವರ್ಷದಿಂದ ಬಲ್ಲೆ ಆದರೂ ನನಗೆ ಅರ್ಥವಾಗದ ಮನುಷ್ಯ. ಸಾಮಾನ್ಯ ಅಸಮಾನ್ಯ ಆದದ್ದು ಮಾತ್ರ ಅನುಸರಣೀಯ. ರವಿ ರವರ ಖಾಸಬಾತ್ ಬರವಣಿಗೆ ನನ್ನ ಅಚ್ಚುಮೆಚ್ಚು. ನಿಮ್ಮ ಆತ್ಮಕ್ಕೆ ಶಾಂತಿ' ಎಂದು ಬರೆದುಕೊಂಡಿದ್ದಾರೆ.
ನಿರ್ದೇಶಕ ಯೋಗರಾಜ್ ಭಟ್ ಪ್ರಾರ್ಥನ ಶಾಲೆಯ ಬಳಿ ರವಿ ಬೆಳಗೆರೆ ಅಂತಿಮ ದರ್ಶನ ಪಡೆದಿದ್ದಾರೆ. ಆ ನಂತರ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಯೋಗರಾಜ್ ಭಟ್, 'ಇದು ರವಿ ಅವರ ಸಾವಲ್ಲ, ಹುಟ್ಟು' ಎಂದಿದ್ದಾರೆ.
ಸಿನಿಮಾ
ಮಂದಿ
v/s
ರವಿ
ಬೆಳಗೆರೆ:
ಹಲವು
ವಿವಾದಗಳು
Recommended Video
ಫೊನಿನಲ್ಲಿ ನಾವಿಬ್ಬರು ಸದಾ ಮಾತನಾಡುತ್ತಿದ್ದೆವು. ಕೆಲವು ದಿನಗಳ ಹಿಂದಷ್ಟೆ ಸಹ ಪರಸ್ಪರ ಚರ್ಚೆ ಮಾಡಿದ್ದೆವು. ಅವರ ಆರೋಗ್ಯದ ಬಗ್ಗೆ ನಮಗೆ ಆತಂಕವಂತೂ ಇದ್ದೇ ಇತ್ತು, ಸಾವು ಬಂದು ಕರೆದಾಗ ಅದೇನಾಗ್ತದೊ ನೋಡೇ ಬಿಡೋಣ ಎಂದು ಹೊರಟು ಹೋಗಿಬಿಟ್ಟರೋ ಏನೊ? ಎಂದು ಯೋಗರಾಜ್ ಭಟ್ ಹೇಳಿದ್ದಾರೆ.