Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐಪಿಎಲ್ ಬೆಟ್ಟಿಂಗ್ ಬಗ್ಗೆ ನಟ ಜಗ್ಗೇಶ್ ಟ್ವೀಟ್
ಐಪಿಎಲ್ ಬಂತು ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ. ಆದರೆ, ಮತ್ತೊಂದು ಕಡೆ ಐಪಿಎಲ್ ನಲ್ಲಿ ಬೆಟ್ಟಿಂಗ್ ದಂಧೆಯೂ ಜೋರಾಗಿ ನಡೆಯುತ್ತದೆ.
RCB ಆಟಗಾರರನ್ನು ಬೈಯಬೇಡಿ ಅಂದ್ರು ಭಟ್ರು! ಯಾಕೆ ಗೊತ್ತೆ?
ಎಷ್ಟೋ ಯುವಕರು ಐಪಿಎಲ್ ನಲ್ಲಿ ಬೆಟ್ಟಿಂಗ್ ಮಾಡಿ ತಪ್ಪು ದಾರಿ ತುಳಿಯುತ್ತಿದ್ದಾರೆ. ಅದೇ ರೀತಿ ಬೆಟ್ಟಿಂಗ್ ಮಾಡಿ ಹಾಸನದ ಲತೇಶ್ ಎಂಬ ಒಬ್ಬ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹುಡುಗನ ಘಟನೆ ಜಗ್ಗೇಶ್ ಗಮನಕ್ಕೆ ಬಂದಿದ್ದು, ಈ ಬಗ್ಗೆ ಟ್ವೀಟ್ ಮಾಡಿ ಬುದ್ದಿ ಹೇಳಿದ್ದಾರೆ.
''ನಲ್ಮೆಯ ಯುವ ಮಿತ್ರರೆ ಯಾಕೆ ಬೇಕು ಈ ಬೆಟ್ಟಿಂಗ್ ದಂಧೆ ಸಹವಾಸ!. ಕಷ್ಟಪಟ್ಟು ಓದಿ ಉತ್ತಮ ಕೆಲಸ ಪಡೆದು ವಯಸ್ಸಾದ ತಂದೆ ತಾಯಿಗೆ ಆಸರೆ ಆಗಬೇಕಾದ ನೀವುಗಳೆ ಈ ರೀತಿಯಾದರೆ ಪಾಪ. ನಿಮ್ಮನ್ನ ನಂಬಿ ತಮ್ಮ ಬೆವರಿನ ಹಣ ವ್ಯೆಯ ಮಾಡಿದಕ್ಕೆ ಇದಾ ಪಲ!ಬೇಡಿ ಜೂಜು ಮೋಜು ಮಸ್ತಿ ಹೆಣ್ಣು ಅಲ್ಲಾ ಜೀವನ! ಅದಕ್ಕಿಂತ ಶ್ರೇಷ್ಟ ಮನುಜನ್ಮ! ಮಕ್ಕಳೆ ಎಚ್ಚರ ಬದುಕಿಗಾಗಿ!'' ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ನಲ್ಮೆಯ ಯುವಮಿತ್ರರೆ ಯಾಕೆ ಬೇಕು ಈ ಬೆಟ್ಟಿಂಗ್ ದಂಧೆ ಸಹವಾಸ!
— Chowkidar🙏ನವರಸನಾಯಕ ಜಗ್ಗೇಶ್ (@Jaggesh2) April 19, 2019
ಕಷ್ಟಪಟ್ಟು ಓದಿ ಉತ್ತಮ ಕೆಲಸಪಡೆದು
ವಯಸ್ಸಾದ ತಂದೆತಾಯಿಗೆ ಆಸರೆ ಆಗಬೇಕಾದ ನೀವುಗಳೆ ಈ ರೀತಿಯಾದರೆ ಪಾಪ ನಿಮ್ಮನ್ನ ನಂಬಿ ತಮ್ಮ ಬೆವರಿನ ಹಣ ವ್ಯೆಯಮಾಡಿದಕ್ಕೆ ಇದಾ ಪಲ!ಬೇಡಿ ಜೂಜು ಮೋಜು ಮಸ್ತಿ
ಹೆಣ್ಣು ಅಲ್ಲಾ ಜೀವನ!
ಅದಕ್ಕಿಂತ ಶ್ರೇಷ್ಟ ಮನುಜನ್ಮ!
ಮಕ್ಕಳೆ ಎಚ್ಚರ ಬದುಕಿಗಾಗಿ! https://t.co/JPyNsbFHd2
ಪ್ರತಿ ವರ್ಷ ಇದೇ ರೀತಿ ಐಪಿಎಲ್ ನಲ್ಲಿ ಬೆಟ್ಟಿಂಗ್ ಮಾಡಿ ಎಷ್ಟೋ ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜಗ್ಗೇಶ್ ಮಾತಾದರೂ ಕೇಳಿ ಬೆಟ್ಟಿಂಗ್ ಮಾಡಬೇಡಿ ಎಂದು ನಾವು ಕೇಳಿಕೊಳ್ಳುತ್ತಿದ್ದೇವೆ.