Don't Miss!
- Automobiles ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
- Finance ತನ್ನ ಯುಪಿಐ ಬಳಕೆದಾರರನ್ನು ನಾಲ್ಕು ಬ್ಯಾಂಕ್ಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಿದ Paytm
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರದುರ್ಗದ ಕೋಟೆ ನೋಡಿ ಬಾಲ್ಯ ನೆನಪಿಸಿಕೊಂಡ ನಟ ಜಗ್ಗೇಶ್
ನವರಸನಾಯಕ ಜಗ್ಗೇಶ್ ಇತ್ತೀಚೆಗೆ ತೋತಾಪುರಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಮೈಸೂರಿನಲ್ಲಿ ಕ್ಲೈಮ್ಯಾಕ್ಸ್ ದೃಶ್ಯ ಸೆರೆ ಹಿಡಿಯಲಾಗಿದ್ದು, ಫೋಟೋಗಳು ವೈರಲ್ ಆಗಿತ್ತು. ಈ ಸಿನಿಮಾ ಮುಗಿಸಿ ಮತ್ತೊಂದು ಚಿತ್ರದ ಚಿತ್ರೀಕರಣ ಪ್ರಾರಂಭಿಸುವ ಮೊದಲು ಜಗ್ಗೇಶ್ ಪ್ರವಾಸಕ್ಕೆ ತೆರಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸದಾ ಆಕ್ಟೀವ್ ಆಗಿರುವ ಜಗ್ಗೇಶ್ ಆಗಾಗ ಕೆಲವು ವಿಚಾರಗಳ ಬಗ್ಗೆ ಪೋಸ್ಟ್ ಗಳನ್ನು ಹಾಕುತ್ತಿರುತ್ತಾರೆ. ಇದೀಗ ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿರುವ ಬಗ್ಗೆ ಜಗ್ಗೇಶ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಬಾಲ್ಯದ ನೆನಪನ್ನು ಮೆಲುಕು ಹಾಕಿದ್ದಾರೆ.
'ಮಾರ್ಚ್ 22' ನಟ ಜಗ್ಗೇಶ್ ಜೀವನದಲ್ಲೇ ತುಂಬಾ ವಿಶೇಷವಾದ ದಿನ
ಬಾಲ್ಯದಲ್ಲಿ ಹಾಡುತ್ತಿದ್ದ ಚಿತ್ರದುರ್ಗದ ಕಲ್ಲಿನ ಕೋಟೆ, ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ...ಈ ಹಾಡನ್ನು ಚಿಕ್ಕವಯಸ್ಸಿನಲ್ಲಿ ಹಾಡಿ ಬಹುಮಾನ ಗೆದ್ದ ಸಂತಸವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್,
'ಚಿತ್ರದುರ್ಗದ ಕಲ್ಲಿನ ಕೋಟೆ. ಸಿಡಿಲಿಗು ಬೆಚ್ಚದ ಉಕ್ಕಿನ ಕೋಟೆ. ಮದಿಸಿದ ಕರಿಯ ಮದವಡಗಿಸಿದ. ಮದಕರಿನಾಯಕ ಆಳಿದ ಕೋಟೆ. ಬಾಲ್ಯದಲ್ಲಿ ಹಾಡಿ ನಾನು ಪಾರಿತೋಷಕ ಪಡೆದ ಹಾಡು. ಚಿತ್ರದುರ್ಗದ ಏಳುಸುತ್ತಿನ ಕೋಟೆ ಕಣ್ತುಂಬಿಸಿಕೊಂಡ ಕ್ಷಣ. ಮದಕರಿನಾಯಕ ನನ್ನ ಹೃದಯದಲ್ಲಿ ನಿತ್ಯನಿರಂತರ ರಾರಾಜಿಸುವ ನಾಯಕ' ಎಂದು ಬರೆದುಕೊಂಡಿದ್ದಾರೆ.
ಕೋಟೆ ವೀಕ್ಷಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. 'ಮದಕರಿನಾಯಕ ಪೂಜಿಸುತ್ತಿದ್ದ ಕಾಳಿ ವಿಗ್ರಹವೆಂದ ಸ್ಥಳಿಯರಿಂದ ತಿಳಿದು ಮೂಕವಿಸ್ಮಿತನಾದೆ. ಕ್ರೀಂ ಕ್ರೀಂ ಕ್ರೀಂ ಹುಂ ಹುಂ ಹ್ರೀಂ ಹ್ರೀಂ ದಕ್ಷಿಣ ಕಾಳಿಕ ಕಿಂಕಿಣಿ ವಿಚೈಯ್ ನಮಃ' ಎಂದು ಕಾಳಿವಿಗ್ರಹದ ಬಗ್ಗೆ ಬರೆದುಕೊಂಡಿದ್ದಾರೆ.
Recommended Video
ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ತೋತಾಪುರಿ ಮುಗಿಸಿರುವ ಜಗ್ಗೇಶ್ ರಿಲೀಸ್ಗೆ ಎದುರು ನೋಡುತ್ತಿದ್ದಾರೆ. ತೋತಾಪುರಿ ಪಾರ್ಟ್-1 ಮತ್ತು ಪಾರ್ಟ್-2 ನಲ್ಲಿ ತೆರೆಗೆ ಬರುತ್ತಿದೆ. ಇನ್ನು ರಂಗನಾಯಕ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಬೇಕಿದೆ. ಸಿನಿಮಾಗಳ ಜೊತೆಗೆ ಕಿರುತೆರೆಯಲ್ಲೂ ಜಗ್ಗೇಶ್ ಬ್ಯುಸಿಯಾಗಿದ್ದಾರೆ.