Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಡಿಯೋ: ತಾನು ಓದಿದ ಶಾಲೆಯನ್ನು ಉಳಿಸುವಂತೆ ನಟ ಕಿರಣ್ ಮನವಿ
'ಹಾಗೆ ಸುಮ್ಮನೆ' ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ನಟ ಕಿರಣ್ ಶ್ರೀನಿವಾಸ್ ತಾವು ಓದಿದ ಶಾಲೆಯನ್ನು ಉಳಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರು ಪ್ರೌಢಶಾಲೆ (ಬಿಎಚ್ಎಸ್)ಯು ವಿದ್ಯಾರ್ಥಿಗಳ ದಾಖಲಾತಿ ಇಲ್ಲದ ಕಾರಣ ಮುಚ್ಚುವ ಹಂತಕ್ಕೆ ಬಂದಿದ್ದು, ಶಾಲೆಯನ್ನು ಉಳಿಸುವಂತೆ ಕಿರಣ್ ಮನವಿ ಮಾಡಿದ್ದಾರೆ.
'ನಾನು ಇಂದು ಈ ಹಂತಕ್ಕೆ ಬಂದು ನಿಂತಿರುವುದಕ್ಕೆ ಬಿಎಚ್ಎಸ್ ಶಾಲೆ ಕಾರಣ. ಆ ಶಾಲೆಯಲ್ಲಿಯೇ ನನ್ನ ಹಲವಾರು ಕನಸುಗಳು ಮೊದಲುಗೊಂಡವು. ನನ್ನ ವ್ಯಕ್ತಿತ್ವವನ್ನು ತಿದ್ದಿದ್ದು ಸಹ ಅದೇ ಶಾಲೆ ಹಾಗೂ ಅಲ್ಲಿನ ಶಿಕ್ಷಕರು' ಎಂದಿದ್ದಾರೆ ಕಿರಣ್.
'ಈಗ ಎಂಟು ಮತ್ತು ಒಂಬತ್ತನೇ ತರಗತಿಗೆ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾಗುತ್ತಿಲ್ಲವಾದ್ದರಿಂದ ಶಾಲೆಯನ್ನು ಮುಚ್ಚುವ ಯೋಚನೆ ಮಾಡಲಾಗುತ್ತಿದೆ. ಇಂಥಹಾ ಒಂದು ಒಳ್ಳೆಯ ಶಾಲೆ ಮುಚ್ಚುವುದು ಸೂಕ್ತವಲ್ಲ. ಹಾಗಾಗಿ ಪೋಷಕರು ತಮ್ಮ ಮಕ್ಕಳನ್ನು ಬಿಎಚ್ಎಸ್ ಶಾಲೆಗೆ ಸೇರಿಸಿ ಎಂದಿದ್ದಾರೆ ಕಿರಣ್.
'ಬಿಎಚ್ಎಸ್ನಲ್ಲಿ ಪಠ್ಯದ ಜೊತೆಗೆ ಇತರೆ ಕ್ರಿಯಾತ್ಮಕ, ಸೃಜನಶೀಲ ಚಟುವಟಿಕೆಗೂ ಸಾಕಷ್ಟು ಪ್ರಾಧಾನ್ಯತೆ ನೀಡುತ್ತಾರೆ ಹಾಗಾಗಿ ಈ ಶಾಲೆಗೆ ಮಕ್ಕಳನ್ನು ಸೇರಿಸಿ. ಹೌದು ನಾವೀಗ ಕೊರೊನಾ ಮಾರಿಯ ನಡುವೆ ಇದ್ದೇವೆ. ಆದರೆ ಯಾರೇ ನಿಮ್ಮ ಸ್ನೇಹಿತರು, ಸಂಬಂಧಿಗಳು ಮಕ್ಕಳನ್ನು ಎಂಟು, ಒಂಬತ್ತನೇ ತರಗತಿಗೆ ಸೇರಿಸುವ ಯೋಚನೆಯಲ್ಲಿದ್ದರೆ ಅವರಿಗೆ ಬಿಎಚ್ಎಸ್ ಶಾಲೆಯ ಬಗ್ಗೆ ಹೇಳಿ ಎಂದಿದ್ದಾರೆ ಕಿರಣ್.
Recommended Video
'ಹಾಗೇ ಸುಮ್ಮನೆ' ಸಿನಿಮಾದಲ್ಲಿ ನಟಿಸಿರುವ ಕಿರಣ್, ಕನ್ನಡ ಮಾತ್ರವಲ್ಲದೆ ಹಿಂದಿ ಸಿನಿಮಾಗಳು, ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ.