Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವಲ್ಪ ವ್ಯತ್ಯಾಸವಾದರು ಯಾರು ನಿಮ್ಮ ಸಹಾಯಕ್ಕೆ ಬರಲ್ಲ; ಜಗ್ಗೇಶ್ ಎಚ್ಚರಿಕೆ
ನವರಸನಾಯಕ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಟ. ಸಾಕಷ್ಟು ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿರುವ ಜಗ್ಗೇಶ್ ಕೊರೊನಾ ವಿಚಾರದಲ್ಲಿ ಹರಿದಾಡುತ್ತಿರುವ ಫೇಕ್ ವಿಡಿಯೋಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇತ್ತೀಚಿಗೆ ಮಾಧ್ಯಮದಲ್ಲಿ ಯುವತಿಯೋರ್ವಳು, ಕೊರೊನಾದಿಂದ ತನ್ನ ತಂದೆಯನ್ನು ಕಳೆದುಕೊಂಡ ನೋವನ್ನು ಹೇಳಿಕೊಂಡಿದ್ದಾರೆ. ಯುವತಿಯ ತಂದೆಯ ಚಿಕಿತ್ಸೆಗೆ ಆಸ್ಪತ್ರೆ ಸಿಗದೆ ಪರದಾಡಿ ಕೊನೆಗೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಯವರೂ ಸರಿಯಾದ ಚಿಕಿತ್ಸೆ ನೀಡದೆ ತಂದೆಯನ್ನು ಕೊಲೆ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಯಾವ ಚಿಕಿತ್ಸೆ ನೀಡುತ್ತಾರೆ ತಿಳಿಯುತ್ತಿಲ್ಲ, ಪಾರದರ್ಶಕ ವ್ಯವಸ್ಥೆ ಆಗಲಿ; ನಟ ಜಗ್ಗೇಶ್
ಈ ವಿಡಿಯೋದ ಕೊನೆಯಲ್ಲಿ ವೈದ್ಯರು ರೋಗಿಗಳನ್ನು ಕೊಲೆ ಮಾಡುತ್ತಿರುವ ದೃಶ್ಯಗಳನ್ನು ಎಡಿಟ್ ಮಾಡಿ ಸೇರಿಸಲಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಗ್ಗೇಶ್ ಜಾಲತಾಣಕ್ಕೆ ಅದರದೆ ಕಾನೂನಿದೆ, ಒಂದು ವೇಳೆ ಸುಳ್ಳಾದರೆ ಕಾನೂನಿನ ಕುಣಿಕೆ ನಿಮ್ಮ ಬಳಿ ಬರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
'ದಯವಿಟ್ಟು ಹಿರಿಯನಾಗಿ ಸಲಹೆ Factcheck ಮಾಡದೆ ಇಂಥ ವೀಡಿಯೋ share ಮಾಡದಿರಿ. ಒಂದು ವೇಳೆ ಸುಳ್ಳಾಗಿದ್ದರೆ ಕಾನೂನಿನ ಕುಣಿಕೆ ನಿಮ್ಮ ಬಳಿ ಬರುತ್ತದೆ. ಜಾಲತಾಣಕ್ಕೆ ಅದರದೆ ಕಾನೂನಿದೆ. ಸ್ವಲ್ಪ ವ್ಯತ್ಯಾಸವಾದರು ಯಾರು ನಿಮ್ಮ ಸಹಾಯಕ್ಕೆ ಬರರು #covid ಸಮಯದಲ್ಲಿ #caseಬಿದ್ದರೆ ಬಹಳ ಕಷ್ಟಪಡಬೇಕಾಗುತ್ತೆ. ನಿಮ್ಮ ಒಳಿತಿಗೆ ನನ್ನ ಸಲಹೆ ಸಹೋದರ' ಎಂದು ಹೇಳಿದ್ದಾರೆ.
Recommended Video
ಜಗ್ಗೇಶ್ ಮಾತಿಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಇನ್ನು ಕೆಲವರು ಉತ್ತಮ ಸಲಹೆ ಎಂದು ಹೊಗಳುತ್ತಿದ್ದಾರೆ. ಜಗ್ಗೇಶ್ ಸದಾ ಒಂದಲ್ಲೊಂದು ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಕೊರೊನಾ ರೋಗಿ ಅಡ್ಮಿಟ್ ಆದ 2/3ದಿನಕ್ಕೆ ಸಾವು ಸಂಭವಿಸುತ್ತಿದೆ (ಸ್ವಂತ ಅನುಭವ). ಯಾವ ಚಿಕಿತ್ಸೆ ನೀಡುತ್ತಾರೆ ಬಂಧುಗಳಿಗೆ ಹೊರಗೆ ತಿಳಿಯದು. ಸಾವಾಗಿದೆ ಎಂದು ತಿಳಿಸುತ್ತಾರೆ ಮುಖಸಹಿತ ನೋಡಲಾಗದು. ಆಸ್ಪತ್ರೆಯಲ್ಲಿ ಪಾರದರ್ಶಕ ವ್ಯವಸ್ಥೆ ಆಗಲಿ ಎಂದು ಸಿಎಂಗೆ ಮನವಿ ಮಾಡಿ ಟ್ವೀಟ್ ಮಾಡಿದ್ದರು.