Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನನ್ನ ಹಾಸ್ಯ ಕಂಡು ಮಗುವಂತೆ ನಗುತ್ತಿದ್ದರು; ಜಯಂತಿ ಅಗಲಿಕೆಗೆ ಜಗ್ಗೇಶ್ ಭಾವುಕ
ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಇನ್ನು ನೆನಪು ಮಾತ್ರ. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಇಂದು ಬೆಳಗ್ಗೆ ಕೊನೆಯುಸಿರೆಳಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.
Recommended Video
ಜಯಂತಿ ಅವರ ನಿಧನಕ್ಕೆ ಸಿನಿಮಾ ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಹಿರಿಯ ನಟ ಜಗ್ಗೇಶ್ ಟ್ವೀಟ್ ಮಾಡಿ ಭಾವುಕರಾಗಿದ್ದಾರೆ. ಕೆಲವೊಮ್ಮೆ ನನ್ನ ಹಾಸ್ಯಕಂಡು ಮಗುವಂತೆ ನಗುತ್ತಿದ್ದರು. ಹೋದ ಅನೇಕ ಹಿರಿನಟರ ಸಾಲಿಗೆ ಜಯಮ್ಮ ಸೇರಿಬಿಟ್ಟರು. ನಿಮ್ಮ ಆತ್ಮ ಶಾರದೆಯಲ್ಲಿ ಲೀನವಾಗಲಿ. loveyou ಅಮ್ಮ ಎಂದು ಹೇಳಿದ್ದಾರೆ.
ಈ ಬಗ್ಗೆ ಸಾಲು ಸಾಲು ಟ್ವೀಟ್ ಗಳನ್ನು ಮಾಡಿರುವ ಜಗ್ಗೇಶ್, "ಆನಂದಿಸಿ you are my favorite actor ಎಂದು ಮುತ್ತಿಕ್ಕಿದ್ದರು. ಕೆಲವೊಮ್ಮೆ ನನ್ನ ಹಾಸ್ಯಕಂಡು ಮಗುವಂತೆ ನಗುತ್ತಿದ್ದರು. ಮನಸ್ಸು ಮಗುವಂತೆ ನಡೆದ ಸಂಗತಿ ಮೆಲುಕಾಕಿ ಆನಂದಿಸುತ್ತದೆ. ಇಂದು ಆ ಮಹಾನಟಿ ಇಲ್ಲಾ ಎಂದಾಗ ಮನಸ್ಸಿಗೆ ನೋವಾಯಿತು. ಹೋದ ಅನೇಕ ಹಿರಿನಟರ ಸಾಲಿಗೆ ಜಯಮ್ಮ ಸೇರಿಬಿಟ್ಟರು. ನಿಮ್ಮ ಆತ್ಮ ಶಾರದೆಯಲ್ಲಿ ಲೀನವಾಗಲಿ. loveyou ಅಮ್ಮ" ಎಂದಿದ್ದಾರೆ.
"ಸಿಕ್ಕಿತು ಆಗ ನನ್ನ ಸಿನಿಮಾ ಪಯಣ ಅವರ ಜೊತೆ ಹಂಚಿಕೊಂಡ ಸಮಯ ಮರೆಯಲಾಗದ ಕ್ಷಣ. ಅವರಿಗೆ ನಾನು ರೇಗಿಸಿದ್ದು ಜಯಮ್ಮ ದೊರದ ಬೆಟ್ಟ ಚಿತ್ರದಲ್ಲಿ ನಿಮ್ಮ ನೋಡಿ ಈಗ ಅನ್ನಿಸುತ್ತದೆ ಅಯ್ಯೋ ದೇವರೆ ಇಂದು ನಾಯಕ ನಟ ಆಗುವ ಬದಲು ದೂರದ ಬೆಟ್ಟದ ಸಮಯ ಆಗಿದ್ದರೆ ಎಂಥ ಅದ್ಭುತ ಇರುತ್ತಿತ್ತು ಎಂದಾಗ ನಾಚಿ ನೀರಾಗಿದ್ದರು ಹಾಗು ಕೋಲು ಹಿಡಿದು ಅಟ್ಟಾಡಿಸಿ ನಕ್ಕು" ಎಂದು ಬರೆದುಕೊಂಡಿದ್ದಾರೆ.
"ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗು ಜಯಂತಿ ಅಮ್ಮ. ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರ ನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ. ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯಕಳೆವ ಅವಕಾಶ" ಎಂದಿದ್ದಾರೆ.