Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಕ್ಟರ್' ಆದ ನವೀನ್ ಕೃಷ್ಣ ಕಥೆ ಏನು?
ಎಲ್ಲೆಡೆ ಭಾರಿ ಪ್ರಶಂಸೆ ಗಿಟ್ಟಿಸಿಕೊಂಡ 'ಹಗ್ಗದ ಕೊನೆ' ಚಿತ್ರದ ನಂತರ ನಿರ್ದೇಶಕ ದಯಾಳ್ ಪದ್ಮನಾಭನ್ ಹಾಗೂ ನಟ ನವೀನ್ ಕೃಷ್ಣ ಅವರು ಮತ್ತೊಮ್ಮೆ ಒಂದಾಗುತ್ತಿದ್ದಾರೆ. ಇದೀಗ ಚಿತ್ರರಂಗದ ವಿಷಯವನ್ನೇ ಆರಿಸಿಕೊಂಡಿರುವ ನಿರ್ದೇಶಕ ದಯಾಳ್ ಅವರು ಚಿತ್ರರಂಗದ ಮತ್ತೊಂದು ಮಗ್ಗಲನ್ನು 'ಆಕ್ಟರ್' ಎಂಬ ಚಿತ್ರದ ಮೂಲಕ ತೋರಿಸಲು ಹೊರಟಿದ್ದಾರೆ.
ಇದೇ ಮೊದಲ ಬಾರಿಗೆ ಚಿತ್ರಲೋಕ ಡಾಟ್ ಕಾಮ್ ನ ವೀರೇಶ್ ಅವರು ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದು, 'ಆಕ್ಟರ್' ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ಚಿತ್ರಲೋಕ ಮೂವೀಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ಮೂಡಿ ಬರಲಿದೆ.
ಶೇ. 80 ರಷ್ಟು ಚಿತ್ರವನ್ನು 'ಹಗ್ಗದ ಕೊನೆ' ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಟ ನವೀನ್ ಕೃಷ್ಣ ಅವರ ಪಾತ್ರ ಆವರಿಸಿಕೊಂಡಿದ್ದು, ಚಿತ್ರದ ಕೊನೆಯ ಹಂತದಲ್ಲಿ ಸಿಹಿಕಹಿ ಗೀತಾ ನಟಿಸಿರುವ ಪಾತ್ರ ಬರಲಿದೆ. ವಿಭಿನ್ನ ಕಥಾ ಹಂದರವನ್ನು ಹೊಂದಿರುವ ಚಿತ್ರದ ಚಿತ್ರೀಕರಣ ನವೆಂಬರ್ 16 ರಿಂದ ಆರಂಭವಾಗಲಿದೆ.
ಅತ್ಯಂತ ಉಚ್ಛ ಸ್ಥಿತಿಯಲ್ಲಿರುವ ನಟನೋರ್ವ ಏಕಾಏಕಿ ಕುಸಿಯುವ ಕಥಾವಸ್ತುವನ್ನು ಚಿತ್ರಕ್ಕೆ ಬಳಸಿಕೊಳ್ಳಲಾಗಿದೆ. ಒಂದೇ ನಾಣ್ಯಕ್ಕೆ ಎರಡು ಮುಖಗಳಿರುವಂತೆ, ಒಬ್ಬ ನಟನಿಗೆ ಎರಡು ಮುಖಗಳಿರುತ್ತವೆ. ಅದನ್ನು ಈ ಚಿತ್ರದಲ್ಲಿ ಹೇಳುವುದಾಗಿ ನಿರ್ದೇಶಕ ದಯಾಳ್ ಪದ್ಮನಾಭನ್ ಹೇಳಿದ್ದಾರೆ.
ಬೆಳಿಗ್ಗೆ 6 ಘಂಟೆಯಿಂದ ಮಧ್ಯಾಹ್ನ 12ರ ವರೆಗೆ ನಡೆಯಲಿರುವ ಘಟನೆಯು ಸುಮಾರು ಎರಡೂವರೆ ಘಂಟೆ ಸಿನಿಮಾ ರೂಪದಲ್ಲಿ ಪ್ರೇಕ್ಷಕರೆದುರು ಬರಲಿದೆ. ಈಗಾಗಲೇ ಚಿತ್ರದ ಬಿಡುಗಡೆಯ ದಿನಾಂಕ ನಿಗದಿಯಾಗಿದ್ದು, ಫೆಬ್ರವರಿ 19 ರಂದು ಬಿಡುಗಡೆಯಾಗಲಿದೆ. ಸಂಗೀತ ನಿರ್ದೇಶಕ ಗೌತಮ್ ಶ್ರೀವತ್ಸ ಅವರು ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಸುರೇಶ್ ಭೈರಸಂದ್ರ ಅವರು ಕ್ಯಾಮರ ಕೈಚಳಕ ತೋರಲಿದ್ದಾರೆ.