Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅವಕಾಶ ಕೊಡಿಸುವುದಾಗಿ 'ವಠಾರ' ಧಾರಾವಾಹಿ ನಟಿಗೆ ವಂಚನೆ
Recommended Video
'ವಠಾರ', 'ಬದುಕು', 'ರಂಗೋಲಿ' ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ನಟಿ ಮಂಜುಳಮ್ಮ ಅವರಿಗೆ ಪಾತ್ರ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ನವೀನ್ ರೈ ಎನ್ನುವ ಧಾರಾವಾಹಿ ನಿರ್ದೇಶಕನಿಂದ ಹಿರಿಯ ನಟಿ ಮೋಸ ಹೋಗಿದ್ದಾರೆ.
ನವೀನ್ ರೈ ಹಿಂದಿನಿಂದಲೂ ಧಾರಾವಾಹಿಗಳಲ್ಲಿ ಮಂಜುಳಮ್ಮ ಅವರಿಗೆ ಸಣ್ಣ ಪುಟ್ಟ ಪಾತ್ರಗಳನ್ನು ಕೊಡಿಸುತ್ತಾ ಬಂದಿದ್ದ. ನಂತರ 'ಸಣ್ಣಮ್ಮನ ಅಜ್ಜಿ' ಎನ್ನುವ ಹೆಸರಿನಲ್ಲಿ ಕಿರುಚಿತ್ರ ಮಾಡಲು ಮುಂದಾಗಿದ್ದ.
ಪವರ್ಸ್ಟಾರ್ ಹೆಸರು ಬಳಸಿಕೊಂಡು ದೋಖಾ ಮಾಡಿದ ಕಿಲಾಡಿ!
ಇದೇ ವೇಳೆಯಲ್ಲಿ ಕಿರುಚಿತ್ರ ನಿರ್ಮಾಣಕ್ಕೆ ಹಣ ಬೇಕಿದ್ದ ಕಾರಣ ಮಂಜುಳಮ್ಮ ಅವರ ಬಳಿ ದೊಡ್ಡ ಸಿನಿಮಾಗಳಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ 15 ಲಕ್ಷ ಹಣ ಪಡೆದಿದ್ದ. ಹಣ ಪಡೆದು ಎಷ್ಟು ದಿನವಾದರೂ ಪತ್ತೆ ಇಲ್ಲದ ನವೀನ್ ರೈ ಅವರನ್ನು ಹುಡುಕಿಕೊಂಡು ಮಂಜುಳಮ್ಮ, ನವೀನ್ ಮನೆಯ ಬಳಿ ಹೋಗಿದ್ದಾರೆ.
ನವೀನ್ ರೈ ಯಾರಿಗೂ ಗೊತ್ತಾಗದಂತೆ ಮನೆ ಖಾಲಿ ಮಾಡಿಕೊಂಡು ಪರಾರಿ ಆಗಿರುವ ವಿಚಾರ ತಿಳಿದ ನಂತರ ಕೂಡಲೇ ಈ ಕುರಿತು ಚೆನ್ನಮ್ಮನ ಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸದ್ಯ ಪೊಲೀಸರು ನವೀನ್ ಗಾಗಿ ಹುಡುಕಾಟ ಶುರು ಮಾಡಿದ್ದಾರೆ.