Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ನಿಂದ ಕುಟುಂಬದವರನ್ನು ಕಳೆದುಕೊಂಡ ನಟ ಪವನ್, ಸರ್ಕಾರಕ್ಕೆ ಹಾಕಿದರು ಶಾಪ
ಗಟ್ಟಿಮೇಳ ಧಾರಾವಾಹಿ ನಟ ಪವನ್ ಕುಮಾರ್ ಅವರು ಕೋವಿಡ್ನಿಂದಾಗಿ ತಮ್ಮ ಭಾವ ಹಾಗೂ ಅವವರ ತಂದೆಯನ್ನು ಕೇವಲ ಎರಡು ದಿನಗಳ ಅಂತರದಲ್ಲಿ ಸೂಕ್ತ ಸಮಯದಲ್ಲಿ ಆಸ್ಪತ್ರೆ ಬೆಡ್ ಸಿಗದೆ, ಆಮ್ಲಜನಕ ಸಿಗದೆ ಕಳೆದುಕೊಂಡಿದ್ದಾರೆ.
Recommended Video
ಆ ಭಯಾನಕ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಮಾಹಿತಿ ನೀಡಿರುವ ಪವನ್, 'ಸರ್ಕಾರ ಜನಗಳನ್ನು ಸಾಮೂಹಿಕವಾಗಿ ಕೊಲೆ ಮಾಡುತ್ತಿದೆ' ಎಂದಿದ್ದಾರೆ. ಕೋವಿಡ್ ಸೋಂಕಿತರಾಗಿದ್ದ ಪವನ್ ಅವರ ಭಾವನವರಿಗೆ ಸೂಕ್ತ ಸಮಯಕ್ಕೆ ಆಮ್ಲಜನಕ ಸಿಗದೇ ಸಾವನ್ನಪ್ಪಿದ್ದಾರೆ. ಭಾವನವರ ತಂದೆಯವರು ಸಹ ಕೋವಿಡ್ನಿಂದಾಗಿಯೇ ಮೃತಪಟ್ಟಿದ್ದಾರೆ.
'ರಾಮ ಮಂದಿರ, ಹೊಸ ಪಾರ್ಲಿಮೆಂಟು, ಎತ್ತರದ ಪ್ರತಿಮೆಗಳು ಇವುಗಳೆಲ್ಲ ನಮ್ಮಂಥಹವರ ಹೆಣಗಳ ಮೇಲೆ ಕಟ್ಟಲಾಗಿದೆ ಎನಿಸುತ್ತಿದೆ. ಇದನ್ನೆಲ್ಲಾ ನೆನಪಿಸಿಕೊಂಡರೆ ಮೈಯೆಲ್ಲಾ ಕುದಿಯುತ್ತಿದೆ' ಎಂದು ಆಕ್ರೋಶದಿಂದ ಹೇಳಿದ್ದಾರೆ ಪವನ್.
'ಸೂಕ್ತವಾದ ವ್ಯವಸ್ಥೆ ಇಲ್ಲದೆ ಈ ಮಹಾಮಾರಿಯನ್ನು ಸೋಲಿಸಲು ಸಾಧ್ಯವೇ ಇಲ್ಲ. ವೈದ್ಯಕೀಯ ಸಿಬ್ಬಂದಿಗಳು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಆದರೆ ವ್ಯವಸ್ಥೆಯೇ ಸರಿಯಿಲ್ಲದಿರುವಾಗ ರೋಗಿಗಳು ಹೆಚ್ಚಾಗುತ್ತಲೇ ಇರುತ್ತಾರೆ. ಸರ್ಕಾರ ಸೂಕ್ತವಾಗಿ ಪ್ಯಾಂಡೆಮಿಕ್ ಅನ್ನು ಮ್ಯಾನೇಜ್ ಮಾಡಬೇಕಿದೆ' ಎಂದಿದ್ದಾರೆ ಪವನ್.
ಆಮ್ಲಜನಕ ಹುಡುಕಿಕೊಂಡು ರಾತ್ರಿಯೆಲ್ಲಾ ಅಲೆದೆ: ಪವನ್
'ನಾನು ಕಣ್ಣಾರೆ ನೋಡಿದ್ದೇನೆ ಆಸ್ಪತ್ರೆಗಳಲ್ಲಿ ಬೆಡ್ಗಳಿಲ್ಲ, ಆಮ್ಲಜನಕವಿಲ್ಲ. ಆಂಬುಲೆನ್ಸ್ಗಳಲ್ಲಿ ರೋಗಿಗಳನ್ನು ಇಟ್ಟುಕೊಂಡು ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗುತ್ತಿದ್ದಾರೆ. ಸ್ವತಃ ನಾನೇ ಭಾವನಿಗೆ ಆಮ್ಲಜನಕ ಅರೆಂಜ್ ಮಾಡಲು ರಾತ್ರಿಯೆಲ್ಲ ಬೀದಿಗಳಲ್ಲಿ ಅಲೆದಿದ್ದೇನೆ' ಎಂದಿದ್ದಾರೆ ಪವನ್.
ರೆಮ್ಡಿಸಿವಿರ್ಗಳನ್ನು ರಫ್ತು ಮಾಡಿದೆ ಸರ್ಕಾರ: ಪವನ್
'ಜನರ ಜೀವ ಉಳಿಸುವ ರೆಮ್ಡಿಸಿವರ್ ಅನ್ನು ಬೇರೆ ದೇಶಕ್ಕೆ ರಫ್ತು ಮಾಡುತ್ತಾ ಕೂತಿದ್ದಾನೆ. ಹೌದು ಈಗ ನಿಲ್ಲಿಸಿದ್ದಾರೆ. ಆದರೂ ನಮಗೆ ಸಿಗುತ್ತಾ ಇಲ್ಲ. ಇನ್ನೂ ಎಷ್ಟು ದಿನ ಒದ್ದಾಡಬೇಕು, ಎಷ್ಟು ಜನ ಸಾಯಬೇಕು. ಈ ಹಿಂದೆ ಕೊರೊನಾ ಬಂದಾಗ ನಾವು ತಯಾರಾಗಿರಲಿಲ್ಲ, ಓಕೆ ಆದರೆ ಈಗ ಏನಾಗಿದೆ ಸರ್ಕಾರಕ್ಕೆ' ಎಂದು ಪ್ರಶ್ನಿಸಿದರು ಪವನ್.
ಸರ್ಕಾರದಿಂದಾಗಿ ಭಾವ ತೀರಿಕೊಂಡರು: ಪವನ್
'ಈ ಹಿಂದೆ 10,000 ಬೆಡ್ಗಳನ್ನು ಹಾಕಿದ್ದರಲ್ಲ ಎಲ್ಲಿ ಹೋಯಿತು ಅದು. ಸರ್ಕಾರ ಸರಿಯಾಗಿ ಮುನ್ನೆಚ್ಚರಿಕೆ ವಹಿಸಿದ್ದಿದ್ದರೆ ಈಗ ಹೀಗೆ ಆಗುತ್ತಿರಲಿಲ್ಲ. ನಮ್ಮ ಭಾವ ಬದುಕಿರುತ್ತಿದ್ದರು. ಒಂದೇ ದಿನ ಆರು ಸಾವುಗಳನ್ನು ನಾನು ನೋಡಿದೆ. ಮಾನಸಿಕವಾಗಿ ಜರ್ಜರಿತವಾಗಿ ಹೋಗಿದ್ದೇನೆ' ಎಂದಿದ್ದಾರೆ ಪವನ್.
ಕಾಲು ಹಿಡಿಯುವ ಸ್ಥಿತಿ ನಿರ್ಮಾಣವಾಗಿದೆ: ಪವನ್
'ಪರಿಸ್ಥಿತಿ ಕೈ ಮೀರಿ ಹೋಗಿದೆ. ಒಂದು ಆಸ್ಪತ್ರೆ ಬೆಡ್ಗಾಗಿ ಒಂದು ಆಮ್ಲಜನಕದ ಸಿಲಿಂಡರ್ಗಾಗಿ ಕಾಲುಗಳನ್ನು ಹಿಡಿಯುತ್ತಿದ್ದಾರೆ ಹೊರಗೆ ಜನ. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಿ. ಯಾರೂ ಮನೆಯಿಂದ ಹೊರಗೆ ಹೋಗಬೇಡಿ'' ಎಂದಿದ್ದಾರೆ ಪವನ್.