ಕೊಡಗಿಗಾಗಿ ಮಿಡಿದ ಪ್ರಕಾಶ್ ರೈ: ಹಣದ ಜೊತೆ ವಿಶೇಷ ಯೋಜನೆಗಳ ಭರವಸೆ
ಭಾರಿ ಮಳೆಯಿಂದ ತತ್ತರಗೊಂಡಿರುವ ಕೊಡಗು ಜಿಲ್ಲೆಯನ್ನ ಮತ್ತೆ ಮೊದಲಿನಂತೆ ಮಾಡಲು ಕರ್ನಾಟಕದ ವಿವಿಧ ಭಾಗದ ಜನತೆ ನೆರವು ನೀಡುತ್ತಿದ್ದಾರೆ. ತಿನ್ನಲು ಆಹಾರ, ಬಟ್ಟೆ ಹಾಗೂ ಅಗತ್ಯ ವಸ್ತುಗಳನ್ನ ಕೊಡಗು ಜನತೆಗೆ ಕಳುಹಿಸಿ ಸಹಾಯ ಮಾಡುತ್ತಿದ್ದಾರೆ.
ಕನ್ನಡ ಸಿನಿಮಾ ನಟರು ಹಾಗೂ ಅವರ ಅಭಿಮಾನಿ ಸಂಘಗಳು ಕೂಡ ಮಲೆನಾಡಿನ ಮಕ್ಕಳ ಸಹಾಯಕ್ಕೆ ನಿಂತಿದ್ದಾರೆ. ಇದೀಗ, ಬಹುಭಾಷಾ ನಟ ಪ್ರಕಾಶ್ ರೈ ಕೊಡಗು ಜನತೆ ಹಣದ ನೆರವು ನೀಡಿದ್ದಾರೆ.

ಸದ್ಯಕ್ಕೆ 5 ಲಕ್ಷ ಹಣ ನೀಡುತ್ತಿರುವುದಾಗಿ ಖುದ್ದು ಪ್ರಕಾಶ್ ರೈ ಅವರೇ ಟ್ವಿಟ್ಟರ್ ನಲ್ಲಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ದಿನಗಳಲ್ಲಿ ಕೊಡಗು ಜಲ್ಲೆಯ ಏಳಿಗಿಗೆ ಎಲ್ಲ ರೀತಿಯಲ್ಲೂ ಬೆಂಬಲವಾಗಿರುತ್ತೇನೆ ಎಂದು ಹೇಳಿದ್ದಾರೆ.
ಜೊತೆಗೆ #justaskingfiundation ಮತ್ತು #prakashrajfiundation ಮೂಲಕ ಕೊಡಗನ್ನ ಕಟ್ಟುವ ಹಲವು ಯೋಜನೆಗಳನ್ನ ಮುಂದೆ ರೂಪಿಸುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಪ್ರಕಾಶ್ ರೈ ಅವರಂತೆ ನಟ ದರ್ಶನ್, ಸುದೀಪ್, ಗಣೇಶ್, ಶಿವರಾಜ್ ಕುಮಾರ್ ಹೀಗೆ ಕನ್ನಡದ ಹಲವು ಸಿನಿತಾರೆಯರು ಕೊಡಗಿನ ಜನತೆಗೆ ನೆರವಾಗುವಂತೆ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡು ಬೆಂಬಲ ನೀಡುತ್ತಿದ್ದಾರೆ.


Click it and Unblock the Notifications











