Don't Miss!
- Technology ಅಧಿಕ ಬ್ಯಾಟರಿ ಇರುವ ಈ ಫೋನ್ ಬೆಲೆಯಲ್ಲಿ ಇಳಿಕೆ!..ಆಫರ್ ತಿಳಿದ್ರೆ, ವಾವ್ ಅಂತೀರಾ!
- Automobiles ಮಹೀಂದ್ರಾ ಬೊಲೆರೋ ನಿಯೋ ಪ್ಲಸ್ 9-ಸೀಟರ್ ಎಸ್ಯುವಿ ಬೆಲೆ, ವಿಶೇಷತೆಗಳು!
- News April 17th Gold Price: ರಾಮನವಮಿಯ ದಿನ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಗೊತ್ತಾ..?
- Finance ರಿಲಯನ್ಸ್ ಪವರ್ ಕಂಪೆನಿಯಲ್ಲಿ ಅನಿಲ್ ಅಂಬಾನಿಯ ಜೆಎಸ್ಡಬ್ಲ್ಯುನಿಂದ 132 ಕೋಟಿ ರೂ.ಗಳ ಹೂಡಿಕೆ
- Sports ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್ಗೆ ಆಯ್ಕೆಯಾಗಬಾರದು; ಇರ್ಫಾನ್ ಪಠಾಣ್ ಹೀಗೆ ಹೇಳಿದ್ದೇಕೆ?
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮನ್ಯು ಕಾಶಿನಾಥ್ ಕಮ್ ಬ್ಯಾಕ್ ಸಿನಿಮಾ ಶುಭಾರಂಭ
7 ವರ್ಷದ ನಂತರ ನಟ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಹೊಸ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚಿಗಷ್ಟೆ ಬಂದಿತ್ತು. ಇದೀಗ ಈ ಸಿನಿಮಾದ ಶುಭಾರಂಭವಾಗಿದೆ. ಸಿನಿಮಾದ ಸ್ಕ್ರಿಪ್ಟ್ ಪೂಜೆಯನ್ನು ಸರಳವಾಗಿ ಮಾಡಲಾಗಿದೆ.
ಚಿತ್ರದ ಸ್ಕ್ರಿಪ್ಟ್ ಫೈನಲ್ ಆಗಿದ್ದು, ಅದರ ಪೂಜೆ ನಿನ್ನೆ (ಅಕ್ಟೋಬರ್ 20) ಬನಶಂಕರಿಯ ದೇವಸ್ಥಾನದಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಚಿತ್ರತಂಡ ಭಾಗಿಯಾಗಿದೆ. ಮುಂದಿನ ವಾರ ಸಿನಿಮಾದ ಟೈಟಲ್ ಘೋಷಣೆ ಮಾಡುವ ಪ್ಲಾನ್ ಇದೆಯಂತೆ. ದೊಡ್ಡ ಸ್ಟಾರ್ ನಟನಿಂದ ಟೈಟಲ್ ಅನೌನ್ಸ್ ಆಗಲಿದೆ.
ತಂದೆ ಸಾವಿನ ಬಳಿಕ ಕಾಶೀನಾಥ್ ಪುತ್ರ ಅಭಿಮನ್ಯು ಹೊಸ ಹೆಜ್ಜೆ
ಟೈಟಲ್ ಲಾಂಚ್, ಟೀಸರ್ ಲಾಂಚ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ನಂತರ ಸಿನಿಮಾ ಮುಹೂರ್ತ ನಡೆಯಲಿದೆ. ಮಡಕೇರಿಯಲ್ಲಿ ಸಿನಿಮಾದ ಫೋಟೋ ಶೂಟ್ ಮಾಡಲಿದ್ದಾರೆ. ಹೀರೋಯಿನ್ ಹಾಗೂ ಇತರ ಪಾತ್ರಗಳಿಗೆ ಆಡಿಷನ್ಸ್ ಮಾಡಲಾಗುತ್ತಿದೆ.
ಅಂದಹಾಗೆ, ಈ ಸಿನಿಮಾವನ್ನು ಕಿರಣ್ ಸೂರ್ಯ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ 'ದೇವಕಿ' ಸಿನಿಮಾದಲ್ಲಿ ಸಹ ನಿರ್ದೇಶಕರಾಗಿ ಕಿರಣ್ ಕೆಲಸ ಮಾಡಿದ್ದರು.ದರ್ಶನ ಆರ್ಟ್ ಬ್ಯಾನರ್ ನಲ್ಲಿ ನಂದೀಶ್ ಗೌಡ ಮತ್ತು ಜಿತಿನ್ ಜಿ ಪಟೇಲ್ ನಿರ್ಮಾಣ ಮಾಡುತ್ತಿದ್ದಾರೆ.
ಕಾಶೀನಾಥ್ ಕುಟುಂಬದ ಪರಿಸ್ಥಿತಿ ಈಗ ಹೇಗಿದೆ? : ಕಾಶೀ ಪುತ್ರನ ನೋವಿನ ನುಡಿಗಳಿವು!
ಕಿರಣ್ ಸೂರ್ಯ ತಮ್ಮ ಕಥೆಗೆ ತಕ್ಕ ಹೀರೋ ಎಂಬ ಕಾರಣಕ್ಕೆ ಅಭಿಮನ್ಯು ಕಾಶೀನಾಥ್ ಅವರನ್ನು ಆಯ್ಕೆ ಮಾಡಿದರಂತೆ. ಸೋಷಿಯಲ್ ಮೀಡಿಯಾದಲ್ಲಿ ಕಾಶೀನಾಥ್ ಅವರ ಫೋಟೋ ನೋಡುವ ವೇಳೆ ಅವರ ಮಗನೇ ಚಿತ್ರದ ನಾಯಕನಾಗರೇ ಹೇಗೆ ಎನ್ನುವ ಐಡಿಯಾ ನಿರ್ದೇಶಕರಿಗೆ ಬಂದಿದೆ. ಚಿತ್ರದಲ್ಲಿ ಅಭಿಮನ್ಯು ಸ್ಪೆಷಲ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಸಿನಿಮಾವಾಗಿದೆ.