Don't Miss!
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೌನವಾಗಿರಲೋ, ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ: ಜಗ್ಗೇಶ್
ನವರಸ ನಾಯಕ ಜಗ್ಗೇಶ್ ಉಹ ಚುನಾವಣೆಗೆ ಸ್ಪರ್ಧಿಸುವ ಆಸೆಯನ್ನು ಹೊರಹಾಕಿದ್ದಾರೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆಗಿದೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆ ಮಾಜಿ ಶಾಸಕ ಮತ್ತು ನಟ ಜಗ್ಗೇಶ್ ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಜಗ್ಗೇಶ್ "ಭೈಎಲೆಕ್ಷನ್ ಬಂತು. 2019 ಕಡೆ ಘಳಿಗೆ ಅಭ್ಯರ್ಥಿಯಾದ ನಾನು ex-Mla/MLC ಆಗಿ. @narendramodi @RSS4India ತನುಮನಧನ ಕಳೆದುಕೊಂಡು. 9 ದಿನದಲ್ಲಿ 60,400ಮತ ಪಡೆದ ಅಭ್ಯರ್ಥಿ ನಾನು. ಮೌನವಾಗಿರಲೋ. ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ? ಇಲ್ಲಾ ಮೌನವಾಗಿ ತ್ಯಾಗಿಯಾಗಲೋ. ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ"ಎಂದು ಬರೆದುಕೊಂಡಿದ್ದಾರೆ.
ಮುನಿಸು ಮರೆತು ಒಂದಾದ ಹಿಟ್ ಜೋಡಿ: ಏನಾದ್ರೂ ಹಿಂಟ್ ಸಿಗ್ತಾ?
2018 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಗ್ಗೇಶ್ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಹೆಚ್ಚು ಪ್ರಚಾರ ಮಾಡದಿದ್ದರು ಜಗ್ಗೇಶ್ 59,308 ಮತಗಳನ್ನು ಪಡೆದು ಸೋತಿದ್ದರು. ಕಾಂಗ್ರೇಸ್ ನ ಎಸ್.ಟಿ ಸೋಮಶೇಖರ್ ಗೆಲುವು ದಾಖಲಿಸಿದ್ದರು.
ಅಸಮಾಧಾನದಿಂದ ಎಸ್.ಟಿ ಸೋಮಶೇಖರ್ ರಾಜಿನಾಮೆ ನೀಡಿದ್ದಾರೆ. ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಒಂದು ವೇಳೆ ಸುಪ್ರಿಂಕೋರ್ಟ್ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿದರೆ ಎಸ್.ಟಿ ಸೋಮಶೇಖರ್ ಸ್ಪರ್ಧಿಸುತ್ತಾರೆ. ಇದರಿಂದ ಟಿಕೆಟ್ ತಪ್ಪುವ ಆತಂಕವನ್ನು ಹೊರಹಾಕಿದ್ದಾರೆ ಜಗ್ಗೇಶ್ ಎಂದು ಹೇಳಲಾಗುತ್ತಿದೆ.