ಹಾಸ್ಯ ನಟ ಮಂಡ್ಯ ರಮೇಶ್ ಕಾರು ಅಪಘಾತ
ನಿನ್ನೆಯಷ್ಟೇ ನಟ ನೀನಾಸಂ ಸತೀಶ್ ಅವರ ಕಾರು ಅಪಘಾತವಾಗಿ, ಪ್ರಾಣಾಪಾಯದಿಂದ ಪಾರಾಗಿದ್ದರು. ಈ ದುರ್ಘಟನೆಯನ್ನ ಮರೆಯುವ ಮುಂಚೆಯೇ ಕನ್ನಡದ ಮತ್ತೋರ್ವ ನಟನ ಕಾರು ಅಪಘಾತಕ್ಕೀಡಾಗಿದೆ.
ಕಳೆದ ರಾತ್ರಿ ಶ್ರೀರಂಗಪಟ್ಟಣದಲ್ಲಿ ಹಾಸ್ಯ ನಟ ಮಂಡ್ಯ ರಮೇಶ್ ಅವರ ಕಾರು ಅಪಘಾತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಮಂಡ್ಯ ರಮೇಶ್ ಅವರೇ ಸ್ವತಃ ಕಾರು ಚಾಲನೆ ಮಾಡುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದರು. ಆದ್ರೆ, ಯಾವುದೇ ಅಪಾಯವಾಗಿಲ್ಲ. ಕಾರು ಜಖಂಗೊಂಡಿದೆ.

ಬೆಂಗಳೂರು - ಮೈಸೂರು ಹೆದ್ದಾರಿ ಬಳಿ ಘಟನೆ ಶ್ರೀರಂಗಪಟ್ಟಣ ದ ಕೆ.ಶೆಟ್ಟಿಹಳ್ಳಿ ಬಳಿ ನಡೆದ ಅವಘಡ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಮಜಾ ಟಾಕೀಸ್' ಕಾರ್ಯಕ್ರಮದ ಚಿತ್ರೀಕರಣ ಮುಗಿಸಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ.
More from Filmibeat
English summary
Film actor Mandya Ramesh has met with accident in Bengaluru-Mysuru highway. Mandya Ramesh is safe by small injuries. Accident happen near Srirangapatna. case has been registered in Srirangapatna rural police station. ಕನ್ನಡದ ಹಾಸ್ಯ ನಟ ಮಂಡ್ಯ ರಮೇಶ್ ಕಾರು ಅಪಘಾತವಾಗಿದ್ದು, ಕೂದಲೆಳೆ ಅಂತರದಲ್ಲಿ ಹಾಸ್ಯ ಕಲಾವಿದ ಪಾರಾಗಿದ್ದಾರೆ.


Click it and Unblock the Notifications











