Don't Miss!
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- News ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ: ಒಂದು ಟ್ವೀಟ್ಗೆ ಸಿಎಂ ಜವಾಬ್ದಾರಿ ಮುಗಿಯಿತೇ?: ಮಾಜಿ ಸಿಎಂ
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರಾಧ್ಯ ದೈವ ರಾಜ್ಕುಮಾರ್ ಬಗ್ಗೆ ಜಗ್ಗೇಶ್ ಭಾವುಕ ಮಾತು
ಜಗ್ಗೇಶ್ ಮಾತಿಗೆ ಕೂತರೆ, ಹಾಸ್ಯ, ಭಾವುಕತೆ, ಅಧ್ಯಾತ್ಮ, ರಾಜಕೀಯ, ಪ್ರಚಲಿತ ವರ್ತಮಾನ, ಸಿನಿಮಾ ರಂಗದ ಹಿಂದು-ಮುಂದು ಎಲ್ಲದರ ಬಗ್ಗೆ ಚರ್ಚೆಯಾಗುತ್ತದೆ. ಅವರ ಆರಾಧ್ಯ ದೈವ ರಾಜ್ಕುಮಾರ್ ಬಗ್ಗೆ ಮಾತನಾಡದೆ ಜಗ್ಗೇಶ್ ಮಾತು ಮುಗಿಯದು.
Recommended Video
ಜಗ್ಗೇಶ್ ಚಿತ್ರರಂಗಕ್ಕೆ ಬಂದು 40 ವರ್ಷ ಪೂರೈಸಿದ ಸಂತಸ ಹಂಚಿಕೊಳ್ಳಲೆಂದು ಜಗ್ಗೇಶ್ ಇಂದು ಮಾಧ್ಯಮಿತ್ರರೊಂದಿಗೆ ಸಂವಾದ ಹಮ್ಮಿಕೊಂಡಿದ್ದರು. ಸಂವಾದದಲ್ಲಿ ಜಗ್ಗೇಶ್ ಮಾತಿನ ಲಹರಿ ಅಲ್ಲಿ-ಇಲ್ಲಿ ಹರಿದು ಕೊನೆಗೆ ರಾಜ್ಕುಮಾರ್ ಅವರ ವಿಷಯಕ್ಕೆ ಬಂತು.
'ನನ್ನ ಮೇಲೆ ರಾಜ್ಕುಮಾರ್ ಪ್ರಭಾವ ಹೆಚ್ಚಿದೆ. ನನ್ನ ಉಸಿರಲ್ಲಿಯೇ ರಾಜ್ಕುಮಾರ್ ಬೆರತು ಹೋಗಿದ್ದಾರೆ. ಅವರಿಂದ ನನ್ನ ಜೀವನದಲ್ಲಿ ಸಾಕಷ್ಟು ಪಾಠಗಳನ್ನು ನಾನು ಕಲಿತಿದ್ದೇನೆ' ಎಂದರು ಜಗ್ಗೇಶ್.
'ನಾನು ಎಷ್ಟೋ ಬಾರಿ ಗಂಟೆಗಟ್ಟಲೆ ರಾಜ್ ಅವರ ಬಳಿ ಮಾತನಾಡಿದ್ದೇನೆ. ಬೆಳಿಗ್ಗೆ 5 ರಿಂದ ರಾತ್ರಿ 11 ರ ವರೆಗೆ ಮಾತನಾಡಿದ್ದಿದೆ, ಅದ್ಯಾವುದೂ ನನಗೆ ಸರಿಯಾಗಿ ಈಗ ನೆನಪಿಲ್ಲ, ಅವರ ಬಳಿ ಹೆಚ್ಚಿಗೆ ಮಾತನಾಡುತ್ತಿದ್ದುದು ರಾಯರ ಬಗ್ಗೆ' ಎಂದಿದ್ದಾರೆ ಜಗ್ಗೇಶ್.
ನನಗೆ ಬದುಕಿನ ಹಲವು ಪಾಠಗಳನ್ನು ಡಾ.ರಾಜ್ಕುಮಾರ್ ಹೇಳಿಕೊಟ್ಟಿದ್ದಾರೆ. ರಾಜ್ ಕುಮಾರ್ ಹೇಳಿದ ಎಲ್ಲಾ ಮಾತುಗಳನ್ನೂ ಈಗಲೂ ಚಾಚೂ ತಪ್ಪದೆ ಪಾಲಿಸುತ್ತಿದ್ದೇನೆ, ಅಣ್ಣಾವ್ರು ಬೆಳಿಗ್ಗೆ ಎದ್ದು ಸಂಧ್ಯಾವಂದನೆ ಮಾಡುತ್ತಿದ್ದರು, ಇದು ಬಹಳ ಜನಕ್ಕೆ ಗೊತ್ತಿಲ್ಲ' ಎಂದು ಹೇಳಿದರು ನಟ ಜಗ್ಗೇಶ್.
ಡಾ.ರಾಜ್ಕುಮಾರ್ ಬಗ್ಗೆ ಅತೀವ ಗೌರವ, ಪ್ರೀತಿ ಇಟ್ಟುಕೊಂಡಿದ್ದ ಜಗ್ಗೇಶ್, ಹಲವು ಬಾರಿ ರಾಜ್ಕುಮಾರ್ ಅವರ ಬಗ್ಗೆ ಮಾತನಾಡಿದ್ದಾರೆ. 'ರಾಜ್ ಕುಮಾರ್ ಅವರನ್ನು ಸಂತನಂತೆ, ದೇವರಂತೆ ನೋಡುತ್ತಿದ್ದೇ ನಾನು' ಎಂದು ಮತ್ತೊಮ್ಮೆ ಗೌರವ ಭಾವ ಪ್ರದರ್ಶಿಸಿದರು ಜಗ್ಗೇಶ್.