Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಕನ್ನಡಕ್ಕೆ ಬಂದ 'ಮನಸೆಲ್ಲಾ ನೀನೆ' ನಟ ನಾಗೇಂದ್ರ ಪ್ರಸಾದ್
'ಮನಸೆಲ್ಲಾ ನೀನೆ' ಸಿನಿಮಾವನ್ನು ಕನ್ನಡ ಸಿನಿಪ್ರೇಮಿಗಳು ಮರೆತಿರಲಿಕ್ಕಿಲ್ಲ. ತೆಲುಗಿನಲ್ಲಿ ಹಿಟ್ ಆಗಿದ್ದ 'ಮನಸಂತಾ ನೂವೆ' ಸಿನಿಮಾದ ಕನ್ನಡ ರೀಮೇಕ್ ಆದ ಈ ಸಿನಿಮಾ ಕನ್ನಡದಲ್ಲಿಯೂ ಸಖತ್ ಹಿಟ್ ಆಗಿತ್ತು.
ಸಿನಿಮಾದ ನಾಯಕ ಪ್ರಸಾದ್ ಅಲಿಯಾಸ್ ನಾಗೇಂದ್ರ ಪ್ರಸಾದ್ ತಮ್ಮ ಅಮಾಯಕ ಭಾವದ ಅಭಿನಯ, ಅದ್ಭುತವಾದ ಡಾನ್ಸ್ ನಿಂದ ಎಲ್ಲರ ಗಮನ ಸೆಳೆದಿದ್ದರು. ಆದರೆ ಅದ್ಯಾಕೊ ಏನೊ ಕನ್ನಡದಲ್ಲಿ ಅದೇ ಅವರ ಕೊನೆಯ ಸಿನಿಮಾ ಆಗಿಬಿಟ್ಟಿತು.
ಆದರೆ ಈಗ ಅದೇ ನಾಗೇಂದ್ರ ಪ್ರಸಾದ್ ಕನ್ನಡಕ್ಕೆ ವಾಪಸ್ ಬಂದಿದ್ದಾರೆ. ಆದರೆ ಈ ಬಾರಿ ನಟನಾಗಿ ಅಲ್ಲದೆ ನಿರ್ದೇಶಕನಾಗಿ ಬಂದಿದ್ದಾರೆ. ಕನ್ನಡದಲ್ಲಿ ಸಿನಿಮಾವೊಂದನ್ನು ನಿರ್ದೇಶಿಸಲಿದ್ದಾರೆ ನಾಗೇಂದ್ರ ಪ್ರಸಾದ್.
ತಮಿಳಿನಲ್ಲಿ ಈಗಾಗಲೇ ಹಿಟ್ ಆಗಿರುವ ಕಾಮಿಡಿ-ಪ್ರೇಮಕತಾ ಸಿನಿಮಾ 'ಓಹ್ ಮೈ ಕಡವಲೆ' ಸಿನಿಮಾವನ್ನು ಕನ್ನಡಕ್ಕೆ ತರುತ್ತಿದ್ದಾರೆ ಪ್ರಸಾದ್. ನಟ-ನಟಿಯರು ಇನ್ನೂ ಅಂತಿಮವಾಗಿಲ್ಲ, ಆದರೆ ಕೆಲವು ಹೆಸರಾಂತ ನಟ-ನಟಿಯರ ಹೆಸರನ್ನು ಪಟ್ಟಿಮಾಡಿಕೊಂಡಿದ್ದಾರಂತೆ ನಾಗೇಂದ್ರಪ್ರಸಾದ್.
ತಮಿಳಿನಲ್ಲಿ ಹಿಟ್ ಸಿನಿಮಾ 'ಓಹ್ ಮೈ ಕಡವುಲೆ'
ತಮಿಳಿನಲ್ಲಿ ಓಹ್ ಮೈ ಕಡವುಲೆ ಸಿನಿಮಾದಲ್ಲಿ ಅಶೋಕ್ ಸೆಲ್ವನ್, ರಿತಿಕಾ ಸಿಂಗ್, ಶಾ ರಾ, ರಮೇಶ್ ತಾಯಿಕ್ ನಟಿಸಿದ್ದಾರೆ. ಸಿನಿಮಾದಲ್ಲಿ ವಿಜಯ್ ಸೇತುಪತಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ಅಶ್ವತ್ಥ ಮಾರಿಮುತ್ತು ನಿರ್ದೇಶಿಸಿದ್ದಾರೆ.
ನೃತ್ಯ ನಿರ್ದೇಶಕನಾಗಿ ಯಶಸ್ವಿಯಾಗಿರುವ ನಾಗೇಂದ್ರ ಪ್ರಸಾದ್
ಜೀನ್ಸ್, ಚಾಕಲೇಟ್, ಮಿನ್ನಲೆ, ಉದಯಂ ಎನ್ಎಚ್ 4 ಇನ್ನೂ ಹಲವು ಸಿನಿಮಾಗಳಿಗೆ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಪ್ರಸಾದ್, ಪ್ರಸ್ತುತ ವಿಜಯ್ ಸೇತುಪತಿ ನಟನೆಯ 'ಲಾಭಂ' ಕಂಗನಾ ನಟನೆಯ 'ತಲೈವಿ' ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ.
'ಅನುಭವ ಗಳಿಸಿದ ಬಳಿಕವೇ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದೇನೆ'
ಸಾಕಷ್ಟು ಸಿನಿಮಾಗಳಿಗೆ ನೃತ್ಯ ನಿರ್ದೇಶಕನಾಗಿ ಹಾಗೂ ಅಣ್ಣ ಪ್ರಭುದೇವಾ ನಿರ್ದೇಶಿಸುವ ಸಿನಿಮಾಗಳಿಗೆ ಸಹಾಯಕನಾಗಿ ಕೆಲಸ ಮಾಡಿದ್ದೇನೆ. ಸೂಕ್ತ ಅನುಭವ ಗಳಿಸಿದ ಬಳಿಕವೇ ನಿರ್ದೇಶನ ಆರಂಭಿಸಬೇಕು ಎಂದುಕೊಂಡಿದ್ದೆ ಈಗ ಅನುಭವ ದೊರೆತಿದ್ದು, ಮೊದಲ ಸಿನಿಮಾ ನಿರ್ದೇಶನ ಮಾಡಲು ತಯಾರಿ ಆರಂಭಿಸಿದ್ದೇನೆ ಎಂದಿದ್ದಾರೆ ನಾಗೇಂದ್ರಪ್ರಸಾದ್.
Recommended Video
ಕನ್ನಡದಲ್ಲಿ ಕೆಲವು ಸಿನಿಮಾಗಳಲ್ಲಿ ನಟನೆ
ಕನ್ನಡಿಗ ಮೂಗೂರು ಸುಂದರಂ ಮಗನಾಗಿರುವ, ಡಾನ್ಸ್ ಮಾಸ್ಟರ್ಗಳಾದ ಪ್ರಭುದೇವಾ, ರಾಜಸುಂದರಂ ಅವರುಗಳ ಕಿರಿಯ ತಮ್ಮ ಪ್ರಸಾದ್ ಕನ್ನಡದಲ್ಲಿ ಚಿತ್ರ, 123, ಮನಸೆಲ್ಲಾ ನೀನೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳಿನಲ್ಲಿ ಸಹ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ ನಾಗೇಂದ್ರ ಪ್ರಸಾದ್.