Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರೈಡರ್' ಬಿಡುಗಡೆಗೂ ಮೊದಲೇ ಮತ್ತೊಂದು ಸಿನಿಮಾಗೆ ಸಹಿ ಮಾಡಿದ ನಿಖಿಲ್
ಸ್ಯಾಂಡಲ್ ವುಡ್ ನಟ, ರಾಜಕಾರಣಿ ನಿಖಿಲ್ ಕುಮಾರ್ ಸದ್ಯ ತಂದೆಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಇತ್ತೀಚಿಗಷ್ಟೆ ನಿಖಿಲ್ ಕುಮಾರ್ ಪತ್ನಿ ರೇವತಿ ಹುಟ್ಟುಹಬ್ಬದ ದಿನ ಗರ್ಭಿಣಿ ಎನ್ನುವ ವಿಚಾರ ಬಹಿರಂಗವಾಗಿದೆ. ತಾತ ಆಗುತ್ತಿರುವ ಸಂತಸದ ವಿಚಾರವನ್ನು ಕುಮಾರಸ್ವಾಮಿ ರಿವೀಲ್ ಮಾಡಿದ್ದಾರೆ.
ಇದೇ ಸಂತಸದಲ್ಲಿ ನಿಖಿಲ್ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯುವ ನಿರ್ದೇಶಕನ ಸಿನಿಮಾದಲ್ಲಿ ನಿಖಿಲ್ ನಾಯಕನಾಗಿ ಮಿಂಚಲು ಸಿದ್ಧರಾಗಿದ್ದಾರೆ. ಹೌದು, ಮಂಜು ಅಥರ್ವ ಸಾರಥ್ಯದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾದಲ್ಲಿ ನಿಖಿಲ್ ಕಾಣಿಸಿಕೊಳ್ಳುತ್ತಿದ್ದಾರೆ.
ತಂದೆಯಾಗುತ್ತಿರುವ ನಿಖಿಲ್ ಕುಮಾರಸ್ವಾಮಿ: ಸಂಭ್ರಮದಲ್ಲಿ ಕುಟುಂಬ
ನಿರ್ದೇಶಕ ಮಂಜುಗೆ ಇದು ಚೊಚ್ಚಲ ಸಿನಿಮಾವಾದರೂ ಈಗಾಗಲೇ ಯಶ್ ನಟನೆಯ ಮಾಸ್ಟರ್ ಪೀಸ್ ಚಿತ್ರದಲ್ಲಿ ಮಂಜು ಮಾಂಡವ್ಯ ಜೊತೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಅಲ್ಲದೆ ನಿರ್ದೇಶಕ ನರ್ತನ್ ಜೊತೆ ಮಫ್ತಿ ಸಿನಿಮಾದಲ್ಲೂ ಕೆಲಸ ಮಾಡಿದ್ದಾರೆ. ಇದೀಗ ನಿಖಿಲ್ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.
ಕನ್ನಡ ಸಿನಿಮಾಗಳ ಜೊತೆಗೆ ತಮಿಳು ಸಿನಿಮಾದಲ್ಲೂ ಕೆಲಸ ಮಾಡಿದದ್ದಾರೆ ಮಂಜು ಅಥರ್ವ. ನಿಖಿಲ್ ಹೊಸ ಸಿನಿಮಾ ಪಕ್ಕಾ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಇನ್ನು ಟೈಟಲ್ ಫೈನಲ್ ಆಗಿಲ್ಲ. ಚಿತ್ರಕ್ಕೆ ಕೆವಿಎನ್ ಸಂಸ್ಥೆ ಬಂಡವಾಳ ಹೂಡುತ್ತಿದೆ.
ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸದ್ಯ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಸಿನಿಮಾ ತಂಡ ಆಗಸ್ಟ್ ತಿಂಗಳಿಂದ ಚಿತ್ರೀಕರಣ ಪ್ರಾರಂಭ ಮಾಡುವ ಸಾಧ್ಯತೆ ಇದೆ. ಅಂದಹಾಗೆ ನಿಖಿಲ್ ಸದ್ಯ ರೈಡರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದೆ. ಈಗಾಗಲೇ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ನಿಖಿಲ್ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ.
Recommended Video
ಜಾಗ್ವರ್ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಿಖಿಲ್ ಬಳಿಕ ಸೀತರಾಮ ಕಲ್ಯಾಣ ಮತ್ತು ಕುರುಕ್ಷೇತ್ರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ 4ನೇ ಸಿನಿಮಾ ಬಿಡುಗಡೆಗೂ ಮೊದಲೇ ಹೊಸ ಸಿನಿಮಾ ಘೋಷಣೆ ಮಾಡಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.