Don't Miss!
- Automobiles Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- News Water Crisis: ಜಲಕ್ಷಾಮ ತಡೆಗೆ ಜಲಸಂರಕ್ಷಣೆಯೇ ಪರಿಹಾರ: ಎಚ್ಚೆತ್ತುಕೊಳ್ಳುತ್ತಾ ಸರ್ಕಾರ?
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದಲ್ಲಿ ಹೆಸರು, ಹಣ ಗಳಿಸಿರುವ ನಟ ಜಗ್ಗೇಶ್ ಅಧ್ಯಾತ್ಮದತ್ತ ವಾಲುತ್ತಿರುವುದೇಕೆ?
ಸ್ಯಾಂಡಲ್ ವುಡ್ ನ ಹಿರಿಯ ನಟ ಜಗ್ಗೇಶ್ ಇತ್ತೀಚಿಗೆ ಅಧ್ಯಾತ್ಮದ ಕಡೆ ಹೆಚ್ಚು ಒಲವು ತೋರುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆಕ್ವೀವ್ ಆಗಿರುವ ನಟ ಜಗ್ಗೇಶ್ ಇತ್ತೀಚಿಗೆ ಅಧ್ಯಾತ್ಮದ ಬಗ್ಗೆ ಹೆಚ್ಚು ಪೋಸ್ಟ್ ಗಳನ್ನು ಶೇರ್ ಮಾಡುತ್ತಿದ್ದಾರೆ.
ಇಂದು ಚಿತ್ರರಂಗದಲ್ಲಿ ದೊಡ್ಡ ಹೆಸರು, ಹಣಗಳಿಸಿರುವ ಜಗ್ಗೇಶ್ ಈ ಸ್ಥಾನಕ್ಕೆ ಬರಲು ಸಾಕಷ್ಟು ಶ್ರಮಿಸಿದ್ದಾರೆ. ಮಧ್ಯಮವರ್ಗದ ಕುಟುಂಬದಲ್ಲಿ ಹುಟ್ಟಿ ಬೆಳೆದ ಜಗ್ಗೇಶ್ ಅಸಾಧ್ಯವಾದ ಕನಸು ಕಂಡು, ಅದನ್ನು ನನಸಾಗಿಸಿಕೊಂಡು ಇಂದು ಸಾರ್ಥಕ ಬದುಕನ್ನು ಮುನ್ನಡೆಸುತ್ತಿದ್ದಾರೆ.
'ಇಂದಿನ ಸಿನಿಮಾ ನಂಬಿ ನಿಮ್ಮ ಜೀವನ ಹಾಳು ಮಾಡಿಕೊಳ್ಳದಿರಿ'- ಜಗ್ಗೇಶ್
ಸಮಾಜದ ಆಗುಹೋಗುಗಳ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡುತ್ತಾ, ಯುವ ಜನಾಂಗಕ್ಕೆ ಉತ್ತಮ ಸಂದೇಶ ರವಾನಿಸುತ್ತಿರುವ ನಟ ಜಗ್ಗೇಶ್ ಗೆ ಅಭಿಮಾನಿಯೊಬ್ಬ ಪ್ರಶ್ನೆ ಮಾಡಿದ್ದಾರೆ. ಇತ್ತೀಚಿಗೆ ನೀವು ತುಂಬಾ ಅಧ್ಯಾತ್ಮದ ಕಡೆ ವಾಲುತ್ತಿದ್ದೀರಿ ಎಂದು ಕೇಳಿದ್ದಾರೆ.
ಅಭಿಮಾನಿಯ ಈ ಪ್ರಶ್ನೆಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲವನ್ನೂ ಕೊಟ್ಟ ಕರ್ತನಿಗೆ ಧನ್ಯವಾದ ಅರ್ಪಿಸುವ ಕಾರ್ಯ ಮಾಡುತ್ತಿರುವುದಾಗಿ ಹೇಳಿದ್ದಾರೆ. ಅಧ್ಯಾತ್ಮದ ಬಗ್ಗೆ ಜಗ್ಗೇಶ್ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
'40ವರ್ಷ ಹಿಂದೆ ಮಧ್ಯಮವರ್ಗದ ಮನೆಯಲ್ಲಿ ಹುಟ್ಟಿ ಅಸಾಧ್ಯವಾದ ಕನಸು ಕಂಡು ಆ ಕನಸು ನನಸಾಗಿ ಬಯಸಿದ್ದು ಪಡೆದು. ತನ್ನ ಹೊಟ್ಟೆಗೆ ಚಿಂತಿಸುತ್ತಿದ್ದವರಿಗೆ ನಂಬಿದವರಿಗೂ ಹೊಟ್ಟೆ ತುಂಬಿಸೊ ಶಕ್ತಿ ಪಡೆದು ತಂದೆ-ತಾತನಾಗಿ ಸಾರ್ಥಕ ಬದುಕು ಪಡೆದ ಮೇಲೆ, ಇದನ್ನೆಲ್ಲಾಕೊಟ್ಟ ಕರ್ತನಿಗೆ ಧನ್ಯವಾದ ಅರ್ಪಿಸುವ ಕಾರ್ಯ ಮಾಡುತ್ತಿರುವೆ. ಆ ಧನ್ಯವಾದವೇ ಆಧ್ಯಾತ್ಮಿಕ ದಾರಿ' ಎಂದು ಹೇಳಿದ್ದಾರೆ.
ಸುಮಾರು ನಾಲ್ಕು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರೀಯರಾಗಿರುವ ನಟ ಜಗ್ಗೇಶ್ 120ಕ್ಕು ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ನವರಸ ನಾಯಕನಾಗಿ ವಿಭಿನ್ನ ಶೈಲಿಯ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾ ಕನ್ನಡ ಚಿತ್ರ ಪ್ರೇಮಿಗಳ ಮನದಲ್ಲಿ ಶಾಶ್ವತ ಜಾಗಪಡೆದಿದ್ದಾರೆ.
Recommended Video
ಸದ್ಯ ಸಿನಿಮಾಗಳ ಜೊತೆಗೆ ಈಗ ಕಿರುತೆರೆಯಲ್ಲೂ ಬ್ಯುಸಿಯಾಗಿದ್ದಾರೆ ನಟ ಜಗ್ಗೇಶ್. ಸದ್ಯ ತೋತಾಪುರಿ ಸಿನಿಮಾ ಮಾಡಿ ಮುಗಿಸಿರುವ ಜಗ್ಗೇಶ್ ರಂಗನಾಯಕ ಸಿನಿಮಾದಲ್ಲಿ ನಿರತರಾಗಿದ್ದಾರೆ. ಜಗ್ಗೇಶ್ ಕೊನೆಯದಾಗಿ ಕಾಳಿದಾಸ ಕನ್ನಡ ಮೇಸ್ಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.