Just In
Don't Miss!
- News
ನಮ್ಮನ್ನು ಬಿಟ್ಟು ಓಡುತ್ತಿವೆ 500 ನಕ್ಷತ್ರಗಳು, ವಿಜ್ಞಾನಿಗಳಿಂದ ರಹಸ್ಯ ರಿವೀಲ್..!
- Lifestyle
"ಗುರುವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಐಪಿಎಲ್ ಬೆಟ್ಟಿಂಗ್ ಬಗ್ಗೆ ನಟ ಜಗ್ಗೇಶ್ ಟ್ವೀಟ್
ಐಪಿಎಲ್ ಬಂತು ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ. ಆದರೆ, ಮತ್ತೊಂದು ಕಡೆ ಐಪಿಎಲ್ ನಲ್ಲಿ ಬೆಟ್ಟಿಂಗ್ ದಂಧೆಯೂ ಜೋರಾಗಿ ನಡೆಯುತ್ತದೆ.
RCB ಆಟಗಾರರನ್ನು ಬೈಯಬೇಡಿ ಅಂದ್ರು ಭಟ್ರು! ಯಾಕೆ ಗೊತ್ತೆ?
ಎಷ್ಟೋ ಯುವಕರು ಐಪಿಎಲ್ ನಲ್ಲಿ ಬೆಟ್ಟಿಂಗ್ ಮಾಡಿ ತಪ್ಪು ದಾರಿ ತುಳಿಯುತ್ತಿದ್ದಾರೆ. ಅದೇ ರೀತಿ ಬೆಟ್ಟಿಂಗ್ ಮಾಡಿ ಹಾಸನದ ಲತೇಶ್ ಎಂಬ ಒಬ್ಬ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹುಡುಗನ ಘಟನೆ ಜಗ್ಗೇಶ್ ಗಮನಕ್ಕೆ ಬಂದಿದ್ದು, ಈ ಬಗ್ಗೆ ಟ್ವೀಟ್ ಮಾಡಿ ಬುದ್ದಿ ಹೇಳಿದ್ದಾರೆ.
''ನಲ್ಮೆಯ ಯುವ ಮಿತ್ರರೆ ಯಾಕೆ ಬೇಕು ಈ ಬೆಟ್ಟಿಂಗ್ ದಂಧೆ ಸಹವಾಸ!. ಕಷ್ಟಪಟ್ಟು ಓದಿ ಉತ್ತಮ ಕೆಲಸ ಪಡೆದು ವಯಸ್ಸಾದ ತಂದೆ ತಾಯಿಗೆ ಆಸರೆ ಆಗಬೇಕಾದ ನೀವುಗಳೆ ಈ ರೀತಿಯಾದರೆ ಪಾಪ. ನಿಮ್ಮನ್ನ ನಂಬಿ ತಮ್ಮ ಬೆವರಿನ ಹಣ ವ್ಯೆಯ ಮಾಡಿದಕ್ಕೆ ಇದಾ ಪಲ!ಬೇಡಿ ಜೂಜು ಮೋಜು ಮಸ್ತಿ ಹೆಣ್ಣು ಅಲ್ಲಾ ಜೀವನ! ಅದಕ್ಕಿಂತ ಶ್ರೇಷ್ಟ ಮನುಜನ್ಮ! ಮಕ್ಕಳೆ ಎಚ್ಚರ ಬದುಕಿಗಾಗಿ!'' ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ನಲ್ಮೆಯ ಯುವಮಿತ್ರರೆ ಯಾಕೆ ಬೇಕು ಈ ಬೆಟ್ಟಿಂಗ್ ದಂಧೆ ಸಹವಾಸ!
— Chowkidar🙏ನವರಸನಾಯಕ ಜಗ್ಗೇಶ್ (@Jaggesh2) April 19, 2019
ಕಷ್ಟಪಟ್ಟು ಓದಿ ಉತ್ತಮ ಕೆಲಸಪಡೆದು
ವಯಸ್ಸಾದ ತಂದೆತಾಯಿಗೆ ಆಸರೆ ಆಗಬೇಕಾದ ನೀವುಗಳೆ ಈ ರೀತಿಯಾದರೆ ಪಾಪ ನಿಮ್ಮನ್ನ ನಂಬಿ ತಮ್ಮ ಬೆವರಿನ ಹಣ ವ್ಯೆಯಮಾಡಿದಕ್ಕೆ ಇದಾ ಪಲ!ಬೇಡಿ ಜೂಜು ಮೋಜು ಮಸ್ತಿ
ಹೆಣ್ಣು ಅಲ್ಲಾ ಜೀವನ!
ಅದಕ್ಕಿಂತ ಶ್ರೇಷ್ಟ ಮನುಜನ್ಮ!
ಮಕ್ಕಳೆ ಎಚ್ಚರ ಬದುಕಿಗಾಗಿ! https://t.co/JPyNsbFHd2
ಪ್ರತಿ ವರ್ಷ ಇದೇ ರೀತಿ ಐಪಿಎಲ್ ನಲ್ಲಿ ಬೆಟ್ಟಿಂಗ್ ಮಾಡಿ ಎಷ್ಟೋ ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜಗ್ಗೇಶ್ ಮಾತಾದರೂ ಕೇಳಿ ಬೆಟ್ಟಿಂಗ್ ಮಾಡಬೇಡಿ ಎಂದು ನಾವು ಕೇಳಿಕೊಳ್ಳುತ್ತಿದ್ದೇವೆ.