Just In
Don't Miss!
- News
ಸಂಸತ್ ಕಟ್ಟಡದ ಮಹಾತ್ಮ ಗಾಂಧಿ ಪ್ರತಿಮೆ ತರಾತುರಿಯಲ್ಲಿ ಸ್ಥಳಾಂತರ
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪಂಚಭೂತಗಳಲ್ಲಿ ಲೀನವಾದ ಮಾಸ್ಟರ್ ಹಿರಣ್ಣಯ್ಯ
ರಂಗಭೂಮಿಯ ಆಸ್ತಿ ಮಾಸ್ಟರ್ ಹಿರಣ್ಣಯ್ಯ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಬನಶಂಕರಿ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ಮಾಡಲಾಯಿತು.
ಇಂದು ಸಂಜೆ 5 : 30 ರ ಸುಮಾರಿಗೆ, ಬ್ರಾಹ್ಮಣ ಸಂಪ್ರಾದಯದಂತೆ ಅಂತ್ಯಕ್ರಿಯೆ ನಡೆಯಿತು. ಮೂರು ಜನ ಪುರೋಹಿತರಿಂದ ವಿಧಿ ವಿಧಾನ ಕಾರ್ಯಗಳನ್ನು ಮಾಡಲಾಯಿತು. ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡುವ ಕಾರಣ, ಸಾಂಕೇತಿಕವಾಗಿ ಪುತ್ರ ಬಾಬು ಹಿರಣ್ಣಯ್ಯ ಅಗ್ನಿ ಸ್ಪರ್ಶ ಮಾಡಿದರು.
ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ನಟ ಸುದೀಪ್ ಸಂತಾಪ
ಮಗ ಬಾಬು ಹಿರಣ್ಣಯ್ಯ, ಶಿಷ್ಯಂದಿರು, ಸ್ನೇಹಿತರು ಹಾಗೂ ಅಭಿಮಾನಿಗಳು ಸೇರಿದಂತೆ ಸಾಕಷ್ಟು ಜನರು ಬನಶಂಕರಿ ಚಿತಾಗಾರದ ಬಳಿ ಬಂದಿದ್ದರು. ಇದಕ್ಕೂ ಮುಂಚೆ ಬನಶಂಕರಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಂಡಲಾಗಿತ್ತು.
ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಇಹಲೋಕ ತ್ಯಜಿಸಿದರು.
ಬಾಲ್ಯದಲ್ಲೇ ಹಿರಣ್ಣಯ್ಯರಿಗೆ ಡೈರೆಕ್ಷನ್ ಮಾಡಿದ್ರು ಕಿಶನ್
ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ನಟ ಸುದೀಪ್, ಪುನೀತ್ ರಾಜ್ ಕುಮಾರ್, ಜಗ್ಗೇಶ್, ದರ್ಶನ್, ಗಣೇಶ್, ರಮೇಶ್ ಅರವಿಂದ್ ಸೇರಿದಂತೆ ಸಾಕಷ್ಟು ಜನರು ಸಂತಾಪ ಸೂಚಿಸಿದ್ದಾರೆ.